ಮತದಾರರಿಗೆ ಜನತೆಗೆ ಭದ್ರತೆಗಿಂತ ಉದ್ಯೋಗ, ಆರ್ಥಿಕತೆಯೇ ಪ್ರಮುಖ ಚುನಾವಣಾ ವಿಷಯ! 
ದೇಶ

ಮತದಾರರಿಗೆ ಭದ್ರತೆಗಿಂತ ಉದ್ಯೋಗ, ಆರ್ಥಿಕತೆಯೇ ಪ್ರಮುಖ ಚುನಾವಣಾ ವಿಷಯ!

ದೇಶದ ಮತದಾರರಿಗೆ ಭದ್ರತೆಗಿಂತ ಉದ್ಯೋಗ, ಆರ್ಥಿಕತೆಯೇ ಪ್ರಮುಖ ಚುನಾವಣಾ ವಿಷಯವಾಗಿದೆ ಎಂದು ತಿಳಿದುಬಂದಿದೆ.

ನವದೆಹಲಿ: ಲೋಕಸಭಾ ಚುನಾವಣೆಗೆ ಏ.29 ರಂದು 4 ನೇ ಹಂತದ ಮತದಾನ ನಡೆಯಲಿದೆ. ಈ ನಡುವೆ ಸಿ-ವೋಟರ್-ಐಎಎನ್ಎಸ್ ನಡೆಸಿದ ಸಮೀಕ್ಷೆಯಲ್ಲಿ ದೇಶದ ಮತದಾರರಿಗೆ ಭದ್ರತೆಗಿಂತ ಉದ್ಯೋಗ, ಆರ್ಥಿಕತೆಯೇ ಪ್ರಮುಖ ಚುನಾವಣಾ ವಿಷಯವಾಗಿದೆ ಎಂದು ತಿಳಿದುಬಂದಿದೆ. 
ಏ.26 ರಂದು ನಡೆದಿರುವ ಸಮೀಕ್ಷೆಯಲ್ಲಿ ಮತರಾರರು ನಿರುದ್ಯೋಗ ವಿಷಯಕ್ಕೆ ಹೆಚ್ಚಿನ ಒತ್ತು ನೀಡುತ್ತಿರುವುದು ಬಹಿರಂಗಗೊಂಡಿದೆ. ಅರ್ಥಿಕತೆಯ ವಿಷಯ ದೇಶದಲ್ಲಿರುವ ಪ್ರಮುಖ ಸಮಸ್ಯೆಗಳಲ್ಲಿ ಒಂದು ಎಂದು ಶೇ.57.04 ರಷ್ಟು ಮಂದಿ ಹೇಳಿದ್ದರೆ ಶೇ.11.74 ರಷ್ಟು ಮಂದಿ ಭದ್ರತೆ ದೇಶದಲ್ಲಿ ಅತ್ಯಂತ ಕಾಳಜಿ ವಹಿಸಬೇಕಾದ ಅಂಶ ಎಂದು ಹೇಳಿದ್ದಾರೆ. 
ಚುನಾವಣೆ ಪ್ರಾರಂಭವಾಗುವುದಕ್ಕಿಂತಲೂ ಮುನ್ನ ನಿರುದ್ಯೋಗ ಸಮಸ್ಯೆಯೇ ಚುನಾವಣಾ ವಿಷಯವಾಗಿತ್ತು. ಈ ಟ್ರೆಂಡ್ ಚುನಾವಣೆ ಪ್ರಾರಂಭವಾಗಿ 4 ನೇ ಹಂತದ ಮತದಾನದ ವೇಳೆಯಲ್ಲಿಯೂ ಪ್ರಮುಖ ಚುನಾವಣಾ ವಿಷಯವಾಗಿ ಮುಂದುವರೆದಿದೆ. ಆದರೆ ಮಾರ್ಚ್ ತಿಂಗಳಲ್ಲಿ ಮಾತ್ರ ದೇಶದ ಜನತೆ ಭದ್ರತೆಯನ್ನು ಅತ್ಯಂತ ಪ್ರಮುಖ ವಿಷಯ ಎಂದು ಪರಿಗಣಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

SCROLL FOR NEXT