ಪ್ರಧಾನಿ ಮೋದಿ 
ದೇಶ

ಬಾಲಾಕೋಟ್ ವೈಮಾನಿಕ ದಾಳಿ ಹಿರೋಗಳಿಗೆ ನಿಮ್ಮ ಮೊದಲ ಮತ ಅರ್ಪಿಸಿ: ಯುವಜನತೆಗೆ ಪ್ರಧಾನಿ ಮೋದಿ ಕರೆ

ಪಾಕಿಸ್ತಾನದ ರಚನೆಗೆ ಕಾಂಗ್ರೆಸ್ ಹೊಣೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ಔಸಾ: ಪಾಕಿಸ್ತಾನದ ರಚನೆಗೆ ಕಾಂಗ್ರೆಸ್ ಹೊಣೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ. 
ಮಹಾರಾಷ್ಟ್ರದಲ್ಲಿ ಚುನಾವಣಾ ಸಮಾವೇಶದಲ್ಲಿ ಯುವಜನತೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ನಿಮ್ಮ ಮೊದಲ ಮತವನ್ನು ಬಾಲಾಕೋಟ್ ನಲ್ಲಿ ಉಗ್ರರ ನೆಲೆ ಮೇಲೆ ವೈಮಾನಿಕ ದಾಳಿ ನಡೆಸಿದ ಹಿರೋಗಳಿಗೆ ಅರ್ಪಿಸಿ ಎಂದು ಕರೆ ನೀಡಿದ್ದಾರೆ. 
ವೈಮಾನಿಕ ದಾಳಿ ನಡೆಸಿದವರಿಗೆ ನಿಮ್ಮ ಮತ ಅರ್ಪಣೆಯಾಗಬಹುದೇ? ಎಂದು ಮೊದಲ ಬಾರಿಗೆ ಮತದಾನ ಮಾಡುತ್ತಿರುವ ಯುವ ಜನತೆಯನ್ನು ಕೇಳಿದ್ದಾರೆ. 
ಸ್ವಾತಂತ್ರ್ಯಾ ಪೂರ್ವದಲ್ಲಿ ಕಾಂಗ್ರೆಸ್ ನಾಯಕರು ವಿವೇಕದಿಂದ ವರ್ತಿಸಿದ್ದರೆ ಈ ಪಾಕಿಸ್ತಾನ ಹುಟ್ಟುತ್ತಿರಲಿಲ್ಲ, ಈಗ ಪಾಕಿಸ್ತಾನದ ಭಾಷೆಯನ್ನೇ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯೂ ಮಾತನಾಡುತ್ತಿದೆ, ಜಮ್ಮು-ಕಾಶ್ಮೀರಕ್ಕೆ ಪ್ರತ್ಯೇಕ ಪ್ರಧಾನಿ ಬೇಕೆನ್ನುವವರೊಂದಿಗೆ ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷ ಎನ್ ಸಿಪಿ ನಿಂತಿದೆ ಎಂದು ಮೋದಿ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. 
ಇದೇ ವೇಳೆ ಬಿಜೆಪಿ ಸಾಧನೆಗಳ ಬಗ್ಗೆಯೂ ಮೋದಿ ಮಾತನಾಡಿದ್ದು, ಬಿಜೆಪಿ ಅಧಿಕಾರಾವಧಿಯಲ್ಲಿನ ನವ ಭಾರತ ಭಯೋತ್ಪಾದಕರನ್ನು ಅವರ ನೆಲದಲ್ಲೇ ಹೊಡೆದುರುಳಿಸುವ ತಾಕತ್ತು ಪ್ರದರ್ಶಿಸಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT