ರಮೇಶ್ ಚೆನ್ನಿತಾಲ 
ದೇಶ

ರಾಹುಲ್ ಪ್ರಧಾನಿಯಾದರೆ ಶಬರಿಮಲೆಗೆ ಮತ್ತೆ ಮಹಿಳೆಯರ ಪ್ರವೇಶ ನಿಷೇಧ: ಚೆನ್ನಿತಾಲ

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿಯಾದರೆ ಶಬರಿಮಲೆಗೆ ಮತ್ತೆ ಮಹಿಳೆಯರ ಪ್ರವೇಶವನ್ನು ನಿಷೇಧಿಸಲು ಕಾನೂನಿಗೆ ತಿದ್ದುಪಡಿ ತರಲಾಗುವುದು...

ತಿರುವನಂತಪುರಂ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿಯಾದರೆ ಶಬರಿಮಲೆಗೆ ಮತ್ತೆ ಮಹಿಳೆಯರ ಪ್ರವೇಶವನ್ನು ನಿಷೇಧಿಸಲು ಕಾನೂನಿಗೆ ತಿದ್ದುಪಡಿ ತರಲಾಗುವುದು ಎಂದು ಕೇರಳ ಪ್ರತಿಪಕ್ಷ ನಾಯಕ ರಮೇಶ್ ಚೆನ್ನಿತಾಲ ಅವರು ಶುಕ್ರವಾರ ಹೇಳಿದ್ದಾರೆ.
ಬಿಜೆಪಿ ಮತ್ತು ಸಿಪಿಎಂ ಶಬರಿಮಲೆ ವಿವಾದದಲ್ಲಿ ಕೀಳುಮಟ್ಟದ ರಾಜಕೀಯ ಮಾಡುತ್ತಿವೆ. ಆದರೆ ಈ ಬಾರಿ ಕೇಂದ್ರದಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಯುಪಿಎ ಸರ್ಕಾರ ಅಧಿಕಾರಕ್ಕೆ ಬಂದರೆ ಅಯ್ಯಪ್ಪಸ್ವಾಮಿ ದೇವಸ್ಥಾನದ ಸಂಪ್ರದಾಯ ರಕ್ಷಿಸಲು ಸಂಸತ್ತಿನಲ್ಲಿ ಮಸೂದೆ ಮಂಡಿಸಲಾಗುವುದು ಎಂದು ಕೇರಳ ಕಾಂಗ್ರೆಸ್ ನಾಯಕ ಹೇಳಿದ್ದಾರೆ.
ಶಬರಿಮಲೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರುು ಮೋಸಳೆ ಕಣ್ಣಿರು ಹಾಕುತ್ತಿದ್ದಾರೆ. ಶಬರಿಮಲೆ ದೇವಸ್ಥಾನದ ಸಂಪ್ರದಾಯ ರಕ್ಷಿಸಲು ಶಾಸನ ತರಲು ಬಿಜೆಪಿ ಎಲ್ಲಾ ರೀತಿಯ ಅವಕಾಶ ಇತ್ತು. ಆದರೆ ಅದನ್ನು ಮಾಡಲಿಲ್ಲ ಎಂದು ಚೆನ್ನಿತಾಲ ವಾಗ್ದಾಳಿ ನಡೆಸಿದರು.
ಶಬರಿಮಲೆ ವಿವಾದವನ್ನು ಬಿಜೆಪಿ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಕೇರಳ ಪ್ರತಿಪಕ್ಷ ನಾಯಕ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!