ಅಭಿಷೇಕ್ ಮನು ಸಂಘ್ವಿ, ಸುದ್ದಿಗೋಷ್ಠಿ
ನವದೆಹಲಿ: ಇವಿಎಂ ಟ್ಯಾಂಪರ್ ವಿವಾದದ ಬಳಿಕ ಹಾಲಿ ಲೋಕಸಭಾ ಚುನಾವಣೆಯಲ್ಲಿ ಮತ್ತೊಂದು ವಿವಾದ ಕೇಳಿಬಂದಿದ್ದು, ಇವಿಎಂನಲ್ಲಿ 'ಕಮಲ' ಚಿಹ್ನೆ ಕೆಳಗೆ ಬಿಜೆಪಿ ಎಂದು ಬರೆದಿದೆ ವಿಪಕ್ಷಗಳು ಆರೋಪಿಸಿವೆ.
ಈ ಬಗ್ಗೆ ಕಾಂಗ್ರೆಸ್ ಪಕ್ಷದ ವಕ್ತಾರ ಅಭಿಷೇಕ್ ಮನು ಸಂಘ್ವಿ, ತೃಣಮೂಲ ಕಾಂಗ್ರೆಸ್ ನ ದಿನೇಶ್ ತ್ರಿವೇದಿ ಮತ್ತು ರಾಜ್ಯ ಸಭೆ ಸದಸ್ಯ ಡೆರಿಕ್ ಒ ಬ್ರೇನ್ ಗಂಭೀರ ಆರೋಪ ಮಾಡಿದ್ದು, ಇವಿಎಂನಲ್ಲಿ 'ಕಮಲ' ಚಿಹ್ನೆ ಕೆಳಗೆ ಬಿಜೆಪಿ ಎಂದು ಬರೆದಿದೆ ಆರೋಪಿಸಿದ್ದಾರೆ. ಅಲ್ಲದೆ ಈ ಬಗ್ಗೆ ವಿಪಕ್ಷಗಳ ಸುಮಾರು 10 ಜನ ನಾಯಕರ ತಂಡ ಚುನಾವಣಾ ಆಯುಕ್ತ ಸುನಿಲ್ ಅರೋರಾ ಅವರಿಗೆ ದೂರು ಸಲ್ಲಿಕೆ ಮಾಡಿದ್ದಾರೆ. ದೂರಿನಲ್ಲಿ ವಿವಾದಿತ ಇವಿಎಂ ನಲ್ಲಿ ಬಿಜೆಪಿಯ ಚಿನ್ಹೆ ಕಮಲದ ಅಡಿಯಲ್ಲಿರುವ ಬಿಜೆಪಿ ಅಕ್ಷರವನ್ನು ತೆಗೆದು ಹಾಕಬೇಕು ಎಂದು ಆಗ್ರಹಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ವಕ್ತಾರ ಅಭಿಷೇಕ್ ಮನು ಸಂಘ್ವಿ, 'ಇವಿಎಂನಲ್ಲಿ ಕಮಲದ ಚಿಹ್ನೆ ಕೆಳಗೆ ಬಿಜೆಪಿ ಎಂದು ಬರೆದಿರುವುದು ಸ್ಪಷ್ಟವಾಗಿ ಕಾಣುತ್ತದೆ. ಯಾವುದೇ ಒಂದು ರಾಜಕೀಯ ಪಕ್ಷ ತನ್ನ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಜೊತೆಯಾಗಿ ಬಳಸಬಾರದು ಎಂದು ಹೇಳಿದ್ದಾರೆ.
ಅಂತೆಯೇ ಒಂದು ವೇಳೆ ಬಿಜೆಪಿ ವಿರುದ್ಧ ಚುನಾವಣಾ ಆಯೋಗ ಕ್ರಮಕ್ಕೆ ಮುಂದಾಗದಿದ್ದರೆ ನಾವು ಸುಪ್ರೀಂ ಕೋರ್ಟ್ ಮೆಟ್ಟಿಲೇರುವುದಾಗಿಯೂ ಸಂಘ್ವಿ ಎಚ್ಚರಿಕೆ ನೀಡಿದ್ದಾರೆ.