ಅಮಿತ್ ಶಾ 
ದೇಶ

ಉಗ್ರರು ನಿಮ್ಮ ಸಂಬಂಧಿಕರೇ? ರಾಹುಲ್, ಮಾಯಾವತಿ, ಅಖಿಲೇಶ್ ಗೆ ಅಮಿತ್ ಶಾ ಪ್ರಶ್ನೆ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಬಿಎಸ್ಪಿ ವರಿಷ್ಠೆ ಮಾಯಾವತಿ ಹಾಗೂ ಎಸ್ಪಿ ನಾಯಕ ಅಖಿಲೇಶ್ ಯಾದವ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಉಗ್ರರು ನಿಮ್ಮ ಸಂಬಂಧಿಕರೇ ಎಂದು ಅವರನ್ನು ಕೇಳಿದ್ದಾರೆ.

ಗಾಜಿಪುರ್ : ಭಾರತೀಯ ವಾಯುಸೇನೆಯಿಂದ ಪಾಕಿಸ್ತಾನದ ಬಾಲಾಕೋಟ್ ನಲ್ಲಿ ನಡೆದ ಏರ್ ಸ್ಟ್ರೈಕ್  ಹೂಗಳಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಬಿಎಸ್ಪಿ ವರಿಷ್ಠೆ ಮಾಯಾವತಿ ಹಾಗೂ ಎಸ್ಪಿ ನಾಯಕ ಅಖಿಲೇಶ್  ಯಾದವ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಉಗ್ರರು ನಿಮ್ಮ ಸಂಬಂಧಿಕರೇ ಎಂದು ಅವರನ್ನು ಕೇಳಿದ್ದಾರೆ.

ಉತ್ತರ ಪ್ರದೇಶದ ಗಾಜಿಪುರ್ ನಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅಮಿತ್ ಶಾ,  ಏರ್ ಸ್ಟ್ರೈಕ್ ಬಗ್ಗೆ ಇಡೀ ದೇಶದಲ್ಲಿಯೇ ಸಂಭ್ರಮಾಚರಣೆ ನಡೆಸಿದರೆ, ಪಾಕಿಸ್ತಾನ ಮತ್ತು ರಾಹುಲ್ ಗಾಂಧಿ, ಮಾಯಾವತಿ, ಮತ್ತು ಅಖಿಲೇಶ್ ಅವರ ಕಚೇರಿಗಳಲ್ಲಿ ದು:ಖ ಆವರಿಸಿತ್ತು ಎಂದು ಹೇಳಿದರು.

ಪಾಕಿಸ್ತಾನದ ಉಗ್ರರು ಹತ್ಯೆಯಾದಾಗ ಇವರೆಲ್ಲರೂ ಏಕೆ ದು:ಖದಲ್ಲಿದ್ದರು ಎಂಬುದು ನನಗೆ ಅರ್ಥವಾಗುತ್ತಿಲ್ಲ. ನಾವು ಬಿಜೆಪಿಗೆ ಸೇರಿದ್ದು, ನರೇಂದ್ರ ಮೋದಿ ನಮ್ಮ ಪ್ರಧಾನಿ. ಉಗ್ರರೊಂದಿಗೆ ಯಾವುದೇ ರಾಜಿ ಇಲ್ಲ. ದೇಶದ ಭದ್ರತೆಯೊಂದಿಗೆ ಯಾರು ಆಟವಾಡಬಾರದು ಎಂದರು.

ಜಮ್ಮು- ಕಾಶ್ಮೀರಕ್ಕೆ ಪ್ರತ್ಯೇಕ ಪ್ರಧಾನಿಯಾಗಬೇಕೆಂಬ  ನ್ಯಾಷನಲ್ ಕಾನ್ಫೆರೆನ್ಸ್  ನಾಯಕ ಒಮರ್ ಅಬ್ದುಲ್ಲಾ ಬೇಡಿಕೆ ಬಗ್ಗೆ ರಾಹುಲ್ ಗಾಂಧಿ ಮೌನವಾಗಿರುವುದನ್ನು ಅಮಿತ್ ಶಾ ಟೀಕಿಸಿದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಹುಲ್ ಮೌನವಾಗಿರುವುದನ್ನು ಗಮನಿದರೆ ಅವರು ವೋಟ್ ಬ್ಯಾಂಕ್ ಬಗ್ಗೆ ಯೋಚಿಸಿರುವ ಸಾಧ್ಯತೆ ಇದೆ. ಕಾಶ್ಮೀರವನ್ನು ಭಾರತದಿಂದ  ಯಾರೂ ಪ್ರತ್ಯೇಕಿಸಲು ಸಾಧ್ಯವಿಲ್ಲ, ಪ್ರಧಾನಿ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಲಿದ್ದಾರೆ ಎಂದು ಅಮಿತ್ ಶಾ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಆತ್ಮವಿಶ್ವಾಸದ ಭಾರತ ಇಂದು ಜಗತ್ತಿಗೆ ಭರವಸೆಯ ದಾರಿದೀಪವಾಗಿದೆ, ಸುಗಮ ಬಜೆಟ್ ಅಧಿವೇಶನಕ್ಕೆ ಎಲ್ಲರೂ ಸಹಕರಿಸಿ: ಪ್ರಧಾನಿ ಮೋದಿ ಮನವಿ-Video

Ajit Pawar: ಇಂದು ಬೆಳಗ್ಗೆ 11 ಗಂಟೆಗೆ ಸರ್ಕಾರಿ ಗೌರವಗಳೊಂದಿಗೆ ಬಾರಾಮತಿಯಲ್ಲಿ ಅಂತ್ಯಕ್ರಿಯೆ: ಪ್ರಧಾನಿ ಮೋದಿ, ಅಮಿತ್ ಶಾ ಭಾಗವಹಿಸುವ ನಿರೀಕ್ಷೆ

'ಅಂಬರೀಷ್ ನ ಕಾಂಗ್ರೆಸ್‌ಗೆ ಕರ್ಕೊಂಡು ಬಂದೆ, ಅವನು ತೊಳೆದುಬಿಟ್ಟು ಹೋದ: ಲೋಕಸಭೆ ಚುನಾವಣೆಯಲ್ಲಿ 36 ಕೋಟಿ ಖರ್ಚು ಮಾಡಿಸಿ HDK ಮೋಸ ಮಾಡಿದ'

ತಮಿಳು ನಾಡು ಚುನಾವಣೆ: ದೆಹಲಿಯಲ್ಲಿ ಕನಿಮೋಳಿ-ರಾಹುಲ್ ಗಾಂಧಿ ಭೇಟಿ, ಒಪ್ಪಂದಕ್ಕೆ ಬಾರದ ಮಾತುಕತೆ, ಕಾಂಗ್ರೆಸ್ ಗೆ ಸಿಗುತ್ತಾ ಹೆಚ್ಚಿನ ಸ್ಥಾನ?

ಅಜಿತ್ ಪವಾರ್ ದುರ್ಮರಣದಲ್ಲಿ 'ಪಿತೂರಿ' ನಡೆದಿದೆಯೇ? ಶರದ್ ಪವಾರ್ ಮೊದಲ ಪ್ರತಿಕ್ರಿಯೆ...

SCROLL FOR NEXT