ಸಾಂದರ್ಭಿಕ ಚಿತ್ರ 
ದೇಶ

ಝಣ ಝಣ ಕಾಂಚಾಣ: ವೆಲ್ಲೂರು ಲೋಕಸಭಾ ಕ್ಷೇತ್ರದ ಚುನಾವಣೆ ರದ್ಧು

ಕೆಲ ದಿನಗಳ ಹಿಂದೆ ಡಿಎಂಕೆ ಅಭ್ಯರ್ಥಿಯೊಬ್ಬರ ಮನೆಯಲ್ಲಿ ಬೃಹತ್ ಪ್ರಮಾಣದಲ್ಲಿ ಹಣವನ್ನು ವಶಪಡಿಸಿಕೊಂಡಿದ್ದರಿಂದ ತಮಿಳುನಾಡಿನ ವೆಲ್ಲೂರು ಲೋಕಸಭಾ ಕ್ಷೇತ್ರದ ಚುನಾವಣೆಯನ್ನು ರದ್ದುಪಡಿಸಲಾಗಿದೆ.

ನವದೆಹಲಿ: ಕೆಲ ದಿನಗಳ ಹಿಂದೆ ಡಿಎಂಕೆ ಅಭ್ಯರ್ಥಿಯೊಬ್ಬರ ಮನೆಯಲ್ಲಿ ಬೃಹತ್ ಪ್ರಮಾಣದಲ್ಲಿ ಹಣವನ್ನು ವಶಪಡಿಸಿಕೊಂಡಿದ್ದರಿಂದ  ತಮಿಳುನಾಡಿನ ವೆಲ್ಲೂರು ಲೋಕಸಭಾ ಕ್ಷೇತ್ರದ ಚುನಾವಣೆಯನ್ನು ರದ್ದುಪಡಿಸಲಾಗಿದೆ.

ವೆಲ್ಲೂರಿನಲ್ಲಿ ಏಪ್ರಿಲ್ 18 ರಂದು ಗುರುವಾರ ಚುನಾವಣೆ ನಡೆಯಬೇಕಿತ್ತು. ಆದರೆ, ತಮಿಳುನಾಡು ಚುನಾವಣಾ ಆಯೋಗದ ಶಿಫಾರಸಿನ ಆಧಾರದ ಮೇಲೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ವೆಲ್ಲೂರು ಲೋಕಸಭಾ ಕ್ಷೇತ್ರದ ಮತದಾನ ಪ್ರಕ್ರಿಯೆ ರದ್ದುಪಡಿಸಿದ್ದಾರೆ.

ಏಪ್ರಿಲ್ 10 ರಂದು ಆದಾಯ ತೆರಿಗೆ ಇಲಾಖೆ ನೀಡಿದ ವರದಿ ಆಧಾರದ ಮೇಲೆ ಕಾತಿರ್ ಆನಂದ್ ಹಾಗೂ ಡಿಎಂಕೆ ಪಕ್ಷದ ಇತರ ಇಬ್ಬರು ಪದಾಧಿಕಾರಿಗಳ ವಿರುದ್ಧ ಜಿಲ್ಲಾ ಪೊಲೀಸರು ದೂರು ದಾಲಿಸಿದ್ದ ಬಳಿಕ ಚುನಾವಣಾ ಆಯೋಗ,  ಚುನಾವಣೆ ರದ್ದುಪಡಿಸುವ  ನಿರ್ಧಾರ ಕೈಗೊಂಡಿತ್ತು.

ಕಾತಿರ್ ಆನಂದ್ ನಾಮಪತ್ರದೊಂದಿಗೆ ಸಲ್ಲಿಸಿರುವ ಚುನಾವಣಾ ಅಫಿಡವಿಟ್ ನಲ್ಲಿ ತಪ್ಪು ಮಾಹಿತಿ ನೀಡಿರುವುದರಿಂದ ಜನಪ್ರತಿನಿಧಿ ಕಾಯ್ದೆಯಡಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇತರರಾದ ಶ್ರೀನಿವಾಸನ್ ಹಾಗೂ ದಾಮೋದರನ್ ವಿರುದ್ಧ ಭ್ರಷ್ಟಾಚಾರದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.

ಚುನಾವಣಾ ಆಯೋಗದ ನಿರ್ಧಾರವನ್ನು ತಮಿಳುನಾಡು ಮುಖ್ಯ ಚುನಾವಣಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅಧಿಸೂಚನೆ ಬಗ್ಗೆ ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳಿಗೆ ಮಾಹಿತಿ ನೀಡಿದ್ದಾರೆ ಎಂದು ಸರ್ಕಾರದ ಮೂಲಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT