ಡಿಂಪಲ್ ಯಾದವ್ - ಪೂನಂ ಸಿನ್ಹಾ 
ದೇಶ

ಶತ್ರುಘ್ನ ಸಿನ್ಹಾ ಪತ್ನಿ ಪೂನಂ ಸಮಾಜವಾದಿ ಪಕ್ಷ ಸೇರ್ಪಡೆ, ರಾಜನಾಥ್ ಸಿಂಗ್ ವಿರುದ್ಧ ಸ್ಪರ್ಧೆ

ಇತ್ತೀಚಿಗಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಬಾಲಿವುಡ್ ನಟ ಹಾಗೂ ರಾಜಕಾರಣಿ ಶತ್ರುಘ್ನ ಸಿನ್ಹಾ ಅವರ ಪತ್ನಿ ಪೂನಂ ಸಿನ್ಹಾ ಅವರು ಮಂಗಳವಾರ....

ಲಖನೌ: ಇತ್ತೀಚಿಗಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಬಾಲಿವುಡ್ ನಟ ಹಾಗೂ ರಾಜಕಾರಣಿ ಶತ್ರುಘ್ನ ಸಿನ್ಹಾ ಅವರ ಪತ್ನಿ ಪೂನಂ ಸಿನ್ಹಾ ಅವರು ಮಂಗಳವಾರ ಸಮಾಜವಾದಿ ಪಕ್ಷ(ಎಸ್​ಪಿ) ಸೇರ್ಪಡೆಯಾಗಿದ್ದು, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರ ವಿರುದ್ಧ ಕಣ್ಣಕ್ಕಿಳಿಯುವ ಸಾಧ್ಯತೆ ಇದೆ.
ಪೂನಂ ಅವರು ಇಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರ ಪತ್ನಿ ಡಿಂಪಲ್ ಯಾದವ್ ಅವರನ್ನು ಭೇಟಿ ಮಾಡಿ, ಸಮಾಜವಾದಿ ಪಕ್ಷ ಸೇರಿದ್ದಾರೆ. 
ಮೂಲಗಳ ಪ್ರಕಾರ, ಪೂನಂ ಅವರು ಉತ್ತರ ಪ್ರದೇಶದ ಲಖನೌ ಲೋಕಸಭಾ ಕ್ಷೇತ್ರದಿಂದ ಎಸ್​ಪಿ, ಬಿಎಸ್​ಪಿ ಹಾಗೂ ಆರ್ ಎಲ್ ಡಿ ಮೈತ್ರಿ ಅಭ್ಯರ್ಥಿಯಾಗಿ ರಾಜನಾಥ ಸಿಂಗ್ ಅವರ ವಿರುದ್ಧ ಸ್ಪರ್ಧೆ ಮಾಡಲಿದ್ದಾರೆ. ಅಲ್ಲದೆ ಪೂನಂ ಅವರಿಗೆ ಕಾಂಗ್ರೆಸ್ ಸಹ ಬೆಂಬಲ ನೀಡುವ ಸಾಧ್ಯತೆ ಇದೆ.
ಉತ್ತರ ಪ್ರದೇಶದಲ್ಲಿ ಎಸ್​ಪಿ, ಬಿಎಸ್​ಪಿ ಮತ್ತು ಆರ್​ಎಲ್​ಡಿ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದು, ಸಮಾಜವಾದಿ ಪಕ್ಷಕ್ಕೆ ಲಖನೌ ಕ್ಷೇತ್ರ ಸಿಕ್ಕಿದೆ. ಬಿಜೆಪಿ ಭದ್ರಕೋಟೆಯಾಗಿರುವ ಈ ಕ್ಷೇತ್ರದಿಂದ ರಾಜನಾಥ ಸಿಂಗ್​ ಸ್ಪರ್ಧೆ ಮಾಡುತ್ತಿರುವ ಕಾರಣಕ್ಕೆ ಇವರಿಗೆ ಪ್ರಬಲ ಸ್ಪರ್ಧೆ ಒಡ್ಡಲು ಮೈತ್ರಿಯಿಂದ ಸಮರ್ಥ ಅಭ್ಯರ್ಥಿಗಾಗಿ ಹುಡುಕಾಟ ನಡೆಸಲಾಗಿತ್ತು. ಇದಕ್ಕೂ ಮುನ್ನ ಶತ್ರುಘ್ನ ಸಿನ್ಹಾ ಅವರು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್​ ಯಾದವ್ ಅವರನ್ನು ಭೇಟಿಯಾಗಿ ತಮ್ಮ ಪತ್ನಿಯನ್ನು ಅಭ್ಯರ್ಥಿಯನ್ನಾಗಿಸುವ ಬಗ್ಗೆ ಚರ್ಚೆ ನಡೆಸಿದ್ದರು. ಪಾಟ್ನಾ ಸಾಹಿಬ್​ ಕ್ಷೇತ್ರದಿಂದ ಕಳೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿ, ಗೆದ್ದು ಸಂಸದನಾಗಿರುವ ಶತ್ರುಘ್ನ ಸಿನ್ಹಾ ಇತ್ತೀಚೆಗೆ ಬಿಜೆಪಿ ತೊರೆದು, ಈಗ ಅದೇ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದಾರೆ.
ಲಖನೌದಲ್ಲಿ 4 ಲಕ್ಷ ಕಾಯಸ್ಥ ಮತಗಳು, 1.3 ಲಕ್ಷ ಸಿಂಧಿ ಮತದಾರರು ಹಾಗೂ 3.5 ಲಕ್ಷ ಮುಸ್ಲಿಂ ಮತಗಳು ಇವೆ. ಪೂನಂ ಸಿನ್ಹಾ ಅವರು ಸಿಂಧಿ ಸಮುದಾಯಕ್ಕೆ ಸೇರಿದರೆ ಅವರ ಪತಿ ಶತ್ರುಘ್ನ ಸಿನ್ಹಾ ಕಾಯಸ್ಥ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಈ ಎರಡು ಸಮುದಾಯದ ಮತದಾರರು ಕೈ ಹಿಡಿಯಲಿದ್ದಾರೆ ಎಂಬ ಲೆಕ್ಕಾಚಾರ ಮೈತ್ರಿ ಪಕ್ಷಗಳ ನಾಯಕರದ್ದಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT