ಮಾಯಾವತಿ 
ದೇಶ

ಬಿಜೆಪಿಯಿಂದ ಚುನಾವಣಾ ಆಕ್ರಮ: ಸೂಕ್ತ ಕ್ರಮ ಕೈಗೊಳ್ಳುವಂತೆ ಆಯೋಗಕ್ಕೆ ಮಾಯಾವತಿ ಒತ್ತಾಯ

ಮೊದಲ ಹಂತದ ಲೋಕಸಭಾ ಚುನಾವಣೆ ಮುಗಿದ ನಂತರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ, ಬಿಜೆಪಿ ಚುನಾವಣಾ ಅಕ್ರಮದಲ್ಲಿ ತೊಡಗಿದೆ ಎಂದು ಆರೋಪಿಸಿದ್ದಾರೆ.

ನವದೆಹಲಿ: ಮೊದಲ ಹಂತದ ಲೋಕಸಭಾ ಚುನಾವಣೆ ಮುಗಿದ ನಂತರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ, ಬಿಜೆಪಿ ಚುನಾವಣಾ ಅಕ್ರಮದಲ್ಲಿ   ತೊಡಗಿದೆ ಎಂದು ಆರೋಪಿಸಿದ್ದಾರೆ.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಯನ್ನು ಮತದಾರರು ತಿರಸ್ಕರಿಸಿದ್ದಾರೆ. ಆದ್ದರಿಂದ  ಮತದಿಂದ ಗೆಲುವು ಸಾಧ್ಯವಿಲ್ಲ ಎಂದು ಮನದಟ್ಟಾಗಿರುವ ಬಿಜೆಪಿಯವರು ನೋಟು,  ಇವಿಎಂ ದುರ್ಬಳಕೆ, ಪೊಲೀಸ್, ಆಡಳಿತ ಯಂತ್ರವನ್ನು ದುರ್ಬಳಕೆ ಮಾಡಿಕೊಳ್ಳುವ ಮೂಲಕ ಗೆಲಲ್ಲು ನಿರ್ಧರಿಸಿದ್ದಾರೆ ಎಂದು ಮಾಯಾವತಿ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.

ಉಳಿದ ಆರು ಹಂತಗಳ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಯಾವುದೇ ಅಕ್ರಮ ನಡೆಯದಂತೆ ಮುಕ್ತ ಹಾಗೂ ನ್ಯಾಯಯುತ ಚುನಾವಣೆ ನಡೆಯಲು ಚುನಾವಣಾ ಆಯೋಗ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಆಗ್ರಹಿಸಿದ್ದಾರೆ.

ಮುಂದಿನ ಹಂತದ ಚುನಾವಣಾ ಮುಕ್ತ ಹಾಗೂ ನ್ಯಾಯಯುತವಾಗಿ ನಡೆಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಾದದ್ದು ಚುನಾವಣಾ ಆಯೋಗದ ಸಾಂವಿಧಾನಿಕ ಹೊಣೆಗಾರಿಕೆಯಾಗಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!