ಹಾರ್ದಿಕ್ ಪಟೇಲ್ 
ದೇಶ

ಕಾಂಗ್ರೆಸ್ ಜನಾಕ್ರೋಶ ಸಭೆಯಲ್ಲಿ ಹಾರ್ದಿಕ್ ಪಟೇಲ್ ಗೆ ಕಾರ್ಯಕರ್ತನಿಂದ ಕಪಾಳಮೋಕ್ಷ!

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಡೆಯುತ್ತಿದ್ದ ಕಾಂಗ್ರೆಸ್ ನ ಜನಾಕ್ರೋಶ ಸಭೆಯಲ್ಲೇ ಕಾರ್ಯಕರ್ತನೊಬ್ಬ ಕಾಂಗ್ರೆಸ್ ಮುಖಂಡ ಹಾರ್ದಿಕ್ ಪಟೇಲ್ ಗೆ ಕಪಾಳಮೋಕ್ಷ ಮಾಡಿ...

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಡೆಯುತ್ತಿದ್ದ ಕಾಂಗ್ರೆಸ್ ನ ಜನಾಕ್ರೋಶ ಸಭೆಯಲ್ಲೇ ಕಾರ್ಯಕರ್ತನೊಬ್ಬ ಕಾಂಗ್ರೆಸ್ ಮುಖಂಡ ಹಾರ್ದಿಕ್ ಪಟೇಲ್ ಗೆ ಕಪಾಳಮೋಕ್ಷ ಮಾಡಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದು ಈ ವಿಡಿಯೋ ಇದೀಗ ವೈರಲ್ ಆಗಿದೆ.
ಗುಜರಾತ್ ನ ಸುರೇಂದ್ರನಗರದಲ್ಲಿ ನಡೆದ ಜನಾಕ್ರೋಶ ರ್ಯಾಲಿಯಲ್ಲಿ ಪಾಟಿದಾರ್ ಸಮುದಾಯದ ಮುಖಂಡ ಹಾರ್ದಿಕ್ ಪಟೇಲ್ ವೇದಿಕೆ ಮೇಲೆ ಭಾಷಣ ಮಾಡುತ್ತಿದ್ದಂತೆ ಕಾರ್ಯಕರ್ತನೊಬ್ಬ ಬಂದು ಕಪಾಳಮೋಕ್ಷ ಮಾಡಿದ್ದಾನೆ. ಕಾರ್ಯಕರ್ತ ತನ್ನ ಬಳಿ ಧನ್ಯವಾದ ಅರ್ಪಿಸಲು ಬರುತ್ತಿದ್ದಾನೆ ಎಂದು ಹಾರ್ದಿಕ್ ಪಟೇಲ್ ಭಾವಿಸಿದ್ದ ಆದರೆ ಕಾರ್ಯಕರ್ತ ದಿಢೀರ್ ಅಂತಾ ಬಂದು ಕಪಾಳಕ್ಕೆ ಬಾರಿಸಿದ್ದಾನೆ. ಈ ವೇಳೆ ವೇದಿಕೆ ಮೇಲಿದ್ದ ಕಾಂಗ್ರೆಸ್ ಮುಖಂಡರು ಗಲಿಬಿಲಿಕೊಂಡರು.
ಲೋಕಸಭೆ ಚುನಾವಣೆಗೆ ಮೊದಲ ಹಂತದ ಮತದಾನಕ್ಕೂ ಮುನ್ನ ಹಾರ್ದಿಕ್ ಪಟೇಲ್ ಕಾಂಗ್ರೆಸ್ ಗೆ ಸೇರಿಕೊಂಡಿದ್ದರು. 2015ರಲ್ಲಿ ಪಾಟಿದಾರ್ ಸಮುದಾಯದ ಪರವಾಗಿ ಧ್ವನಿ ಎತ್ತಿದ್ದ ಹಾರ್ದಿಕ್ ಪಟೇಲ್ ಸಮುದಾಯದ ನಾಯಕನಾಗಿ ಗುರುತಿಸಿಕೊಂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT