ಸೋನಿಯಾ ಗಾಂಧಿ 
ದೇಶ

ಕಾಂಗ್ರೆಸ್ ಪ್ರಣಾಳಿಕೆ: ಸೋನಿಯಾ ಗಾಂಧಿ ತೀವ್ರ ಅಸಮಾಧಾನ!

ಲೋಕಸಭಾ ಚುನಾವಣೆಗೆ ಮೋದಿಯನ್ನು ಎದುರಿಸಲು ಮಹಾಘಟಬಂಧನ್ ರಚಿಸಿರುವ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆಯಾಗಿದ್ದು, ಸೋನಿಯಾ ಗಾಂಧಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನವದೆಹಲಿ: ಲೋಕಸಭಾ ಚುನಾವಣೆಗೆ ಮೋದಿಯನ್ನು ಎದುರಿಸಲು ಮಹಾಘಟಬಂಧನ್ ರಚಿಸಿರುವ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆಯಾಗಿದ್ದು, ಸೋನಿಯಾ ಗಾಂಧಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 
ಕಾಶ್ಮೀರದ ಸೇನಾ ಪಡೆಗೆ ನೀಡಲಾಗಿರುವ ವಿಶೇಷ ಅಧಿಕಾರವನ್ನು ಮರುಪರಿಶೀಲಿಸಿರುವ ಅಂಶಗಳನ್ನೊಳಗೊಂಡ ಕಾಂಗ್ರೆಸ್ ನ  ಪ್ರಣಾಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗಿ ಸುದ್ದಿಗೆ ಗ್ರಾಸವಾಗಿತ್ತು. ಈಗ ಸೊನಿಯಾ ಗಾಂಧಿ ಪ್ರಣಾಳಿಕೆ ಬಗ್ಗೆ ಬೇಸರ ವ್ಯಕ್ತಪಡಿಸಿ, ಪ್ರಣಾಳಿಕೆ ಮುಖಪುಟದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಭಾವಚಿತ್ರ ದೊಡ್ಡದಾಗಿ ಪ್ರಕಟವಾಗಿಲ್ಲ ಎಂಬ ಕಾರಣಕ್ಕೆ ಅಸಮಾಧಾನಗೊಂಡಿರುವುದು ತಾಜಾ ಸುದ್ದಿ. 
ಪ್ರಣಾಳಿಕೆ ಸಮಿತಿ ಸಂಚಾಲಕರಾಗಿರುವ ಪಕ್ಷದ ನಾಯಕ ರಾಜೀವ್ ಗೌಡ ಅವರನ್ನು ಪ್ರಣಾಳಿಕೆ ಬಿಡುಗಡೆಗೂ ಮುನ್ನ ಭೇಟಿ ಮಾಡಿದ್ದ ಸೋನಿಯಾ ಗಾಂಧಿ,  ಪ್ರಣಾಳಿಕೆ ಪುಸ್ತಕದ ಮುಖಪುಟದಲ್ಲಿ ರಾಹುಲ್ ಗಾಂಧಿ ಭಾವಚಿತ್ರ ದೊಡ್ಡದಾಗಿ ಪ್ರಕಟವಾಗದೇ ಇರುವುದಕ್ಕೆ ಸೋನಿಯಾ ಗಾಂಧಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. 
ರಾಹುಲ್ ಗಾಂಧಿಯ ಭಾವಚಿತ್ರವಷ್ಟೇ ಅಲ್ಲದೇ ಪಕ್ಷದ ಚಿನ್ಹೆಯೂ ದೊಡ್ಡದಾಗಿ ಪ್ರಕಟವಾಗಿಲ್ಲ. ಜನರು ನೆರೆದಿರುವ ಚಿತ್ರದ ಕೆಳ ಭಾಗದಲ್ಲಿ ರಾಹುಲ್ ಗಾಂಧಿ ಭಾವಚಿತ್ರವನ್ನು ಪ್ರಣಾಳಿಕೆಯಲ್ಲಿ ಪ್ರಕಟಿಸಲಾಗಿದೆ. 
ಆದರೆ ಸೋನಿಯಾ ಗಾಂಧಿ ಪ್ರಣಾಳಿಕೆ ಪುಸ್ತಕದ ವಿಷಯವಾಗಿ ಅಸಮಾಧಾನಗೊಂಡಿದ್ದಾರೆ ಎಂಬ ವಿಷಯವನ್ನು ಪಕ್ಷದ ವಕ್ತಾರ ರಣ್ ದೀಪ್ ಸುರ್ಜೇವಾಲ ತಳ್ಳಿಹಾಕಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT