ಸಂಗ್ರಹ ಚಿತ್ರ 
ದೇಶ

2016ರಲ್ಲಿ ಬಾಕ್ಸಿಂಗ್ ಪಂದ್ಯಕ್ಕೆ ಪ್ರಧಾನಿ ಮೋದಿ ಆಹ್ವಾನಿಸಿದ್ದ ವಿಜೇಂದರ್ ಸಿಂಗ್ ಕಾಂಗ್ರೆಸ್ ಪಕ್ಷ ಸೇರಿದ್ದೇಕೆ?

ಬಾಕ್ಸರ್ ವಿಜೇಂದರ್ ಸಿಂಗ್ ಅವರ ಕಾಂಗ್ರೆಸ್ ಸೇರ್ಪಡೆ ವಿಚಾರ ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ಈ ಹಿಂದೆ 2016ರಲ್ಲಿ ಬಾಕ್ಸಿಂಗ್ ಪಂದ್ಯಕ್ಕೆ ಪ್ರಧಾನಿ ಮೋದಿ ಅವರನ್ನು ಆಹ್ವಾನಿಸಿದ್ದ ವಿಜೇಂದರ್ ಸಿಂಗ್ ಈಗ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ನವದೆಹಲಿ: ಬಾಕ್ಸರ್ ವಿಜೇಂದರ್ ಸಿಂಗ್ ಅವರ ಕಾಂಗ್ರೆಸ್ ಸೇರ್ಪಡೆ ವಿಚಾರ ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ಈ ಹಿಂದೆ 2016ರಲ್ಲಿ ಬಾಕ್ಸಿಂಗ್ ಪಂದ್ಯಕ್ಕೆ ಪ್ರಧಾನಿ ಮೋದಿ ಅವರನ್ನು ಆಹ್ವಾನಿಸಿದ್ದ ವಿಜೇಂದರ್ ಸಿಂಗ್ ಈಗ  ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಬಾಕ್ಸರ್​ ವಿಜೇಂದರ್​ ಸಿಂಗ್​ ನಿಕಟ ಸ್ನೇಹ ಹೊಂದಿದ್ದವರು. ಇವರಿಬ್ಬರೂ ತಮ್ಮ ಟ್ವಿಟರ್​ಗಳಲ್ಲಿ ಕೂಡ ಪರಸ್ಪರ ಸ್ನೇಹಪೂರ್ವಕವಾಗಿ ಟ್ವೀಟ್​ ಮಾಡಿಕೊಂಡಿದ್ದರು. ವಿಜೇಂದರ್​ ಸಿಂಗ್​ ಅವರಿಗೆ ಶುಭಾಶಯ ತಿಳಿಸಿ 2016ರಲ್ಲಿ ಕೂಡ ಮೋದಿಯವರು ಟ್ವೀಟ್​ ಮಾಡಿದ್ದರು. ಅಲ್ಲದೆ ತಾವು ಮೋದಿಯವರ ಜತೆಗೆ ಇರುವ ಫೋಟೋವನ್ನು ವಿಜೇಂದರ್​ ಶೇರ್​ ಮಾಡಿಕೊಂಡಿದ್ದರು. ಆದರೆ ಈಗ ಕಾಂಗ್ರೆಸ್​ ಸೇರಿರುವ ವಿಜೇಂದರ್​ ಸಿಂಗ್​, ಪ್ರಧಾನಿ ಮೋದಿಯವರು ತುಂಬ ಸುಳ್ಳು ಹೇಳುತ್ತಾರೆ ಎಂದು ಆರೋಪಿಸಿದ್ದಾರೆ. 
ಇಷ್ಟಕ್ಕೂ ವಿಜೇಂದರ್ ಸಿಂಗ್ ತಾವೇಕೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದೆ ಎಂಬ ವಿಚಾರವನ್ನು ಬಹಿರಂಗ ಪಡಿಸಿದ್ದಾರೆ. ಖಾಸಗಿ ವಾಹಿನಿಯ ಸಂದರ್ಶನವೊಂದರಲ್ಲಿ ಮಾತನಾಡಿರುವ ವಿಜೇಂದರ್ ಸಿಂಗ್, ಪ್ರಧಾನಿ ಮೋದಿ 2014ರ ಲೋಕಸಭಾ ಚುನಾವಣೆಯಲ್ಲಿ ನೀಡಿದ್ದ ಒಂದು ಮಾತು ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರಲು ಕಾರಣ ಎಂದು ಹೇಳಿದ್ದಾರೆ.
ದಕ್ಷಿಣ ದೆಹಲಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ ಅಭ್ಯರ್ಥಿಯಾಗಿ ಟಿಕೆಟ್​ ಪಡೆದಿರುವ ವಿಜೇಂದರ್​ ಅವರು, ಯಾರನ್ನಾದರೂ ಹೊಗಳುವ ಮುನ್ನ ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು. ಅವರ ಮುಖವಾಡದ ಹಿಂದೆ ಬೇರೆಯೇ ಇರುತ್ತದೆ ಎಂದು ಹೇಳಿದ್ದಾರೆ.
ನರೇಂದ್ರ ಮೋದಿಯವರು 15-20 ಲಕ್ಷ ರೂಪಾಯಿಯನ್ನು ದೇಶದ ಬಡವರ ಖಾತೆಗೆ ಹಾಕುವುದಾಗಿ ಹೇಳಿದ್ದರು. ಇಂದಿಗೂ ಆ ಯುಟ್ಯೂಬ್​ ವಿಡಿಯೋ ನನ್ನ ಬಳಿ ಇದೆ. ಬಡವರು ಅವರನ್ನು ನಂಬಿ ಮತಹಾಕಿದರು. ಆದರೆ ಮೋದಿ ಸುಳ್ಳು ಹೇಳಿದರು. ಭರವಸೆಯನ್ನು ಈಡೇರಿಸಲಿಲ್ಲ. ನನ್ನ ದೃಷ್ಟಿಕೋನ, ವಿಚಾರಧಾರೆಗಳು, ಯೋಚಿಸುವ ವಿಧಾನಗಳೆಲ್ಲ ಕಾಂಗ್ರೆಸ್​ ಪಕ್ಷದ ಸಿದ್ಧಾಂತಗಳೊಂದಿಗೆ ಹೊಂದಿಕೆಯಾಗುತ್ತವೆ. ಕಾಂಗ್ರೆಸ್​ ಜನರನ್ನು ಶಿಕ್ಷಿತರನ್ನಾಗಿ ಮಾಡುತ್ತಿದೆ. ಒಳ್ಳೆ ಮುಖಂಡರನ್ನು ಹೊಂದಿದೆ. ಅವರು ಭವಿಷ್ಯದ ಬಗ್ಗೆ ಯೋಚಿಸುತ್ತಾರೆ. ಒಳ್ಳೊಳ್ಳೆ ಸಂಗತಿಗಳ ಬಗ್ಗೆ ಮಾತನಾಡುತ್ತಾರೆ. ಇದೇ ಕಾರಣಕ್ಕೆ ಕಾಂಗ್ರೆಸ್​ ಪಕ್ಷಕ್ಕೆ ಸೇರಿದೆ ಎಂದು ವಿಜೇಂದರ್ ಸಿಂಗ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT