ಮತದಾರರಿಗೆ ಜನತೆಗೆ ಭದ್ರತೆಗಿಂತ ಉದ್ಯೋಗ, ಆರ್ಥಿಕತೆಯೇ ಪ್ರಮುಖ ಚುನಾವಣಾ ವಿಷಯ! 
ದೇಶ

ಮತದಾರರಿಗೆ ಭದ್ರತೆಗಿಂತ ಉದ್ಯೋಗ, ಆರ್ಥಿಕತೆಯೇ ಪ್ರಮುಖ ಚುನಾವಣಾ ವಿಷಯ!

ದೇಶದ ಮತದಾರರಿಗೆ ಭದ್ರತೆಗಿಂತ ಉದ್ಯೋಗ, ಆರ್ಥಿಕತೆಯೇ ಪ್ರಮುಖ ಚುನಾವಣಾ ವಿಷಯವಾಗಿದೆ ಎಂದು ತಿಳಿದುಬಂದಿದೆ.

ನವದೆಹಲಿ: ಲೋಕಸಭಾ ಚುನಾವಣೆಗೆ ಏ.29 ರಂದು 4 ನೇ ಹಂತದ ಮತದಾನ ನಡೆಯಲಿದೆ. ಈ ನಡುವೆ ಸಿ-ವೋಟರ್-ಐಎಎನ್ಎಸ್ ನಡೆಸಿದ ಸಮೀಕ್ಷೆಯಲ್ಲಿ ದೇಶದ ಮತದಾರರಿಗೆ ಭದ್ರತೆಗಿಂತ ಉದ್ಯೋಗ, ಆರ್ಥಿಕತೆಯೇ ಪ್ರಮುಖ ಚುನಾವಣಾ ವಿಷಯವಾಗಿದೆ ಎಂದು ತಿಳಿದುಬಂದಿದೆ. 
ಏ.26 ರಂದು ನಡೆದಿರುವ ಸಮೀಕ್ಷೆಯಲ್ಲಿ ಮತರಾರರು ನಿರುದ್ಯೋಗ ವಿಷಯಕ್ಕೆ ಹೆಚ್ಚಿನ ಒತ್ತು ನೀಡುತ್ತಿರುವುದು ಬಹಿರಂಗಗೊಂಡಿದೆ. ಅರ್ಥಿಕತೆಯ ವಿಷಯ ದೇಶದಲ್ಲಿರುವ ಪ್ರಮುಖ ಸಮಸ್ಯೆಗಳಲ್ಲಿ ಒಂದು ಎಂದು ಶೇ.57.04 ರಷ್ಟು ಮಂದಿ ಹೇಳಿದ್ದರೆ ಶೇ.11.74 ರಷ್ಟು ಮಂದಿ ಭದ್ರತೆ ದೇಶದಲ್ಲಿ ಅತ್ಯಂತ ಕಾಳಜಿ ವಹಿಸಬೇಕಾದ ಅಂಶ ಎಂದು ಹೇಳಿದ್ದಾರೆ. 
ಚುನಾವಣೆ ಪ್ರಾರಂಭವಾಗುವುದಕ್ಕಿಂತಲೂ ಮುನ್ನ ನಿರುದ್ಯೋಗ ಸಮಸ್ಯೆಯೇ ಚುನಾವಣಾ ವಿಷಯವಾಗಿತ್ತು. ಈ ಟ್ರೆಂಡ್ ಚುನಾವಣೆ ಪ್ರಾರಂಭವಾಗಿ 4 ನೇ ಹಂತದ ಮತದಾನದ ವೇಳೆಯಲ್ಲಿಯೂ ಪ್ರಮುಖ ಚುನಾವಣಾ ವಿಷಯವಾಗಿ ಮುಂದುವರೆದಿದೆ. ಆದರೆ ಮಾರ್ಚ್ ತಿಂಗಳಲ್ಲಿ ಮಾತ್ರ ದೇಶದ ಜನತೆ ಭದ್ರತೆಯನ್ನು ಅತ್ಯಂತ ಪ್ರಮುಖ ವಿಷಯ ಎಂದು ಪರಿಗಣಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT