ರಾಹುಲ್ ಗಾಂಧಿ 
ದೇಶ

ಪ್ರಧಾನಿ ಮೋದಿ ದೇಶ ವಿರೋಧಿ, ದೇಶವನ್ನು ವಿಭಜಿಸಲು ಹೊರಟಿದ್ದಾರೆ: ರಾಹುಲ್ ಗಾಂಧಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶ ವಿರೋಧಿಯಾಗಿದ್ದು ದೇಶವನ್ನು ವಿಭಜಿಸುವ ಕೆಲಸ ...

ಕಣ್ಣೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶ ವಿರೋಧಿಯಾಗಿದ್ದು ದೇಶವನ್ನು ವಿಭಜಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ಅವರು ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯಲ್ಲಿಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, ಕಾಂಗ್ರೆಸ್ ದೇಶ ವಿರೋಧಿ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು ದೇಶದ ವಿರುದ್ಧ ಶತ್ರುಗಳ ವಿರುದ್ಧ ಹೋರಾಟ ನಡೆಸಿದ ನೂರಾರು ವರ್ಷಗಳ ದಾಖಲೆ ಕಾಂಗ್ರೆಸ್ ಗಿದೆ ಎಂದರು.
ಶತ್ರುಪಡೆಗಳ ವಿರುದ್ಧ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಹೋರಾಡಿ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಇಂದು ದೇಶ ವಿರೋಧಿ ಚಟುವಟಿಕೆ ನಡೆಸುತ್ತಿರುವವರಲ್ಲಿ ಪ್ರಧಾನಿ ಮೋದಿ ಮುಂಚೂಣಿಯಲ್ಲಿದ್ದು ಅವರು ದೇಶವನ್ನು ಇಬ್ಘಾಗ ಮಾಡಲು ಹೊರಟಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದರು.
ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದ ಮೇಲೆ ದೇಶದ ಕೃಷಿ ವ್ಯವಸ್ಥೆಯನ್ನು ದುರ್ಬಲಗೊಳಿಸಿದ್ದು ದೇಶದಲ್ಲಿ ರೈತರ ಆತ್ಮಹತ್ಯೆ ಸಂಖ್ಯೆ ಹೆಚ್ಚಾಗಿದೆ. ಯುವಕರು ತಮ್ಮ ಉದ್ಯೋಗವನ್ನು ಕಳೆದುಕೊಳ್ಳುತ್ತಿರುವುದು ಕೂಡ ಮತ್ತೊಂದು ದೇಶ ವಿರೋಧಿ ಕೃತ್ಯ. ಮೋದಿಯವರು ಈ ಎಲ್ಲಾ ರಂಗಗಳಲ್ಲಿ ವಿಫಲವಾಗಿದ್ದು ಇದಕ್ಕೆಲ್ಲಾ ಅವರು ಉತ್ತರ ಕೊಡಬೇಕು, ಮೋದಿಯವರಿಗೆ ಕೇರಳ, ಒಡಿಶಾ ಮತ್ತು ದೆಹಲಿಯಲ್ಲಿ ಮಾಧ್ಯಮಗಳನ್ನು ಎದುರಿಸುವ ಶಕ್ತಿಯಿಲ್ಲ ಎಂದು ಟೀಕಿಸಿದರು.
2019ರ ಲೋಕಸಭೆ ಚುನಾವಣೆಯಲ್ಲಿ ಮೂರು ವಿಷಯಗಳು ಮುಖ್ಯ ಪಾತ್ರ ವಹಿಸುತ್ತದೆ. ಅವುಗಳೆಂದರೆ ಭಾರತದ ಆರ್ಥಿಕತೆ, ವೈಯಕ್ತಿಕ ಭ್ರಷ್ಟಾಚಾರ ಮತ್ತು ದೇಶದ ರೈತರ ದುಸ್ಥಿತಿ. ಈ ಬಾರಿ ಯುಪಿಎ ಅಧಿಕಾರಕ್ಕೆ ಬಂದರೆ ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಹುಡುಕುತ್ತೇವೆ ಎಂದರು.
ಕಣ್ಣೂರಿನಿಂದ ಅವರು ತಮ್ಮ ಸ್ವಕ್ಷೇತ್ರ ವಯನಾಡಿನ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಪ್ರಚಾರ ನಡೆಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT