ಒಮರ್ ಅಬ್ದುಲ್ಲಾ 
ದೇಶ

ಎಎಫ್ಎಸ್ ಪಿಎ ರದ್ದು ವಿರುದ್ಧ ಕೆಲ ಕಾಂಗ್ರೆಸ್ ಸ್ನೇಹಿತರಿಂದ ಸಂಚು: ಒಮರ್ ಅಬ್ದುಲ್ಲಾ

ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರಗಳ ಕಾಯ್ದೆ(ಎಎಫ್‌ಎಸ್ ಪಿಎ) ತಿದ್ದುಪಡಿ ಭರವಸೆ ನೀಡಿದ್ದನ್ನು....

ಬಾರಾಮುಲ್ಲಾ: ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರಗಳ ಕಾಯ್ದೆ(ಎಎಫ್‌ಎಸ್ ಪಿಎ) ತಿದ್ದುಪಡಿ ಭರವಸೆ ನೀಡಿದ್ದನ್ನು ಸ್ವಾಗತಿಸಿದ ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫೆರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಅವರು, ತಡವಾಗಿಯಾದರೂ ಒಳ್ಳೆಯ ನಿರ್ಧಾರ ಎಂದಿದ್ದಾರೆ.
ಇದೇ ವೇಳೆ, ಈ ಹಿಂದೆ ಎಎಫ್ಎಸ್ ಪಿಎ ರದ್ದು ವಿರುದ್ಧ ಕೆಲ ಕಾಂಗ್ರೆಸ್ ಸ್ನೇಹಿತರು ಸಂಚು ರೂಪಿಸಿದ್ದರು ಎಂದು ಆರೋಪಿಸಿದ ಒಮರ್ ಅಬ್ದುಲ್ಲಾ, ನಾನು ಮುಖ್ಯಮಂತ್ರಿಯಾಗಿದ್ದಾಗಲೇ ಈ ವಿವಾದಿತ ಕಾಯ್ದೆ ರದ್ದುಗೊಳಿಸುವಂತೆ ಒತ್ತಾಯಿಸಿದ್ದೆ. ಆದರೆ ಕೆಲ ಕಾಂಗ್ರೆಸ್ ನಾಯಕರು ವಿರೋಧಿಸಿದ್ದರು. ಆದರೆ ಚಿದಂಬರಂ(ಮಾಜಿ ಕೇಂದ್ರ ಸಚಿವ) ಅವರು ಬೆಂಬಲಿಸಿದ್ದರು ಎಂದು ಹೇಳಿದ್ದಾರೆ.
ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಎಎಫ್ಎಸ್ ಪಿಎ ಕಾಯ್ದೆ ತಿದ್ದುಪಡಿ ಭರವಸೆ ನೀಡಿದ್ದರೆ ಅದನ್ನು ಸ್ವಾಗತಿಸುತ್ತೇನೆ. 2014ಕ್ಕೂ ಮುನ್ನವೇ ಅವರು ಈ ಕೆಲಸ ಮಾಡಬೇಕಿತ್ತು. ತಡವಾಗಿಯಾದರೂ ಉತ್ತಮ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಒಮರ್ ಅಬ್ದುಲ್ಲಾ ತಿಳಿಸಿದ್ದಾರೆ.
ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಇಂದು ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಾಶ್ಮೀರದಲ್ಲಿ ಜಾರಿ ಇರುವ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರಗಳ ಕಾಯ್ದೆ(ಎಎಫ್‌ಎಸ್ ಪಿಎ) ತಿದ್ದುಪಡಿ ಭರವಸೆ ಸೇರಿದಂತೆ ಹಲವು ಭರವಸೆಗಳನ್ನು ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT