ಸಂಗ್ರಹ ಚಿತ್ರ 
ಸ್ವಾರಸ್ಯ

ಲೋಕಾ ಸಮರ 2019: ಪ್ರಕಾಶ್ ರೈ, ಸುಮಲತಾ ಗೆದ್ದರೆ ಇತಿಹಾಸ ಸೃಷ್ಠಿ..!

ಹಾಲಿ ಲೋಕಸಭಾ ಚುನಾವಣೆ ಹಲವು ವಿಚಾರಗಳಿಂದಾಗಿ ಭಾರಿ ಸದ್ದು ಮಾಡುತ್ತಿದ್ದು, ಈ ಪೈಕಿ ನಟರಾದ ಸಮಲತಾ ಅಂಬರೀಶ್ ಹಾಗೂ ನಟ ಪ್ರಕಾಶ್ ರೈ ಅವರ ಸ್ಪರ್ಧೆ ಕೂಡ ಪ್ರಮುಖವಾಗಿದೆ.

ಬೆಂಗಳೂರು: ಹಾಲಿ ಲೋಕಸಭಾ ಚುನಾವಣೆ ಹಲವು ವಿಚಾರಗಳಿಂದಾಗಿ ಭಾರಿ ಸದ್ದು ಮಾಡುತ್ತಿದ್ದು, ಈ ಪೈಕಿ ನಟರಾದ ಸಮಲತಾ ಅಂಬರೀಶ್ ಹಾಗೂ ನಟ ಪ್ರಕಾಶ್ ರೈ ಅವರ ಸ್ಪರ್ಧೆ ಕೂಡ ಪ್ರಮುಖವಾಗಿದೆ.
ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಸುಮಲತಾ ಅಂಬರೀಶ್ ಪಕ್ಷೇತರರಾಗಿ ಕಣಕ್ಕಿಳಿದಿದ್ದರೆ, ಇನ್ನೊಂದೆಡೆ ಪ್ರಕಾಶ್ ರೈ ಬೆಂಗಳೂರು ಕೇಂದ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಈ ಇಬ್ಬರ ಪೈಕಿ ಯಾರೇ ಗೆದ್ದರೂ ಇತಿಹಾಸ ಸೃಷ್ಟಿಯಾಗಲಿದೆ. 
ಪ್ರಕಾಶ್ ರೈ ಅಥವಾ ಸುಮಲತಾ ಈ ಬಾರಿಯ ಚುನಾವಣೆಯಲ್ಲಿ ಗೆದ್ದರೆ 52 ವರ್ಷಗಳ ನಂತರ ಪಕ್ಷೇತರ ಅಭ್ಯರ್ಥಿಯೊಬ್ಬರು ರಾಜ್ಯದಿಂದ ಸಂಸತ್ ​ಗೆ ಪ್ರವೇಶಿಸಿದಂತಾಗುತ್ತದೆ. 1967ರಲ್ಲಿ ದಿನಕರ್ ದೇಸಾಯಿ ಪಕ್ಷೇತರರಾಗಿ ನಿಂತು ರಾಜ್ಯದಿಂದ ಸಂಸತ್ ಪ್ರವೇಶಿಸಿದ್ದರು. ಅವರ ನಂತರ ಇದುವರೆಗೂ ಯಾವೊಬ್ಬ ಪಕ್ಷೇತರ ಅಭ್ಯರ್ಥಿ ಕೂಡ ಲೋಕಸಭಾ ಚುನಾವಣೆಯಲ್ಲಿ ಗೆದ್ದಿಲ್ಲ. ದಿನಕರ್ ದೇಸಾಯಿಗೂ ಮೊದಲು 1957ರಲ್ಲಿ ಸುಗಂಧಿ ಮುರುಗಪ್ಪ ಸಿದ್ದಪ್ಪ ಬಿಜಾಪುರ ಉತ್ತರ ಕ್ಷೇತ್ರದಿಂದ ಪಕ್ಷೇತರರಾಗಿ ನಿಂತು ಲೋಕಸಭೆ ಪ್ರವೇಶಿಸಿದ್ದರು. 
1951ರಲ್ಲಿ ನಡೆದ ಮೊದಲ ಸಾರ್ವತ್ರಿಕ ಚುನಾವಣೆಯಿಂದ 2014 ರ ಲೋಕಸಭಾ ಚುನಾವಣೆ ತನಕ ಕರ್ನಾಟಕದಲ್ಲಿ ಒಟ್ಟು 2,337 ಅಭ್ಯರ್ಥಿಗಳು ಪಕ್ಷೇತರರಾಗಿ ಸ್ಪರ್ಧಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT