ಟಿಟಿವಿ ದಿನಕರನ್ 
ದೇಶ

ಟಿಟಿವಿ ದಿನಕರನ್ ಗೆ ಐಟಿ ಶಾಕ್: ತಮಿಳುನಾಡಿನ ತೇಣಿಯಲ್ಲಿ 1.48 ಕೋಟಿ ರೂ. ನಗದು ವಶ, ಬೆಂಬಲಿಗರ ದಾಂಧಲೆ

ಮತದಾರರಿಗೆ ಹಂಚಲು ಸಂಗ್ರಹಿಸಿಟ್ಟಿದ್ದ 1.48 ಕೋಟಿ ರೂಪಾಯಿ ನಗದನ್ನು ಆದಾಯ ತೆರಿಗೆ ಇಲಾಖೆ ಬುಧವಾರ ನಸುಕಿನ ಜಾವ...

ಚೆನ್ನೈ: ಮತದಾರರಿಗೆ ಹಂಚಲು ಸಂಗ್ರಹಿಸಿಟ್ಟಿದ್ದ 1.48 ಕೋಟಿ ರೂಪಾಯಿ ನಗದನ್ನು ಆದಾಯ ತೆರಿಗೆ ಇಲಾಖೆ ಬುಧವಾರ ನಸುಕಿನ ಜಾವ ತಮಿಳುನಾಡಿನ ತೆಣಿ ಜಿಲ್ಲೆಯಲ್ಲಿ ವಶಪಡಿಸಿಕೊಂಡಿದೆ. ಈ ಕ್ಷೇತ್ರದಲ್ಲಿ ನಾಳೆ ಮತದಾನ ನಡೆಯಲಿದೆ.
ಕೋಟಿಗಟ್ಟಲೆ ಹಣವನ್ನು 94 ಪೊಟ್ಟಣಗಳಲ್ಲಿ ಕಟ್ಟಿ ಕವರ್ ನೊಳಗೆ ಇಡಲಾಗಿತ್ತು. ಕವರ್ ಮೇಲೆ ವಾರ್ಡ್ ಸಂಖ್ಯೆ, ಮತದಾರರ ಸಂಖ್ಯೆ ಬರೆದು ಪ್ರತಿಯೊಬ್ಬ ಮತದಾರರಿಗೆ ತಲಾ 300 ರೂಪಾಯಿ ಎಂದು ಬರೆಯಲಾಗಿದೆ ಎಂದು ಆದಾಯ ತೆರಿಗೆ ಇಲಾಖೆಯ ಮಹಾ ನಿರ್ದೇಶಕ ಬಿ ಮುರಳಿ ಕುಮಾರ್ ತಿಳಿಸಿದ್ದಾರೆ.
ಈ ಎಲ್ಲಾ ವಾರ್ಡ್ ಗಳು ಅಂಡಿಪಟ್ಟಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿದ್ದು ಇಲ್ಲಿ ನಾಳೆ ಮತದಾನ ನಡೆಯಲಿದೆ. ಹಣ ಸಿಕ್ಕಿದ ಕಟ್ಟಡ ಟಿಟಿವಿ ದಿನಕರನ್ ಅವರ ಎಎಂಎಂಕೆ ಪಕ್ಷದ ಕಾರ್ಯಕಾರಿ ಕಚೇರಿ ಆವರಣದಲ್ಲಿದೆ.
ಆದಾಯ ತೆರಿಗೆ ಇಲಾಖೆ ಇಂದು ನಡೆಸಿದ ದಾಳಿಯ ವಿವರಗಳನ್ನು ಕೇಂದ್ರ ನೇರ ತೆರಿಗೆ ಮಂಡಳಿಗೆ ಮತ್ತು ಭಾರತೀಯ ಚುನಾವಣಾ ಆಯೋಗಕ್ಕೆ ಕಳುಹಿಸಲಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಅಕ್ರಮವಾಗಿ ನಗದನ್ನು ಸಂಗ್ರಹಿಸಿಡಲಾಗಿದೆ ಎಂಬ ಖಚಿತ ಮಾಹಿತಿ ಮೇರೆಗೆ ನಿನ್ನೆ ಸಂಜೆಯಿಂದ ಆದಾಯ ತೆರಿಗೆ ಇಲಾಖೆ ಸಂಗ್ರಹಾಲಯವೊಂದರಲ್ಲಿ ಶೋಧ ಕಾರ್ಯಾಚರಣೆ ನಡೆಸಿತ್ತು.ದಾಳಿ ಸಂದರ್ಭದಲ್ಲಿ ಟಿಟಿವಿ ದಿನಕರನ್ ಅವರ ಬೆಂಬಲಿಗರು ಆಕ್ಷೇಪವೊಡ್ಡಿ ಸ್ಥಳಕ್ಕೆ ಬಂದು ಗಲಾಟೆ ಮಾಡಲು ಆರಂಭಿಸಿದ್ದರಿಂದ ಪೊಲೀಸರು ಆಶ್ರುವಾಯು ಸಿಡಿಸಬೇಕಾಯಿತು.
ದಾಳಿ ವೇಳೆ ಕಚೇರಿಯಲ್ಲಿದ್ದ ವ್ಯಕ್ತಿಯ ಹೇಳಿಕೆಯನ್ನು ಪಡೆದುಕೊಳ್ಳಲಾಗಿದ್ದು ಅಂಡಿಪಟ್ಟಿ ಪಂಚಾಯತ್ ಪ್ರದೇಶದಲ್ಲಿ ನಾಳೆ ನಡೆಯುವ ಉಪ ಚುನಾವಣೆಗೆ ಮತದಾರರಿಗೆ ಹಂಚಲು ಸುಮಾರು 2 ಕೋಟಿ ರೂಪಾಯಿ ನಗದು ತರಲಾಗಿತ್ತು ಎಂದು ಹೇಳಿದ್ದಾರೆ ಎಂಬುದಾಗಿ ತೆರಿಗೆ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.
ತೆರಿಗೆ ಇಲಾಖೆ ಅಧಿಕಾರಿಗಳು ಬಂದ ಕೂಡಲೇ ಎಎಂಎಂಕೆ ಪಕ್ಷದ ಕಾರ್ಯಕರ್ತರು ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳ ಮೇಲೆ ದಾಳಿ ಮಾಡಲಾರಂಭಿಸಿದರು. ದಾಳಿ ಸಂದರ್ಭದಲ್ಲಿ ಚುನಾವಣಾಧಿಕಾರಿಗಳು, ಐಟಿ ಇಲಾಖೆ ಅಧಿಕಾರಿಗಳು ಆವರಣದ ಹೊರಗೆ ನಿಂತಿದ್ದರು.ಕಾರ್ಯಕರ್ತರು ಬಾಗಿಲನ್ನು ಮುರಿದು ಕೆಲವು ನಗದನ್ನು ಕಸಿಯಲು ಯತ್ನಿಸಿದರು. ಈ ವೇಳೆ ಗುಂಪನ್ನು ಚದುರಿಸಿ ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಬೇಕಾಯಿತು. ಘಟನೆಯಲ್ಲಿ ಯಾರೊಬ್ಬರಿಗೂ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಂಡಿಪಟ್ಟಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಅಂಚೆ ಬ್ಯಾಲಟ್ ಪೇಪರ್ ಮತದಾನದಲ್ಲಿ ಎಎಂಎಂಕೆ ಪಕ್ಷದ ಅಭ್ಯರ್ಥಿ ಹೆಸರಿದ್ದು ಅದನ್ನು ಕೂಡ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ದಾಳಿಯ ಮಾಹಿತಿ ತಿಳಿಯುತ್ತಿದ್ದಂತೆ ಜಿಲ್ಲಾಧಿಕಾರಿ ಮತ್ತು ಪೊಲೀಸ್ ಸೂಪರಿಂಟೆಂಡೆಂಟ್ ಸ್ಥಳಕ್ಕೆ ಆಗಮಿಸಿ ಭದ್ರತೆಯ ಮೇಲ್ವಿಚಾರಣೆ ನಡೆಸಿದರು. ಜಿಲ್ಲಾ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT