ನಾನು ವಯಾನಾಡ್ ನಿಂದ ಸ್ಪರ್ಧಿಸಲು ಮೋದಿ ತಾರತಮ್ಯ ಕಾರಣ: ರಾಹುಲ್ ಗಾಂಧಿ! 
ದೇಶ

ನಾನು ವಯಾನಾಡ್ ನಿಂದ ಸ್ಪರ್ಧಿಸಲು ದಕ್ಷಿಣ ಭಾರತಕ್ಕೆ ಪ್ರಧಾನಿ ಮೋದಿ ತಾರತಮ್ಯ ಕಾರಣ: ರಾಹುಲ್ ಗಾಂಧಿ

ಉತ್ತರ ಪ್ರದೇಶದ ಅಮೇಥಿಯ ಜೊತೆಗೆ ಕೇರಳದ ವಯಾನಾಡ್ ನಿಂದ ಸ್ಪರ್ಧಿಸುತ್ತಿರುವುದರ ಬಗ್ಗೆ ಸ್ವತಃ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದಾರೆ.

ನವದೆಹಲಿ: ಉತ್ತರ ಪ್ರದೇಶದ ಅಮೇಥಿಯ ಜೊತೆಗೆ ಕೇರಳದ ವಯಾನಾಡ್ ನಿಂದ ಸ್ಪರ್ಧಿಸುತ್ತಿರುವುದರ ಬಗ್ಗೆ ಸ್ವತಃ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದಾರೆ. 
ಪ್ರಧಾನಿ ನರೇಂದ್ರ ಮೋದಿ ದಕ್ಷಿಣ ಭಾರತದೆಡೆಗೆ ತಾರತಮ್ಯ ತೋರುತ್ತಾರೆ. ಆದ್ದರಿಂದ  ಕೇರಳದಿಂದ ಸ್ಪರ್ಧಿಸುವುದಕ್ಕೆ ಒತ್ತಡ ಇತ್ತು. ಹಾಗಾಗಿ ಸ್ಪರ್ಧಿಸುತ್ತಿದ್ದೇನೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. 
ದಕ್ಷಿಣ ಭಾರತದ ಜನರಿಗೆ ಪ್ರಧಾನಿ ಮೋದಿ ಸರ್ಕಾರ ತಾರತಮ್ಯ ತೋರುತ್ತಿದೆ ಎಂಬ ಭಾವನೆ ಇದೆ. ದೇಶದ ಪ್ರಮುಖ ನಿರ್ಧಾರಗಳಲ್ಲಿ ದಕ್ಷಿಣ ಭಾರತದವರನ್ನು ಪರಿಗಣಿಸುತ್ತಿಲ್ಲ ಎಂಬ ಅಸಮಾಧಾನವಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಭಾರತದ ಜನತೆಗೆ ನಾವು ಅವರೊಂದಿಗೆ ಇದ್ದೇವೆ ಎಂಬ ಸಂದೇಶ ರವಾನೆ ಮಾಡಲು ವಯಾನಾಡ್ ನಿಂದ ಸ್ಪರ್ಧಿಸುತ್ತಿರುವುದಾಗಿ ರಾಹುಲ್ ಗಾಂಧಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT