ಛಾಪಾ ಕಾಗದದಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿದ ಜನಸೇನಾ 
ದೇಶ

ಬಾಂಡ್ ಪೇಪರ್ ನಲ್ಲಿ ಪ್ರಣಾಳಿಕೆ; ಈಡೇರಿಸದಿದ್ದರೇ ಕೋರ್ಟ್ ನಲ್ಲಿ ಕೇಸ್ ಹಾಕಿ ಎಂದು ಜನಸೇನಾ ಅಭ್ಯರ್ಥಿ ಸವಾಲು

ಲೋಕಸಭಾ ಚುನಾವಣೆ ಮತದಾನಕ್ಕೆ ದಿನಗಣನೆ ಆರಂಭವಾಗಿದ್ದು, ಶತಾಯಗತಾಯ ಮತದಾರರ ಮನಗೆಲ್ಲಲು ರಾಜಕೀಯ ನಾಯಕರು ವಿನೂತನ ಪ್ರಯತ್ನಗಳಿಗೆ ಕೈಹಾಕುತ್ತಿದ್ದಾರೆ.

ಅಮರಾವತಿ: ಲೋಕಸಭಾ ಚುನಾವಣೆ ಮತದಾನಕ್ಕೆ ದಿನಗಣನೆ ಆರಂಭವಾಗಿದ್ದು, ಶತಾಯಗತಾಯ ಮತದಾರರ ಮನಗೆಲ್ಲಲು ರಾಜಕೀಯ ನಾಯಕರು ವಿನೂತನ ಪ್ರಯತ್ನಗಳಿಗೆ ಕೈಹಾಕುತ್ತಿದ್ದಾರೆ.
ಇದಕ್ಕೆ ಮತ್ತೊಂದು ನಿದರ್ಶನ ಎಂಬಂತೆ ಆಂಧ್ರ ಪ್ರದೇಶದಲ್ಲಿ ಇದೇ ಮೊದಲ ಬಾರಿಗೆ ಚುನಾವಣಾ ರಣಕಣಕ್ಕೆ ಧುಮುಕಿರುವ ನಟ ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಕ್ಷ ಬಾಂಡ್ ಪೇಪರ್ ನಲ್ಲಿ ತನ್ನ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಜನಸೇನಾ ಪಕ್ಷದ ವಿಶಾಖಪಟ್ಟಣಂ ಕ್ಷೇತ್ರದ ಅಭ್ಯರ್ಥಿ ಜೆಡಿ ಲಕ್ಷ್ಮೀ ನಾರಾಯಣ್ ಅವರು, ಬಾಂಡ್ ಪೇಪರ್ ನಲ್ಲಿ ತಮ್ಮ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಪ್ರಣಾಳಿಕೆಯಲ್ಲಿರುವ ಅಷ್ಟೂ ಅಂಶಗಳನ್ನು ಈಡೇರಿಸುತ್ತೇವೆ ಎಂದು ಪ್ರಮಾಣ ಮಾಡಿದ್ದಾರೆ.
ಅಲ್ಲದೆ ಪ್ರಣಾಳಿಕೆಯಲ್ಲಿನ ಅಂಶಗಳು ಈಡೇರಿಸದಿದ್ದರೆ ಈ ಬಾಂಡ್ ಪೇಪರ್ ಮೂಲಕ ಕೋರ್ಟ್ ನಲ್ಲಿ ನನ್ನ ವಿರುದ್ಧ ಮೊಕದ್ದಮೆ ದಾಖಲಿಸಬಹುದು. ಈ ಪ್ರಮಾಣಿಕತೆ ಮತ್ತು ದೈರ್ಯ ತಮ್ಮ ಪಕ್ಷಕ್ಕೆ ಮಾತ್ರವಿದೆ ಎಂದು ಬಹಿರಂಗ ಸವಾಲು ಹಾಕಿದ್ದಾರೆ. ಇದೀಗ ಜನಸೇನಾ ಪಕ್ಷದ ನಡೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಪರ-ವಿರೋಧ ಚರ್ಚೆಗೆ ಕಾರಣವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT