ದೇಶ

'ಮಮತಾ ಬ್ಯಾನರ್ಜಿ ಅಧಿಕಾರದಲ್ಲಿ ಮುಂದುವರೆದರೆ ಪಶ್ಚಿಮ ಬಂಗಾಳ ಮತ್ತೊಂದು ಜಮ್ಮು-ಕಾಶ್ಮೀರದಂತಾಗುತ್ತೆ'

Srinivas Rao BV
ಹೌರಾ: ಮಮತಾ ಬ್ಯಾನರ್ಜಿ ಅಧಿಕಾರದಲ್ಲಿ ಮುಂದುವರೆದರೆ ಪಶ್ಚಿಮ ಬಂಗಾಳ ಮತ್ತೊಂದು ಜಮ್ಮು-ಕಾಶ್ಮೀರದಂತಾಗುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗೀಯ ಹೇಳಿದ್ದಾರೆ. 
ಮಮತಾ ಬ್ಯಾನರ್ಜಿಯ ಅತಿಯಾದ ಓಲೈಕೆ ರಾಜಕಾರಣದಿಂದಾಗಿ ರಾಜ್ಯವನ್ನು ಭಯೋತ್ಪಾದಕರು ಭದ್ರಕೋಟೆಯನ್ನಾಗಿ ಮಾಡಿಕೊಳ್ಳುವುದಕ್ಕೆ ಸಾಧ್ಯವಾಗಿದೆ. ಮಮತಾ ಬ್ಯಾನರ್ಜಿ ಅಧಿಕಾರದಲ್ಲಿ ಮುಂದುವರೆದರೆ ಇಸೀಸ್ ಉಗ್ರರು ಪಶ್ಚಿಮ ಬಂಗಾಳವನ್ನು ಯಾವುದೇ ಸಮಯದಲ್ಲೂ ಪ್ರವೇಶಿಸಬಹುದು ಎಂದು ಹೌರಾದಲ್ಲಿ ಪತ್ರಕರ್ತರನ್ನುದ್ದೇಶಿಸಿ ಮಾತನಾಡಿದ ವಿಜಯವರ್ಗೀಯ ಆತಂಕ ವ್ಯಕ್ತಪಡಿಸಿದ್ದಾರೆ. 
ಶ್ರೀಲಂಕಾದಲ್ಲಿ ಈಸ್ಟರ್ ಭಾನುವಾರ ಚರ್ಚ್, ರೆಸ್ಟೋರೆಂಟ್ ಗಳಲ್ಲಿ ಇಸ್ಲಾಮಿಕ್ ಭಯೋತ್ಪಾದಕರು ಆತ್ಮಾಹುತಿ ದಾಳಿ ನಡೆಸಿದ ಬಳಿಕ ಇಸೀಸ್ ಉಗ್ರ ಸಂಘಟನೆ ಬೆಂಗಾಲಿ ಭಾಷೆಯಲ್ಲಿ ಪೋಸ್ಟರ್ ಗಳನ್ನು ಪ್ರಕಟಿಸಿದ್ದು, ಪಶ್ಚಿಮ ಬಂಗಾಳಕ್ಕೆ ಪ್ರವೇಶಿಸಿ ಭಯೋತ್ಪಾದಕ ಕೃತ್ಯಗಳನ್ನು ನಡೆಸುವ ಸುಳಿವು ನೀಡಿತ್ತು. ಈ ಬೆನ್ನಲ್ಲೇ ಕೈಲಾಶ್ ವಿಜಯವರ್ಗೀಯ ಮಮತಾ ಬ್ಯಾನರ್ಜಿ ಅಧಿಕಾರದಲ್ಲಿ ಮುಂದುವರೆದರೆ ಪಶ್ಚಿಮ ಬಂಗಾಳ ಮತ್ತೊಂದು ಜಮ್ಮು-ಕಾಶ್ಮೀರದಂತಾಗುತ್ತೆ ಎಂದು ಹೇಳಿದ್ದಾರೆ. 
SCROLL FOR NEXT