ದೇಶ

ನೀತಿ ಸಂಹಿತೆ ಉಲ್ಲಂಘನೆ: ಗೌತಮ್ ಗಂಭೀರ್ ವಿರುದ್ಧ ಎಫ್ಐಆರ್

Raghavendra Adiga
ನವದೆಹಲಿ: ಮಾಜಿ ಕ್ರಿಕೆಟಿಗ ದೆಹಲಿ ಲೋಕಸಬಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೌತಮ್ ಗಂಬೀರ್ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ದೂರು ಬಂದಿದ್ದು ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಪೂರ್ವ ದೆಹಲಿಯಲ್ಲಿ ಅನುಮತಿಯಿಲ್ಲದೆ ರ್ಯಾಲಿ ನಡೆಸಿದ್ದಾರೆಂದು ಆರೋಪಿಸಿ ಚುನಾವಣಾ ಆಯೋಗದ ಪೂರ್ವ ದೆಹಲಿ ರಿಟರ್ನ್ಸಿಂಗ್ ಅಧಿಕಾರಿಯು ಗಂಬೀರ್ ವಿರುದ್ಧ ಎಫ್ಐಆರ್ ದಾಖಲಿಸಲು ನಿರ್ದೇಶನ ನೀಡಿದ್ದರು.
ಭಾರತ ಆರಂಭಿಕ ಆಟಗಾರರಾಗಿದ್ದ ಗಂಬೀರ್ ಪೂರ್ವ ದೆಹಲಿ ಸಂಸದೀಯ ಕ್ಷೇತ್ರದಿಂಡ ಬಿಜೆಪಿ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಅರ್ವಿಂದರ್ ಸಿಂಗ್ ಲವ್ಲಿ  ಹಾಗೂ ಎಪಿನ ಅತೀಷಿ  ಎದುರು ಗಂಭೀರ್ ಸ್ಪರ್ಧಿಸಿದ್ದಾರೆ.
ಇದಕ್ಕೆ ಹಿಂದೆ ಗಂಭೀರ್ ಎರಡು ವೋಟರ್ ಐಡಿ ಹೊಂದಿದ್ದಾರೆ ಎಂದು ಆಮ್ ಆದ್ಮಿ ಪಕ್ಷ  ಆರೋಪಿಸಿದ್ದು ಈ ಸಂಬಂಧ ತೀಸ್ ಹಜಾರಿ ನ್ಯಾಯಾಲಯದಲ್ಲಿ ಲ್ಲಿ ಕ್ರಿಮಿನಲ್ ದೂರು ದಾಖಲಿಸಿದೆ.
SCROLL FOR NEXT