ಸಂಗ್ರಹ ಚಿತ್ರ 
ದೇಶ

ಪ್ರಿಯಾಂಕಾ ಗಾಂಧಿಗೆ ಹಿನ್ನಡೆ, ಮೋದಿ ವಿರುದ್ಧ ವಾರಣಾಸಿಯಲ್ಲಿ ಎಸ್ ಪಿ-ಬಿಎಸ್ ಪಿ ಮೈತ್ರಿ ಅಭ್ಯರ್ಥಿ ಘೋಷಣೆ

ವಾರಣಾಸಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಸ್ಪರ್ಧೆ ಮಾಡುವ ಕುರಿತು ಇಂಗಿತ ವ್ಯಕ್ತಪಡಿಸಿದ್ದ ಪ್ರಿಯಾಂಕಾ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷದ ಆಸೆಗೆ ಎಸ್ ಪಿ-ಬಿಎಸ್ ಪಿ ಮೈತ್ರಿ ತಣ್ಣೀರೆರಚಿದ್ದು, ವಾರಣಾಸಿ ಕ್ಷೇತ್ರಕ್ಕೆ ತಮ್ಮ ಮೈತ್ರಿ ಅಭ್ಯರ್ಥಿಯನ್ನು ಕಣಕ್ಕಿಳಿಸಿವೆ.

ವಾರಣಾಸಿ: ವಾರಣಾಸಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಸ್ಪರ್ಧೆ ಮಾಡುವ ಕುರಿತು ಇಂಗಿತ ವ್ಯಕ್ತಪಡಿಸಿದ್ದ ಪ್ರಿಯಾಂಕಾ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷದ ಆಸೆಗೆ ಎಸ್ ಪಿ-ಬಿಎಸ್ ಪಿ ಮೈತ್ರಿ ತಣ್ಣೀರೆರಚಿದ್ದು, ವಾರಣಾಸಿ ಕ್ಷೇತ್ರಕ್ಕೆ ತಮ್ಮ ಮೈತ್ರಿ ಅಭ್ಯರ್ಥಿಯನ್ನು ಕಣಕ್ಕಿಳಿಸಿವೆ.
ಹೌದು.. ಸೋಮವಾರ ಬಿಎಸ್ ಪಿ ಮತ್ತು ಎಸ್ ಪಿ ಮೈತ್ರಿ ಪಕ್ಷಗಳು ತಮ್ಮ ಮತ್ತೊಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು. ಈ ಪಟ್ಟಿಯಲ್ಲಿ ತಮ್ಮ ವಾರಣಾಸಿ ಕ್ಷೇತ್ರದಿಂದಲೂ ಸ್ಪರ್ಧಿಯನ್ನು ಕಣಕ್ಕಿಳಿಸಿವೆ. ಈ ಹಿಂದೆ ಇದೇ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ವತಿಯಿಂದ ರಾಹುಲ್ ಗಾಂಧಿ ಸಹೋದರಿ ಪ್ರಿಯಾಂಕಾಗಾಂಧಿ ಸ್ಪರ್ಧೆ ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ಇದೇ ಕಾರಣಕ್ಕೆ ಬಿಎಸ್ ಪಿ ಮತ್ತು ಎಸ್ ಪಿ ಪಕ್ಷಗಳು ವಾರಣಾಸಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವ ಸಾಧ್ಯತೆಗಳ ಕುರಿತು ಲೆಕ್ಕಾಚಾರಾ ಹಾಕಲಾಗಿತ್ತು. 
ಆದರೆ ಇದೀಗ ಈ ಲೆಕ್ಕಾಚಾರಗಳನ್ನೆಲ್ಲಾ ಮೈತ್ರಿ ಪಕ್ಷಗಳು ಉಲ್ಟಾ ಮಾಡಿದ್ದು, ವಾರಣಾಸಿಯಲ್ಲಿ ತಮ್ಮದೇ ಮೈತ್ರಿ ಅಭ್ಯರ್ಥಿಯನ್ನು ಕಣಕ್ಕಿಳಿಸಿವೆ. ಸ್ಥಳೀಯ ಕಾಂಗ್ರೆಸ್ ಶಾಸಕರ ಪುತ್ರಿ ಶಾಲಿನಿ ಯಾದವ್ ರನ್ನು ಬಿಎಸ್ ಪಿ ಮತ್ತು ಎಸ್ ಪಿ ಪಕ್ಷಗಳು ವಾರಣಾಸಿಯಿಂದ ಕಣಕ್ಕಿಳಿಸಿವೆ. ಮೈತ್ರಿ ಪಕ್ಷಗಳ ಈ ನಡೆ ಇದೀಗ ಕಾಂಗ್ರೆಸ್ ಪಕ್ಷಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದ್ದು, ಈ ಹಿಂದೆ ಅಂದರೆ 2014ರಲ್ಲಿ ಕಾಂಗ್ರೆಸ್ ಪಕ್ಷ ಇದೇ ವಾರಣಾಸಿಯಿಂದ ಕಾಂಗ್ರೆಸ್ ಪಕ್ಷ ಅಜಯ್ ರಾಯ್ ರನ್ನು ಕಣಕ್ಕಿಳಿಸಿತ್ತು. ಆದರೆ ಅಜಯ್ ರಾಯ್ ಮೋದಿ ವಿರುದ್ಧ ಬರೊಬ್ಬರಿ 5.8ಲಕ್ಷ ಮತಗಳ ಅಂತರದಲ್ಲಿ ಸೋತಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT