ಸಂಗ್ರಹ ಚಿತ್ರ 
ದೇಶ

ಬಾಬರಿ ಮಸೀದಿ ಕೆಡವಲು ನಾನೂ ಸಹಕರಿಸಿದ್ದೆ, ಆ ಬಗ್ಗೆ ಹೆಮ್ಮೆಯಿದೆ: ಪ್ರಜ್ಞಾ ಸಿಂಗ್ ಮತ್ತೊಂದು ಸ್ಫೋಟಕ ಹೇಳಿಕೆ

ಬಾಬರಿ ಮಸೀದಿ ಕೆಡವಲು ನಾನೂ ಸಹಕರಿಸಿದ್ದೆ, ಆ ಬಗ್ಗೆ ಹೆಮ್ಮೆಯಿದೆ ಎಂದು ಹೇಳುವ ಮೂಲಕ ವಿವಾದಿತ ಸನ್ಯಾಸಿನಿ ಸಾಧ್ವಿ ಪ್ರಜ್ಞಾ ಸಿಂಗ್ ಮತ್ತೊಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಭೋಪಾಲ್: ಬಾಬರಿ ಮಸೀದಿ ಕೆಡವಲು ನಾನೂ ಸಹಕರಿಸಿದ್ದೆ, ಆ ಬಗ್ಗೆ ಹೆಮ್ಮೆಯಿದೆ ಎಂದು ಹೇಳುವ ಮೂಲಕ ವಿವಾದಿತ ಸನ್ಯಾಸಿನಿ ಸಾಧ್ವಿ ಪ್ರಜ್ಞಾ ಸಿಂಗ್ ಮತ್ತೊಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಈ ಹಿಂದೆ ನಿಷ್ಠಾವಂತ ಪೊಲೀಸ್ ಅಧಿಕಾರಿ, ಹುತಾತ್ಮ ಹೇಮಂತ್ ಕರ್ಕರೆ ವಿರುದ್ಧ ಹೇಳಿಕೆ ನೀಡುವ ಮೂಲಕ ದೇಶಾದ್ಯಂತ ವ್ಯಾಪಕ ಟೀಕೆಗೆ ಗುರಿಯಾಗಿದ್ದ, ಪ್ರಜ್ಞಾ ಠಾಕೂರ್ ಇದೀಗ 'ಬಾಬರಿ ಮಸೀದಿಯ ತುದಿಗೆ ಏರಿ ಮಸೀದಿ ಕೆಡವಲು ನಾನೂ ನೆರವಾಗಿದ್ದೆ' ಎನ್ನುವ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಬಾಬರಿ ಮಸೀದಿ ವಿವಾದವನ್ನು ಮತ್ತೆ ರಾಜಕೀಯಕ್ಕೆ ಎಳೆದು ತಂದಿರುವ ಪ್ರಜ್ಞಾ ಶನಿವಾರ ಭೋಪಾಲ್‌ನಲ್ಲಿ ಪ್ರಚಾರ ಸಂದರ್ಭದಲ್ಲಿ ಟಿವಿ ಚಾನಲ್‌ಗೆ ನೀಡಿದ ಹೇಳಿಕೆಯಲ್ಲಿ "ನಾವು ಖಂಡಿತಾ ರಾಮಮಂದಿರ ಕಟ್ಟುತ್ತೇವೆ. ಭವ್ಯವಾದ ಮಂದಿರ ನಿರ್ಮಿಸುತ್ತೇವೆ. ರಾಮಮಂದಿರ ನಿರ್ಮಾಣಕ್ಕೆ ಕಾಲಮಿತಿ ಇದೆಯೇ ಎಂದು ಪ್ರಶ್ನಿಸಿದಾಗ, ನಾವು ಮಂದಿರ ನಿರ್ಮಿಸುತ್ತೇವೆ. ಈಗಾಗಲೇ ನಾವು ಮಸೀದಿ ಕೆಡವಿದ್ದೇವೆ ಎಂದು ಹೇಳಿದರು.
"ಮಸೀದಿ ಧ್ವಂಸಗೊಳಿಸಲು ನಾನು ಗೋಪುರದ ತುದಿಗೆ ಏರಿದ್ದೆ. ದೇವರು ಇದನ್ನು ಮಾಡುವ ಅಪೂರ್ವ ಅವಕಾಶ ನೀಡಿದ್ದಕ್ಕೆ ಮತ್ತು ಆ ಶಕ್ತಿ ನೀಡಿದ್ದಕ್ಕೆ ನನಗೆ ಹೆಮ್ಮೆ ಇದೆ. ನಾನು ಅದನ್ನು ಸಾಧಿಸಿದೆ. ದೇಶದ ಕಳಂಕವನ್ನು ಅಳಿಸಿ ಹಾಕಿದೆ. ಇದೀಗ ನಾವು ಅಲ್ಲಿ ಭವ್ಯವಾದ ಮಂದಿರ ನಿರ್ಮಿಸುತ್ತೇವೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT