ಸಂಗ್ರಹ ಚಿತ್ರ 
ದೇಶ

'ಕಳ್ಳರ ಹೆಸರಿನ ಮುಂದೆ ಮೋದಿ ಹೆಸರಿದೆ' ಎಂದಿದ್ದ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ

ಕಳ್ಳರ ಹೆಸರಿನ ಮುಂದೆ ಮೋದಿ ಹೆಸರಿದೆ ಎಂಬ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿಕೆ ವಿರುದ್ಧ ಇದೀಗ ಬಿಹಾರ ಉಪಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಸುಶೀಲ್ ಕುಮಾರ್ ಮೋದಿ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಿಸಿದ್ದಾರೆ.

ನವದೆಹಲಿ: ಕಳ್ಳರ ಹೆಸರಿನ ಮುಂದೆ ಮೋದಿ ಹೆಸರಿದೆ ಎಂಬ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿಕೆ ವಿರುದ್ಧ ಇದೀಗ ಬಿಹಾರ ಉಪಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಸುಶೀಲ್ ಕುಮಾರ್ ಮೋದಿ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಿಸಿದ್ದಾರೆ.
ಪಾಟ್ನಾ ನ್ಯಾಯಾಲಯದಲ್ಲಿ ಸುಶೀಲ್ ಮೋದಿ ಗುರುವಾರ ಪ್ರಕರಣ ದಾಖಲಿಸಿದ್ದು, 'ರಾಹುಲ್ ಗಾಂಧಿ ಏಪ್ರಿಲ್ 13ರಂದು ಕರ್ನಾಟಕದ ಕೋಲಾರದಲ್ಲಿ ನೀಡಿರುವ ಹೇಳಿಕೆಯಲ್ಲಿ, ಹಣಕಾಸು ಅವ್ಯವಹಾರದಲ್ಲಿ ಭಾಗಿಯಾಗಿ ವಿದೇಶಕ್ಕೆ ಹಾರಿರುವ ನೀರವ್ ಮೋದಿ, ಐಪಿಲ್ ಕ್ರಿಕೆಟ್ ನ ಆಡಳಿತಾಧಿಕಾರಿಯಾಗಿದ್ದ ಲಲಿತ್ ಮೋದಿ, ರಫೇಲ್ ಯುದ್ಧವಿಮಾನ ಹಗರಣದ ನರೇಂದ್ರ ಮೋದಿ ಸೇರಿದಂತೆ ಎಲ್ಲರೂ ಒಂದಿಲ್ಲೊಂದು ಹಗರಣದಲ್ಲಿ ಭಾಗಿಯಾಗಿದ್ದಾರೆ. ಈ ಎಲ್ಲಾ ಕಳ್ಳರ ಹೆಸರಿನ ಮುಂದೆ ಮೋದಿ ಎಂಬ ಸರ್ ನೇಮ್ ಇದೆ ಎಂದಿರುವುದು ಐಪಿಸಿ ಸೆಕ್ಷನ್ 500ರ ಅಡಿಯಲ್ಲಿ ಅಪರಾಧವಾಗುತ್ತದೆ. ರಾಹುಲ್ ಗಾಂಧಿ ನೀಡಿರುವ ಈ ಹೇಳಿಕೆ ಮಾನಹಾನಿಕರವಾಗಿದೆ. ಈ ಅಪರಾಧಕ್ಕೆ ಎರಡು ವರ್ಷ ಶಿಕ್ಷೆ, ದಂಡ ಅಥವಾ ಎರಡನ್ನೂ ವಿಧಿಸಬಹುದು ಎಂದು ಸುಶೀಲ್ ಕುಮಾರ್ ಮೋದಿ ತಿಳಿಸಿದ್ದಾರೆ.
ರಾಹುಲ್ ಗಾಂಧಿ ಅವರ ಈ ಹೇಳಿಕೆ ಮೋದಿ ಎಂಬ ಹೆಸರಿನವರ ಘನತೆಗೆ ಸಾರ್ವಜನಿಕರ ಹಿತದೃಷ್ಟಿಯಲ್ಲಿ ಕುಂದುಂಟು ಮಾಡುತ್ತದೆ. ಆದ್ದರಿಂದ ಅವರನ್ನು ಕರೆಸಿ ವಿಚಾರಣೆ ನಡೆಸಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಇದಲ್ಲದೆ, ರಾಹುಲ್ ಗಾಂಧಿ ಅವರು ಎಲ್ಲಾ ಸಮಾರಂಭಗಳಲ್ಲೂ ನೀಡುತ್ತಿರುವ 'ಚೌಕಿದಾರ್ ಚೋರ್ ಹೈ' ಹೇಳಿಕೆಯೂ ಕೂಡ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಅವಹೇಳನ ಮಾಡುವಂತಹ ಹೇಳಿಕೆಯಾಗಿದೆ. ರಾಹುಲ್ ಗಾಂಧಿಯವರ ಈ ನಡೆಯ ಕುರಿತು ಚುನಾವಣಾ ಆಯೋಗ ಸೂಕ್ತ ಕ್ರಮ ಕೈಗೊಳ್ಳುತ್ತದೆ ಎಂದು ಕಾದುನೋಡುತ್ತಿದ್ದೇನೆ ಎಂದು ಸುಶೀಲ್ ಮೋದಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT