ಸಾಂದರ್ಭಿಕ ಚಿತ್ರ 
ದೇಶ

ಆಂಧ್ರದ ಕೆಲವೆಡೆ ಮಧ್ಯರಾತ್ರಿವರೆಗೆ ಮತದಾನಕ್ಕೆ ಅವಕಾಶ: ಇತಿಹಾಸ ಸೃಷ್ಟಿ

ನೆರೆಯ ಆಂಧ್ರಪ್ರದೇಶದ ಕೆಲವು ಮತಗಟ್ಟೆಗಳಲ್ಲಿ ಮಧ್ಯರಾತ್ರಿಯವರೆಗೂ ಮತದಾನಕ್ಕೆ ಅವಕಾಶ ಮಾಡಿಕೊಡುವ ಮೂಲಕ ಹೊಸ ಇತಿಹಾಸ ಸೃಷ್ಟಿಸಲಾಗಿದೆ. ಇದರಿಂದಾಗಿ ಒಟ್ಟಾರೇ ಮತದಾನ ಶೇ . 80ರ ಸನ್ನಿಹಕ್ಕೆ ತಲುಪಿದೆ.

ಅಮರಾವತಿ:ನೆರೆಯ ಆಂಧ್ರಪ್ರದೇಶದ ಕೆಲವು ಮತಗಟ್ಟೆಗಳಲ್ಲಿ ಮಧ್ಯರಾತ್ರಿಯವರೆಗೂ ಮತದಾನಕ್ಕೆ ಅವಕಾಶ ಮಾಡಿಕೊಡುವ ಮೂಲಕ ಹೊಸ ಇತಿಹಾಸ ಸೃಷ್ಟಿಸಲಾಗಿದೆ. ಇದರಿಂದಾಗಿ ಒಟ್ಟಾರೇ ಮತದಾನ  ಶೇ . 80ರ ಸನ್ನಿಹಕ್ಕೆ ತಲುಪಿದೆ.

ಕೆಲವು ಕಡೆಗಳಲ್ಲಿ ಟಿಡಿಪಿ ಹಾಗೂ ವೈಎಸ್ಆರ್ ಕಾಂಗ್ರೆಸ್ ನಡುವಿನ ಘರ್ಷಣೆಯಿಂದಾಗಿ ಇಬ್ಬರು ಮೃತಪಟ್ಟಿದ್ದು, ಅನೇಕ ಮಂದಿ ಗಾಯಗೊಂಡಿರುವ  ಬಗ್ಗೆ ವರದಿಯಾಗಿತ್ತು.

ಗುಂಟೂರು, ಕೃಷ್ಣಾ, ನೆಲ್ಲೂರು ಮತ್ತು ಕರ್ನೂಲು ಜಿಲ್ಲೆಗಳಲ್ಲಿ ಕೆಲವು ಮತಗಟ್ಟೆಗಳಲ್ಲಿ ಮಧ್ಯರಾತ್ರಿಯವರೆಗೂ ಮತದಾನ ನಡೆದಿದೆ. ಸಂಜೆ 6 ಗಂಟೆಯಿಂದಲೂ ಸರತಿ ಸಾಲಿನಲ್ಲಿ ನಿಂತಿದ್ದ ಎಲ್ಲರಿಗೂ ಮತದಾನ ಮಾಡಲು ಸಂಬಂಧಿಸಿದ ಅಧಿಕಾರಿಗಳು ಅವಕಾಶ ಮಾಡಿಕೊಟ್ಟಿದ್ದರು.

ಇವಿಎಂ ದೋಷ ಹಾಗೂ ಘರ್ಷನೆಯಿಂದಾಗಿ  400 ಮತಗಟ್ಟೆಗಳಲ್ಲಿ ಮತದಾನ ವಿಳಂಬವಾಗಿ ಸಾಗಿತ್ತು. ಗುಂಟೂರು  ಜಿಲ್ಲೆಯ ಮಂಗಳಗಿರಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮಗ ಪರ್ಯಾಯ ವ್ಯವಸ್ಥೆ ಮಾಡುವಲ್ಲಿ ಚುನಾವಣ ಆಯೋಗದ ವೈಫಲ್ಯತೆ ಖಂಡಿಸಿ ಪ್ರತಿಭಟನೆ ನಡೆಸಿದ್ದರು.
ಇದಕ್ಕೆ ಪ್ರತಿಯಾಗಿ ವೈಎಸ್ ಆರ್ ಕಾಂಗ್ರೆಸ್ ಕೂಡಾ ಪ್ರತಿಭಟನೆ ನಡೆಸಿದ್ದರಿಂದ ಪರಿಸ್ಥಿತಿ ಬಿಗಡಾಯಿಸಿತ್ತು.ವಿಜಯವಾಡ ಹಾಗೂ ಕರ್ನೂಲು ಜಿಲ್ಲೆಯಲ್ಲೂ ಉಭಯ ಪಕ್ಷಗಳ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT