ಸಿ.ಎನ್ ಬಾಲಕೃಷ್ಣ 
ಸ್ವಾರಸ್ಯ

ಮತ ಕೇಳಲು ಬಂದ ಶಾಸಕ ಸಿ.ಎನ್ ಬಾಲಕೃಷ್ಣರನ್ನು2.5 ಕಿ.ಮೀ ನಡೆಸಿ ಬೆವರಿಳಿಸಿದ ಗ್ರಾಮಸ್ಥರು!

ಮತ ಕೇಳಲು ಬಂದ ಸ್ಥಳೀಯ ಶಾಸಕರಿಗೆ ಗ್ರಾಮಸ್ಥರು ಹಿಗ್ಗಾಮುಗ್ಗಾ ಕ್ಲಾಸ್ ತೆಗೆದುಕೊಂಡ ಘಟನೆ ಹಾಸನ ಜಿಲ್ಲೆಯ ಹಿರೀಸಾವೆ ಹೋಬಳಿಯಲ್ಲಿ ನಡೆದಿದೆ. ..

ಹಾಸನ: ಮತ ಕೇಳಲು ಬಂದ ಸ್ಥಳೀಯ ಶಾಸಕರಿಗೆ ಗ್ರಾಮಸ್ಥರು ಹಿಗ್ಗಾಮುಗ್ಗಾ ಕ್ಲಾಸ್ ತೆಗೆದುಕೊಂಡ ಘಟನೆ ಹಾಸನ ಜಿಲ್ಲೆಯ ಹಿರೀಸಾವೆ ಹೋಬಳಿಯಲ್ಲಿ ನಡೆದಿದೆ. 
ಕೆರೆಗಳಿಗೆ ನೀರು ತುಂಬಿಸದಿದ್ದರೇ ಲೋಕಸಭಾ ಚುನಾವಣೆ ಬಹಿಷ್ಕರಿಸುತ್ತೇವೆ ಎಂದು ಪ್ರತಿಭಟಿಸುತ್ತಿರುವವರ ಸಮಾಧಾನ ಪಡಿಸಲು ಹೋದ ಶಾಸಕ ಸಿ.ಎನ್‌.ಬಾಲಕೃಷ್ಣ ಅವರನ್ನು ಏರು ಬಿಸಿಲಿನಲ್ಲಿಯೇ ಗ್ರಾಮಸ್ಥರು 2.5 ಕಿ.ಮೀ. ನಡೆಸಿ ಬೆವರಿಳಿಸಿದ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣದಲ್ಲಿ ನಡೆದಿದೆ.
ಚನ್ನರಾಯಪಟ್ಟಣ ತಾಲೂಕಿನ ದಿಡಗ ಮತ್ತು ಕಬ್ಬಳ್ಳಿ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಹತ್ತಾರು ಹಳ್ಳಿಗಳ ಜನರು, ಕೆರೆಗಳಿಗೆ ನೀರು ತುಂಬಿಸಬೇಕು. ಇಲ್ಲದಿದ್ದರೆ ಈ ಬಾರಿಯ ಲೋಕಸಭಾ ಚುನಾವಣೆ ಬಹಿಷ್ಕರಿಸುತ್ತೇವೆ ಎಂದು ಪ್ರತಿಭಟನೆ ನಡೆಸುತ್ತಿದ್ದರು.
ಈ ಸಂದರ್ಭದಲ್ಲಿ ಶಾಸಕ ಬಾಲಕೃಷ್ಣ ಪ್ರತಿಭಟನಾಕಾರರನ್ನು ಸಮಾಧಾನ ಪಡಿಸಲು ಆಗಮಿಸಿದ್ದರು. ಆಗ ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು ಕೆರೆ ನೋಡಿ ಎಂದು ಹೇಳಿದ್ದಾರೆ. ಹೀಗಾಗಿ ಶಾಸಕರು ಬಿಸಿಲಿನಲ್ಲೇ ಗ್ರಾಮಸ್ಥರೊಂದಿಗೆ 2.5 ಕಿ.ಮೀ ನಡೆದಿದ್ದಾರೆ. 
ನಂತರ ಕೆರೆಯ ಬಳಿ ಕೂತು ಮಾತುಕತೆ ನಡೆಸಿದರು. ಈ ವೇಳೆ ಗ್ರಾಮಸ್ಥರು ಕೆರೆಗಳಿಗೆ ನೀರು ತುಂಬಿಸಲು ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಶಾಸಕರನ್ನು ತರಾಟೆಗೆ ತೆಗೆದುಕೊಂಡರು.
ಈ ವೇಳೆ ಪ್ರತಿಕ್ರಿಯಿಸಿದ ಶಾಸಕ ಬಾಲಕೃಷ್ಣ, ನಾಗಮಂಗಲದ ನಾಲೆಯಿಂದ ನೀರು ತರೋ ಯೋಜನೆ ವಿಳಂಬವಾಗಿದೆ. ಈಗಾಗಲೇ ಸರ್ಕಾರ, ಉಸ್ತುವಾರಿ ಸಚಿವರು ಮತ್ತು ಸಂಬಂಧಪಟ್ಟಅಧಿಕಾರಿಗಳ ಜೊತೆ ಮಾತನಾಡಿದ್ದು, ಆದಷ್ಟುಶೀಘ್ರವೇ ಬಹುದಿನಗಳ ಸಮಸ್ಯೆ ಬಗೆಹರಿಸಲಾಗುವುದು. ಈ ಬಾರಿಯ ಚುನಾವಣೆ ನೀತಿ ಸಂಹಿತೆ ಮುಗಿದ ಕೂಡಲೇ ನೀರಿನ ಸಮಸ್ಯೆ ಬಗೆಹರಿಸುತ್ತೇವೆ ಎಂದು ಭ
ಭರವಸೆ ನೀಡಿದರು.
ಕಳೆದ ಐದು ಆರು ಚುನಾವಣೆಗಳಿಂದ ಕೂಡ ನಮ್ಮ ಭಾಗಕ್ಕೆ ಕುಡಿಯುವ ನೀರಿಗೆ ಹಾಹಾಕಾರ ವಿದೆ ಜನ ಜಾನುವಾರುಗಳು ಗೂ ಕೂಡ ನೀರಿಲ್ಲದೆ ಮರಗಳು ಒಣಗಿ ನಿಂತಿವೆ ತುಮಕೂರು ಜಿಲ್ಲೆಯ ಮುದ್ದನಹಳ್ಳಿ ನೀರಾವರಿ ಮೂಲಕ ಕೆರೆ ತುಂಬಿಸುವ ಯೋಜನೆ ಮಾಡಿಕೊಡಿ ಅಂತ ಕೇಳುತ್ತಲೇ ಬಂದಿದ್ದೇವೆ. 
ಆದರೆ ಚುನಾವಣೆ ಬಂದಾಗ ಮಾತ್ರ ಭರವಸೆಗಳನ್ನು ಕೊಡುವ ಮೂಲಕ ನಂತರದ ದಿನದಲ್ಲಿ ಸುಮ್ಮನಾಗಿರುತ್ತೀರಿ ಈ ಬಾರಿ ನಾವು ನಿಮಗೆ ಮಾಡುವುದಿಲ್ಲ ಬದಲಿಗೆ ಬಹಿಷ್ಕಾರ ಮಾಡುತ್ತೇವೆ ಅಂತ ಶಾಸಕರ ಸಮ್ಮುಖದಲ್ಲಿಯೇ ಪ್ರತಿಭಟನೆ ಮಾಡುವ ಮೂಲಕ ಗ್ರಾಮಸ್ಥರು ಕ್ಲಾಸ್ ತೆಗೆದುಕೊಂಡರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT