ಮೋದಿ - ಉದ್ಧವ್ ಠಾಕ್ರೆ 
ದೇಶ

ಲೋಕಸಭೆ ಚುನಾವಣೆ: ಬಿಜೆಪಿ ಪ್ರಣಾಳಿಕೆಗೆ 100ಕ್ಕೆ 200 ಅಂಕ ನೀಡಿದ ಶಿವಸೇನೆ

ಲೋಕಸಭೆ ಚುನಾವಣೆಗೆ ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆಯನ್ನು ಹಾಡಿ ಹೊಗಳಿದ ಮಿತ್ರ ಪಕ್ಷ ಶಿವಸೇನೆ, ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗುತ್ತಿರುವ...

ಮುಂಬೈ: ಲೋಕಸಭೆ ಚುನಾವಣೆಗೆ ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆಯನ್ನು ಹಾಡಿ ಹೊಗಳಿದ ಮಿತ್ರ ಪಕ್ಷ ಶಿವಸೇನೆ, ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗುತ್ತಿರುವ ವಿಶೇಷ ಸ್ಥಾನಮಾನ ರದ್ದುಗೊಳಿಸುವ ಹಾಗೂ ರಾಮ ಮಂದಿರ ನಿರ್ಮಾಣಕ್ಕೆ ಸಂಕಲ್ಪ ತೊಟ್ಟಿರುವ ಪ್ರಣಾಳಿಕೆಗೆ 100ಕ್ಕೆ 200 ಅಂಕಗಳನ್ನು ನೀಡಬಹುದು ಎಂದು ಹೇಳಿದೆ.
ಏಕರೂಪ ನಾಗರಿಕ ಸಂಹಿತೆ ಮತ್ತು ಕಲಂ 370ನೇ ವಿಧಿಯೊಂದಿಗೆ ರಾಜಿ ಮಾಡಿಕೊಳ್ಳುವವರನ್ನು ಇತಿಹಾಸ ಕ್ಷಮಿಸುವುದಿಲ್ಲ. ರಾಮ ಮಂದಿರ ನಿರ್ಮಿಸಲು ಬಿಜೆಪಿ 2019 ಕೊನೆಯ ಅವಕಾಶವಾಗಿದ್ದು, ದೇಶದ ಸಮಗ್ರತೆಯ ವಿಚಾರದಲ್ಲಿ ಯಾರೂ ರಾಜಿಯಾಗಬಾರದು ಎಂದು ಶಿವಸೇನೆ ಮುಖವಾಣಿ ಸಾಮ್ನಾದಲ್ಲಿ ತಿಳಿಸಿದೆ.
ಪ್ರಣಾಳಿಕೆಯಲ್ಲಿ ಬಿಜೆಪಿ ಉಲ್ಲೇಖಿಸಿರುವ ‘ಸಂಕಲ್ಪ ಪತ್ರ’ ರಾಷ್ಟ್ರದ ಭಾವನಾತ್ಮಕ ವಿಚಾರವಾಗಿದ್ದು, ಶಿವಸೇನೆ ಸಹ ಬಿಜೆಪಿಯ ಎದುರು ಈ ಬೆಡಿಕೆಯನ್ನು ಮುಂದಿಟ್ಟಿತ್ತು. ಇದೆ ಕಾರಣಕ್ಕಾಗಿ ಬಿಜೆಪಿ ಚುನಾವಣಾ ಪ್ರಣಾಳಿಕೆಗೆ 200 ಅಂಕಗಳನ್ನು ಕೊಡಬಯಸುತ್ತದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದೆ.
ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡುತ್ತಿದ್ದಂತೆ ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿಗಳಾದ ನ್ಯಾಶನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಹಾಗೂ ಪಿಡಿಪಿ ಮುಖ್ಯಸ್ಥ ಮೆಹಬೂಬ ಮುಫ್ತಿ ಪ್ರಣಾಳಿಕೆಯಲ್ಲಿ ಉಲ್ಲೇಖವಾಗಿರುವ ಕಲಂ 370 ನ್ನು ರದ್ದುಗೊಳಿಸುವ ಬಿಜೆಪಿ ಆಶ್ವಾಸನೆಯನ್ನು ಕಟುವಾಗಿ ಟೀಕಿಸಿದ್ದರು. ಅಲ್ಲದೆ ಬಿಜೆಪಿಯ ಇಂತಹ ನಡೆ ಸ್ವತಂತ್ರ್ಯ ಕಾಶ್ಮೀರದ ಕೂಗಿಗೆ ಮತ್ತಷ್ಟು ಬಲ ತರಲಿದೆ ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು.
ಓಮರ್ ಅಬ್ದುಲ್ಲಾ ಹಾಗೂ ಮೆಹಬೂಬಾ ಮುಫ್ತಿ ಹೇಳಿಕೆಗೆ ತಮ್ಮ ಸಂಪಾದಕೀಯದಲ್ಲಿ ಖಾರವಾಗಿ ತಿರುಗೇಟು ನೀಡಿರುವ ಉದ್ಧವ್ ಠಾಕ್ರೆ, “ಕಣಿವೆ ರಾಜ್ಯಕ್ಕೆ ನೀಡಲಾಗಿರುವ ವಿಶೇಷ ಸ್ಥಾನಮಾನಗಳನ್ನು ಹಿಂದೆಗೆದುಕೊಂಡರೆ ಇಲ್ಲಿ ಭಾರತೀಯ ಧ್ವಜವನ್ನು ಯಾರು ಹಾರಿಸುತ್ತಾರೆ ಎಂಬರ್ಥದಲ್ಲಿ ಕಾಶ್ಮೀರದ ನಾಯಕರು ಬೆದರಿಕೆ ಒಡ್ಡುತ್ತಿದ್ದಾರೆ. ಆದರೆ, ಈ ರೀತಿ ಬೆದರಿಕೆ ಒಡ್ಡುವವರ ನಾಲಿಗೆಯನ್ನು ಕತ್ತರಿಸಬೇಕು” ಎಂದು ಶಿವಸೇನೆ ಆಕ್ರೋಶ ವ್ಯಕ್ತಪಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT