ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ಅಬ್ದುಲ್ ಸತ್ತರ್ 
ಸ್ವಾರಸ್ಯ

ಟಿಕೆಟ್ ಕೈಕೊಟ್ಟ ಕಾಂಗ್ರೆಸ್: ಪಾರ್ಟಿ ಆಫೀಸಿಂದ 300 ಕುರ್ಚಿ ಹೊತ್ತೊಯ್ದ ಮಹಾರಾಷ್ಟ್ರ ಶಾಸಕ!

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಸಿಗಲಿಲ್ಲ ಎಂದು ಬೇಸರಗೊಂಡು ಕಾಂಗ್ರೆಸ್ ಶಾಸಕ ...

ಔರಂಗಾಬಾದ್: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಸಿಗಲಿಲ್ಲ ಎಂದು ಬೇಸರಗೊಂಡು ಕಾಂಗ್ರೆಸ್ ಶಾಸಕ ಅಬ್ದುಲ್ ಸತ್ತರ್ ಇಲ್ಲಿನ ಸ್ಥಳೀಯ ಕಾಂಗ್ರೆಸ್ ಕಚೇರಿಯಿಂದ ಬೆಂಬಲಿಗರ ಮೂಲಕ ಸುಮಾರು 300 ಕುರ್ಚಿಗಳನ್ನು ತೆಗೆದುಕೊಂಡು ಹೋದ ಘಟನೆ ಕೇಂದ್ರ ಮಹಾರಾಷ್ಟ್ರದಲ್ಲಿ ನಡೆದಿದೆ.
ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯ ಸಿಲ್ಲೊದ್ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಬ್ದುಲ್ ಸತ್ತರ್ ತಾನು ಪಕ್ಷ ತೊರೆದಿದ್ದು ಪಾರ್ಟಿ ಆಫೀಸ್ ನಲ್ಲಿದ್ದ ಕುರ್ಚಿಗಳು ತನಗೆ ಸೇರಿದವು, ಹೀಗಾಗಿ ತೆಗೆದುಕೊಂಡು ಹೋದೆ ಎಂದು ಹೇಳುತ್ತಿದ್ದಾರೆ.
ಸ್ಥಳೀಯ ಕಾಂಗ್ರೆಸ್ ನಾಯಕರು ಎನ್ ಸಿಪಿ ಮತ್ತು ಕಾಂಗ್ರೆಸ್ ನ ಜಂಟಿ ಸಭೆಯನ್ನು ಶಾಹ್ ಗುಂಜ್ ಪ್ರದೇಶದ ಗಾಂಧಿ ಭವನದಲ್ಲಿ ಕರೆದಿದ್ದರು. ಈ ಸಭೆಗೆ ಮುನ್ನ ಶಾಸಕ ಸತ್ತರ್ ತನ್ನ ಬೆಂಬಲಿಗರೊಂದಿಗೆ ಸೇರಿ ಅಲ್ಲಿದ್ದ ಕುರ್ಚಿಯನ್ನು ಹೊತ್ತೊಯ್ದಿದ್ದಾರೆ. ನಂತರ ಸಭೆ ಎನ್ ಸಿಪಿ ಕಾರ್ಯಾಲಯದಲ್ಲಿ ನಡೆಯಿತು.
ಜಿಲ್ಲೆಯಲ್ಲಿ ಅಬ್ದುಲ್ ಸತ್ತರ್ ಓರ್ವ ಪ್ರಭಾವಿ ಕಾಂಗ್ರೆಸ್ ನಾಯಕರಾಗಿದ್ದು ಔರಂಗಾಬಾದ್ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸುವ ಇಂಗಿತ ಹೊಂದಿದ್ದರು. ಆದರೆ ಕಾಂಗ್ರೆಸ್ ಎಂಎಲ್ ಸಿ ಸುಭಾಷ್ ಜಾಂಬಾದ್ ರನ್ನು ನಿಲ್ಲಿಸಿದ್ದು ಇದರಿಂದ ಸತ್ತರ್ ನೊಂದಿದ್ದರು.
ಕಳೆದ ಮಂಗಳವಾರ ಪಾರ್ಟಿ ಮೀಟಿಂಗ್ ಇದೆ ಎಂದು ಸತ್ತರ್ ಗೆ ಗೊತ್ತಾಗಿತ್ತು. ಸಭೆ ಆರಂಭವಾಗುವ ಮುನ್ನ ಅವರ ಬೆಂಬಲಿಗರು ಬಂದು ಕುರ್ಚಿಗಳನ್ನು ತೆಗೆದುಕೊಂಡು ಹೋದರು.
ಈ ಕುರಿತು ಪಿಟಿಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಸತ್ತರ್, ಕುರ್ಚಿಗಳು ನನಗೆ ಸೇರಿದವು. ಅದನ್ನು ಕಾಂಗ್ರೆಸ್ ಸಭೆಗೆ ನೀಡುತ್ತಿದ್ದೆವು. ನಾನೀಗ ಕಾಂಗ್ರೆಸ್ ತೊರೆದಿದ್ದೇನೆ, ಹೀಗಾಗಿ ಕುರ್ಚಿಗಳನ್ನು ಹಿಂದಕ್ಕೆ ಪಡೆದಿದ್ದೇನೆ, ಅಭ್ಯರ್ಥಿಯಾಗಿ ಕಣಕ್ಕಿಳಿಯುವವರು ಪ್ರಚಾರಕ್ಕೆ ವ್ಯವಸ್ಥೆ ಮಾಡಿಕೊಳ್ಳಲಿ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

"ಕೇಸರಿ ಧರಿಸುವ ಯೋಗ ಗುರು ಸಭ್ಯತೆಯ ಎಲ್ಲಾ ಮಿತಿಗಳನ್ನು ಮೀರಿದ್ದಾರೆ": ಬಾಬಾ ರಾಮ್‌ದೇವ್ ವಿರುದ್ಧ ಕಂಗನಾ ಮತ್ತೆ ಕಿಡಿ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!