ಕಾಂಗ್ರೆಸ್ ಪ್ರಣಾಳಿಕೆ ಅಪಾಯಕಾರಿ, ಜಾರಿ ಸಾಧ್ಯವಿಲ್ಲ: ಸಚಿವ ಅರುಣ್ ಜೇಟ್ಲಿ 
ದೇಶ

ಕಾಂಗ್ರೆಸ್ ಪ್ರಣಾಳಿಕೆ ಅಪಾಯಕಾರಿ, ಜಾರಿ ಸಾಧ್ಯವಿಲ್ಲ: ಸಚಿವ ಅರುಣ್ ಜೇಟ್ಲಿ

2019ರ ಸಾರ್ವತ್ರಿಕ ಚುನಾವಣೆಗೆ ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆಯನ್ನು ಅಪಾಯಕಾರಿ ಪ್ರಣಾಳಿಕೆ ಎಂದು ಬಿಜೆಪಿ ಹೇಳಿದೆ.

ನವದೆಹಲಿ: 2019ರ ಸಾರ್ವತ್ರಿಕ ಚುನಾವಣೆಗೆ ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆಯನ್ನು ಅಪಾಯಕಾರಿ ಪ್ರಣಾಳಿಕೆ ಎಂದು ಬಿಜೆಪಿ ಹೇಳಿದೆ. 
ಪ್ರಣಾಳಿಕೆ ಬಗ್ಗೆ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ, ಕಾಂಗ್ರೆಸ್ ಪ್ರಣಾಳಿಕೆ ಅಪಾಯಕಾರಿಯಾಗಿದ್ದು ಜಾರಿಗೆ ತರುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ. 
ಕಾಂಗ್ರೆಸ್ ನ ಪ್ರಣಾಳಿಕೆ ಭಾರತವನ್ನು ಒಡೆಯುವ ಅಜೆಂಡಾ ಹೊಂದಿದೆ. ಕಾಂಗ್ರೆಸ್ ಪ್ರಣಾಳಿಕೆ ಸಿದ್ಧಪಡಿಸುವುದಕ್ಕೆ ಸಮಿತಿ ಇದ್ದರೂ ಪ್ರಣಾಳಿಕೆಯ ಕೆಲವು ಅಂಶಗಳನ್ನು ಕಾಂಗ್ರೆಸ್ ಅಧ್ಯಕ್ಷರ ಸ್ನೇಹಿತರಾದ ಭಾರತ ಭಂಜಕ ಗ್ಯಾಂಗ್ ಸಿದ್ಧಪಡಿಸಿರುವಂತಿದೆ. 
ಜಮ್ಮು-ಕಾಶ್ಮೀರದ ವಿಷಯದಲ್ಲಿ ಕಾಂಗ್ರೆಸ್ ಪ್ರಣಾಳಿಕೆಯನ್ನು ನೋಡಿದರೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಸ್ನೇಹಿತರಾದ ಭಾರತ ಭಂಜಕ ಗ್ಯಾಂಗ್ ಸಿದ್ಧಪಡಿಸಿರುವಂತಿದೆ ಎಂದು ಜೇಟ್ಲಿ ವ್ಯಂಗ್ಯವಾಡಿದ್ದಾರೆ. 
ಕಾಂಗ್ರೆಸ್ ನ ಪ್ರಣಾಳಿಕೆಯಲ್ಲಿ ಕಾಶ್ಮೀರಿ ಪಂಡಿತರ ಸ್ಥಿತಿ ಬಗ್ಗೆ ಏನನ್ನೂ ಹೇಳಿಲ್ಲ. ರಾಷ್ಟ್ರದ್ರೋಹದ ಕಾನೂನನ್ನೇ ರದ್ದುಗೊಳಿಸುವಂತಹ ಪ್ರಣಾಳಿಕೆಗೆ ಒಂದೇ ಒಂದು ಮತವೂ ಅರ್ಹವಲ್ಲ ಎಂದು ಜೇಟ್ಲಿ ಹೇಳಿದ್ದಾರೆ.
ಬಡಕುಟುಂಬಗಳಿಗೆ ಪ್ರತಿ ವರ್ಶ 72,000 ರೂಪಾಯಿ, 22 ಲಕ್ಷ ಸರ್ಕಾರಿ ಹುದ್ದೆಗಳನ್ನು ತುಂಬುವುದು, ರೈತರಿಗೆ ಪ್ರತ್ಯೇಕ ಬಜೆಟ್, ಜಿಎಸ್ ಟಿ ದರ ಪರಿಷ್ಕರಣೆ, ಕಾಶ್ಮೀರದಲ್ಲಿ ಸೇನೆಗೆ ನೀಡಿರುವ ವಿಶೇಷ ಅಧಿಕಾರವನ್ನು ಮರುಪರಿಶೀಲನೆ ಮಾಡುವುದು ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆಯ ಮುಖ್ಯಾಂಶಗಳಾಗಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

SCROLL FOR NEXT