ಮೊದಲ ಹಂತದ ಮತದಾನಕ್ಕೂ ಮುನ್ನ ಆರ್ ಬಿಐ ಬಡ್ಡಿ ದರ ಕಡಿತ? 
ದೇಶ

ಮೊದಲ ಹಂತದ ಮತದಾನಕ್ಕೂ ಮುನ್ನ ಆರ್ ಬಿಐ ಬಡ್ಡಿ ದರ ಕಡಿತ?

ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇದ್ದು ಈ ನಡುವೆ ಆರ್ ಬಿಐ ಬಡ್ಡಿ ದರವನ್ನು ಕಡಿಮೆ ಮಾಡುವ ಸಾಧ್ಯತೆ ಇದೆ.

ಬೆಂಗಳೂರು: ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇದ್ದು ಈ ನಡುವೆ ಆರ್ ಬಿಐ ಬಡ್ಡಿ ದರವನ್ನು ಕಡಿಮೆ ಮಾಡುವ ಸಾಧ್ಯತೆ ಇದೆ. 
ಆರ್ ಬಿಐ ರೆಪೋ ದರ ಕಡಿತಗೊಳಿಸುವುದಕ್ಕೆ ಸಂಬಂಧಿಸಿದಂತೆ ರಾಯ್ಟರ್ಸ್ ಸುದ್ದಿ ಸಂಸ್ಥೆ ಅಭಿಪ್ರಾಯ ಸಂಗ್ರಹಣೆ ಮಾಡಿದೆ.
ಆರ್ ಬಿಐ ಗೌರ್ನರ್ ಶಕ್ತಿಕಾಂತ್ ದಾಸ್ ಫೆಬ್ರವರಿ ತಿಂಗಳಲ್ಲಿ ಬಡ್ಡಿ ದರಗಳನ್ನು ಕಡಿತಗೊಳಿಸಿದ್ದರು. ಈ ಹಿನ್ನೆಲೆಯಲ್ಲಿ ಈಗಲೂ ಸಹ ಆರ್ ಬಿಐ ಬಡ್ಡಿ ದರವನ್ನು ಕಡಿತಗೊಳಿಸಲಿದೆ ಎಂಬ ನಿರೀಕ್ಷೆ ಇದೆ. ಬೆಳವಣಿಗೆ ದರ ಹಾಗೂ ಹಣದುಬ್ಬರದ ದೃಷ್ಟಿಯಲ್ಲಿ ಬಡ್ಡಿ ದರ ಇಳಿಕೆ ಮಾಡಿರುವುದನ್ನು ಆರ್ ಬಿಐ ಈ ಹಿಂದೆ ಸಮರ್ಥಿಸಿಕೊಂಡಿತ್ತು. 
ಈಗ ಎರಡನೇ ತ್ರೈಮಾಸಿಕದ್ಲಲಿ ಏಪ್ರಿಲ್ ಹಾಗೂ ಜೂನ್ ನಲ್ಲಿ ಆರ್ ಬಿಐ ನ ಎರಡು ಸಭೆ ನಡೆಯಲಿದ್ದು, ಬಡ್ಡಿ ದರ ಇಳಿಕೆ ಮಾಡಿ ನೀತಿಗಳನ್ನು ಸಡಿಲಗೊಳಿಸಲು ಆರ್ ಬಿಐ ಮೇಲೆ ಸರ್ಕಾರದ ಒತ್ತಡ ಇದೆ. ಈ ಒತ್ತಡದ ಹಿನ್ನೆಲೆಯಲ್ಲಿ ಆರ್ ಬಿಐ ಬಡ್ಡಿ ದರ ಕಡಿತಗೊಳಿಸಬೇಕಾದರೆ ಜೂನ್ ಅಥವಾ ಏಪ್ರಿಲ್ ನಲ್ಲಿ ಕಡಿತಗೊಳಿಸಬೇಕು, ಜೂನ್ ಬದಲಿಗೆ ಏಪ್ರಿಲ್ ನಲ್ಲೇ ಆರ್ ಬಿಐ ಬಡ್ಡಿ ದರವನ್ನು  ಕಡಿಮೆ ಮಾಡಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. 
ಆರ್ ಬಿಐ ಬಡ್ಡಿ ದರ ಕಡಿಮೆ ಮಾಡಿದರೆ ನಿಸಂಶಯವಾಗಿ ಅದರ ಕೀರ್ತಿಯನ್ನು ಸರ್ಕಾರ ಪಡೆಯಲಿದೆ.  ಇನ್ನು ಅರ್ಥಶಾಸ್ತ್ರಜ್ಞರು ಚುನಾವಣೆಯ ಬಗ್ಗೆಯೂ ರಾಯ್ಟರ್ಸ್ ಸುದ್ದಿ ಸಂಸ್ಥೆಯೊಂದಿಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದು, ಬಿಜೆಪಿ ಪೂರ್ಣ ಬಹುಮತ ಅಥವಾ ಬಿಜೆಪಿ ನೇತೃತ್ವದ ಎನ್ ಡಿಎ ಅಧಿಕಾರಕ್ಕೆ ಬಂದರೆ ದೇಶದ ಆರ್ಥಿಕತೆಗೆ ಅತ್ಯುತ್ತಮವಾದದ್ದು ಎಂದು ಅಭಿಪ್ರಾಯಪಟ್ಟಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

ಬಿಡದಿ ಯೋಜನೆಗೆ ಭೂಸ್ವಾಧೀನ ವಿರೋಧಿಸಿ ಜೆಡಿಎಸ್ ಪಾದಯಾತ್ರೆ: ಮಾಜಿ ಪ್ರಧಾನಿ HD ದೇವೇಗೌಡ ಭಾಗಿ

Maharashtra: ಶಾಲಾ ಹಾಸ್ಟೆಲ್‌ನಲ್ಲಿ ಭೀಕರ ದುರಂತ: ಮಲಗಿದ್ದ 6 ಬಾಲಕಿಯರಿಗೆ ಹಾವು ಕಡಿತ, ಮೂವರ ಸಾವು!