ಸಂಗ್ರಹ ಚಿತ್ರ 
ಸ್ವಾರಸ್ಯ

'ಚೌಕಿದಾರ್' ಆದ ಎಸ್‌ಪಿ, ಬಿಎಸ್‌ಪಿ ಕಾರ್ಯಕರ್ತರು: ಇದೇನು ಮೋದಿ ಪ್ರೇಮವೇ? ಇಲ್ಲಿದೆ ರೋಜಕ ಸಂಗತಿ!

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಉತ್ತರಪ್ರದೇಶದಲ್ಲಿ ಬದ್ಧ ವೈರಿಗಳಾಗಿದ್ದ ಎಸ್‌ಪಿ, ಬಿಎಸ್‌ಪಿ ಪಕ್ಷಗಳು ಇದೀಗ ಒಂದಾಗಿ ಚುನಾವಣೆ ಎದುರಿಸಿದ್ದು ಮತದಾನ ನಡೆದ ಬೆನ್ನಲ್ಲೇ ಇದೀಗ ಎಸ್‌ಪಿ, ಬಿಎಸ್‌ಪಿ...

ಮೀರತ್: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಉತ್ತರಪ್ರದೇಶದಲ್ಲಿ ಬದ್ಧ ವೈರಿಗಳಾಗಿದ್ದ ಎಸ್‌ಪಿ, ಬಿಎಸ್‌ಪಿ ಪಕ್ಷಗಳು ಇದೀಗ ಒಂದಾಗಿ ಚುನಾವಣೆ ಎದುರಿಸಿದ್ದು ಮತದಾನ ನಡೆದ ಬೆನ್ನಲ್ಲೇ ಇದೀಗ ಎಸ್‌ಪಿ, ಬಿಎಸ್‌ಪಿ ಪಕ್ಷದ ಕಾರ್ಯಕರ್ತರು ಚೌಕಿದಾರ್ ಆಗಿ ಬದಲಾಗಿದ್ದಾರೆ.
ವಿಪಕ್ಷಗಳು ಇವಿಎಂ ತಿರುಚುವಿಕೆ ಕುರಿತು ಗಂಭೀರ ಆರೋಪಗಳನ್ನು ಮಾಡುತ್ತಿದ್ದು ಇದರ ಬೆನ್ನಲ್ಲೇ ಉತ್ತರಪ್ರದೇಶದಲ್ಲಿ ಎಸ್‌ಪಿ, ಬಿಎಸ್‌ಪಿ ಕಾರ್ಯಕರ್ತರು ಮತಯಂತ್ರಗಳನ್ನು ಇಟ್ಟಿರುವ ಸ್ಟ್ರಾಂಗ್ ರೂಂಗಳ ಮೇಲೆ ಹದ್ದಿನ ಕಣ್ಣಿಯುವ ಮೂಲಕ ಚೌಕಿದಾರ್ ಆಗಿ ಬದಲಾಗಿದ್ದಾರೆ.
ಮೀರತ್ ನಲ ಪಾರ್ತಾಪುರ್ ಪ್ರದೇಶದ್ಲಲಿ ಕಾಟೈ ಮಿಲ್ ನಲ್ಲಿ ಮತಯಂತ್ರಗಳನ್ನು ಇರಿಸಲಾಗಿದೆ. ಇನ್ನು ಇವಿಎಂ ತಿರುಚುತ್ತಾರೆ ಎಂಬ ಆತಂಕದಲ್ಲಿರುವ ಎಸ್‌ಪಿ, ಬಿಎಸ್‌ಪಿ ಕಾರ್ಯಕರ್ತರು 24X7 ಮೂರು ಪಾಳಿಯಲ್ಲಿ ತಂಡದ ಕಾರ್ಯಕರ್ತರು ಕಣ್ಗಾವಳಿಟ್ಟಿದ್ದಾರೆ.
ಏಪ್ರಿಲ್ 11ರಂದು ಮೀರತ್ ಲೋಕಸಭೆ ಚುನಾವಣೆಗೆ ಮತದಾನ ನಡೆದಿತ್ತು. ಅಲ್ಲಿಂದ ಇಲ್ಲಿಯವರೆಗೂ ಎಸ್‌ಪಿ, ಬಿಎಸ್‌ಪಿ ಕಾರ್ಯಕರ್ತರು ಸ್ಟ್ರಾಂಗ್ ರೂಂ ಮೇಲೆ ಕಣ್ಣಿಟ್ಟಿದ್ದಾರೆ.
ಇದೇ ಮೇ 23ರಂದು ಲೋಕಸಭೆ ಚುನಾವಣೆ ಫಲಿತಾಂಶ ಹೊರಬೀಳಲಿದ್ದು ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವ್ಯಾಪಾರ ಒಪ್ಪಂದ ಮಾತುಕತೆ ಪುನರಾರಂಭವಾಗುತ್ತಿದ್ದಂತೆ ಅಮೆರಿಕದಿಂದ ಮಿಶ್ರ ಪ್ರತಿಕ್ರಿಯೆ

Goa nightclub fire: ಥೈಲ್ಯಾಂಡ್ ನಲ್ಲಿ ನೈಟ್ ಕ್ಲಬ್ ಮಾಲೀಕರಾದ ಸೈರಬ್- ಗೌರವ್ ಲುತ್ರಾ ಸೋದರರ ಬಂಧನ

ಹೈಕೋರ್ಟ್‌ನಲ್ಲಿ ಮುಟ್ಟಿನ ರಜೆ ಸಮರ್ಥಿಸಿಕೊಂಡ ಸರ್ಕಾರ; ವಿಚಾರಣೆ ಜನವರಿ 20 ಕ್ಕೆ ಮುಂದೂಡಿಕೆ

ಕೇಂದ್ರ ಅರಣ್ಯ ಇಲಾಖೆಯಿಂದ ಸಿಗದ ಅನುಮತಿ: ಎತ್ತಿನ ಹೊಳೆ ಯೋಜನೆ ಮತ್ತಷ್ಟು ವಿಳಂಬ

ಹೊರಟ್ಟಿ ವಿರುದ್ಧ ಭ್ರಷ್ಟಾಚಾರ ಆರೋಪ: ಯಾದವ್ ಹೇಳಿಕೆ ಬಗ್ಗೆ ತನಿಖೆಗೆ ಒತ್ತಾಯಿಸಲು ಒಗ್ಗಟ್ಟಾದ ಪರಿಷತ್ ಸದಸ್ಯರು!

SCROLL FOR NEXT