ಚುನಾವಣಾ ಆಯೋಗ ಅಧಿಕಾರಿಗಳನ್ನು ಭೇಟಿ ಮಾಡಿದ ನಂತರ ಮಾಧ್ಯಮಗಳ ಮುಂದೆ ಮಾತನಾಡಿದ ವಿರೋಧ ಪಕ್ಷದ ನಾಯಕ ದಿನೇಶ್ ತ್ರಿವೇದಿ 
ದೇಶ

ಇವಿಎಂನಲ್ಲಿ ಪಕ್ಷದ ಚಿಹ್ನೆ ಮುಂದೆ ಬಿಜೆಪಿ ಹೆಸರು; ವಿರೋಧ ಪಕ್ಷಗಳ ಆರೋಪ ನಿರಾಕರಿಸಿದ ಚು.ಆ

ಪಶ್ಚಿಮ ಬಂಗಾಳದ ಬರ್ರಕ್ ಪೊರ ಕ್ಷೇತ್ರದಲ್ಲಿ ಅಣಕು ಮತದಾನದ ವೇಳೆ ವಿದ್ಯುನ್ಮಾನ ಮತಯಂತ್ರದಲ್ಲಿ ...

ನವದೆಹಲಿ: ಪಶ್ಚಿಮ ಬಂಗಾಳದ ಬರ್ರಕ್ ಪೊರ ಕ್ಷೇತ್ರದಲ್ಲಿ ಅಣಕು ಮತದಾನದ ವೇಳೆ ವಿದ್ಯುನ್ಮಾನ ಮತಯಂತ್ರದಲ್ಲಿ ಬಿಜೆಪಿ ಚಿಹ್ನೆಯ ಮುಂದೆ ಮಾತ್ರ ಪಕ್ಷದ ಹೆಸರನ್ನು ಪ್ರದರ್ಶಿಸಲಾಗಿದೆ ಎಂದು ಆರೋಪಿಸಿ ವಿರೋಧ ಪಕ್ಷಗಳು ಚುನಾವಣಾ ಆಯೋಗಕ್ಕೆ ದೂರು ನೀಡಿವೆ. ಆದರೆ 2013ರಿಂದಲೂ ಇದೇ ರೀತಿ ಚುನಾವಣಾ ಆಯೋಗ ಅನುಸರಿಸಿಕೊಂಡು ಬಂದಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಕಾಂಗ್ರೆಸ್ ನ ಹಿರಿಯ ಮುಖಂಡ ಅಭಿಷೇಕ್ ಮನು ಸಿಂಘ್ವಿ, ಅಹ್ಮದ್ ಪಟೇಲ್, ತೃಣಮೂಲ ಕಾಂಗ್ರೆಸ್ ನ ದಿನೇಶ್ ತ್ರಿವೇದಿ ಮತ್ತು ಡೆರೆಕ್ ಒ ಬ್ರಿಯನ್ ನೇತೃತ್ವದಲ್ಲಿ ವಿರೋಧ ಪಕ್ಷಗಳ ನಿಯೋಗ ಮುಖ್ಯ ಚುನಾವಣಾಧಿಕಾರಿ ಸುನಿಲ್ ಅರೊರಾ ಅವರನ್ನು ಭೇಟಿ ಮಾಡಿ ಇಂತಹ ವಿದ್ಯುನ್ಮಾನ ಮತಯಂತ್ರಗಳನ್ನು ಉಳಿದ ಹಂತಗಳಲ್ಲಿ ತೆಗೆದುಹಾಕಬೇಕು ಅಥವಾ ಪಕ್ಷಗಳ ಹೆಸರುಗಳನ್ನು ವಿದ್ಯುನ್ಮಾನ ಮತಯಂತ್ರಗಳಲ್ಲಿ ಪಕ್ಷಗಳ ಚಿಹ್ನೆಯ ಮುಂದೆ ಸೇರಿಸಬೇಕು ಎಂದು ಒತ್ತಾಯಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕ್ಯಾಬಿನೆಟ್ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT