ಮಾಯಾವತಿ 
ದೇಶ

ಬಿಜೆಪಿಯಿಂದ ಚುನಾವಣಾ ಆಕ್ರಮ: ಸೂಕ್ತ ಕ್ರಮ ಕೈಗೊಳ್ಳುವಂತೆ ಆಯೋಗಕ್ಕೆ ಮಾಯಾವತಿ ಒತ್ತಾಯ

ಮೊದಲ ಹಂತದ ಲೋಕಸಭಾ ಚುನಾವಣೆ ಮುಗಿದ ನಂತರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ, ಬಿಜೆಪಿ ಚುನಾವಣಾ ಅಕ್ರಮದಲ್ಲಿ ತೊಡಗಿದೆ ಎಂದು ಆರೋಪಿಸಿದ್ದಾರೆ.

ನವದೆಹಲಿ: ಮೊದಲ ಹಂತದ ಲೋಕಸಭಾ ಚುನಾವಣೆ ಮುಗಿದ ನಂತರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ, ಬಿಜೆಪಿ ಚುನಾವಣಾ ಅಕ್ರಮದಲ್ಲಿ   ತೊಡಗಿದೆ ಎಂದು ಆರೋಪಿಸಿದ್ದಾರೆ.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಯನ್ನು ಮತದಾರರು ತಿರಸ್ಕರಿಸಿದ್ದಾರೆ. ಆದ್ದರಿಂದ  ಮತದಿಂದ ಗೆಲುವು ಸಾಧ್ಯವಿಲ್ಲ ಎಂದು ಮನದಟ್ಟಾಗಿರುವ ಬಿಜೆಪಿಯವರು ನೋಟು,  ಇವಿಎಂ ದುರ್ಬಳಕೆ, ಪೊಲೀಸ್, ಆಡಳಿತ ಯಂತ್ರವನ್ನು ದುರ್ಬಳಕೆ ಮಾಡಿಕೊಳ್ಳುವ ಮೂಲಕ ಗೆಲಲ್ಲು ನಿರ್ಧರಿಸಿದ್ದಾರೆ ಎಂದು ಮಾಯಾವತಿ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.

ಉಳಿದ ಆರು ಹಂತಗಳ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಯಾವುದೇ ಅಕ್ರಮ ನಡೆಯದಂತೆ ಮುಕ್ತ ಹಾಗೂ ನ್ಯಾಯಯುತ ಚುನಾವಣೆ ನಡೆಯಲು ಚುನಾವಣಾ ಆಯೋಗ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಆಗ್ರಹಿಸಿದ್ದಾರೆ.

ಮುಂದಿನ ಹಂತದ ಚುನಾವಣಾ ಮುಕ್ತ ಹಾಗೂ ನ್ಯಾಯಯುತವಾಗಿ ನಡೆಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಾದದ್ದು ಚುನಾವಣಾ ಆಯೋಗದ ಸಾಂವಿಧಾನಿಕ ಹೊಣೆಗಾರಿಕೆಯಾಗಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯ ಬಜೆಟ್: SC-ST ಗಳಿಗೆ ಅನುದಾನ ಹಂಚಿಕೆಯೇ CM ಸಿದ್ದರಾಮಯ್ಯ ಮುಂದಿರುವ ಬಹು ದೊಡ್ಡ ಸವಾಲು!

'ಮಹಿಳಾ ಮೀಸಲಾತಿ ಬಂದರೆ ನನ್ನ ಮಗಳನ್ನೇ ಚುನಾವಣೆಗೆ ನಿಲ್ಲಿಸುತ್ತೇನೆ, ಶಾಸಕರು ಫಾರಿನ್ ಟ್ರಿಪ್ ಹೋದ್ರೆ ಏನು ತಪ್ಪು'? : ಕೆ ಎನ್ ರಾಜಣ್ಣ

ರಾಹುಲ್ ಗಾಂಧಿಗೆ ಬಿಗ್ ರಿಲೀಫ್: ಬಿಜೆಪಿ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ರದ್ದುಗೊಳಿಸಿದ ಹೈಕೋರ್ಟ್

ಉಚಿತ ಪರ್ವತಾರೋಹಣ ತರಬೇತಿ; ಗ್ರಾಮೀಣ ಯುವಕರಿಗೆ ಗದಗದ ಹನುಮಂತರಾವ್ ಸ್ಫೂರ್ತಿ!

'ಭಾರತ ಬದಲಾಗಿಲ್ಲ: ಪುರುಷರಿಗೆ ಇನ್ನೂ 'Virgin Wife' ಬೇಕು; ಕನ್ಯತ್ವವು ಮಹತ್ವದ ಅಂಶವಾಗಿದೆಯೇ? ಮಹಿಳೆ ತನ್ನ ಮಾವನ ಪಾದ ಮುಟ್ಟಿ ನಮಸ್ಕರಿಸ್ತಾಳೆ!

SCROLL FOR NEXT