ದೀದಿ ಕಳಿಸುವ ಮಣ್ಣಿನ ರಸಗುಲ್ಲಾನ ಪ್ರಸಾದದಂತೆ ಸ್ವೀಕರಿಸುತ್ತೇನೆ: ಮೋದಿ 
ದೇಶ

ದೀದಿ ಕಳಿಸುವ ಮಣ್ಣಿನ ರಸಗುಲ್ಲಾನ ಪ್ರಸಾದದಂತೆ ಸ್ವೀಕರಿಸುತ್ತೇನೆ: ಮೋದಿ

ದೀದಿ ಕಳಿಸುವ ಮಣ್ಣಿನ ರಸಗುಲ್ಲಾನ ಪ್ರಸಾದದಂತೆ ಸ್ವೀಕರಿಸುತ್ತೇನೆ ಎಂದು ನರೇಂದ್ರ ಮೋದಿ ಹೇಳಿದ್ದಾರೆ.

ನವದೆಹಲಿ: ದೀದಿ ಕಳಿಸುವ ಮಣ್ಣಿನ ರಸಗುಲ್ಲಾನ ಪ್ರಸಾದದಂತೆ ಸ್ವೀಕರಿಸುತ್ತೇನೆ ಎಂದು ನರೇಂದ್ರ ಮೋದಿ ಹೇಳಿದ್ದಾರೆ. 
ಅಕ್ಷಯ್ ಕುಮಾರ್ ಜೊತೆಗಿನ ಸಂದರ್ಶನದಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ತಮಗೆ ಮಮತಾ ಬ್ಯಾನರ್ಜಿ ಅವರು ಪ್ರತೀ ವರ್ಷ ಕುರ್ತಾ ಮತ್ತು ಸಿಹಿಯನ್ನ ಕಳುಹಿಸುತ್ತಾರೆ ಎಂದು ಹೇಳಿದ್ದರು. ಈ ವಿಷಯವನ್ನು ರಾಜಕೀಯವಾಗಿ ಬಳಸಿಕೊಂಡಿದ್ದರ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದ ಮಮತಾ ಬ್ಯಾನರ್ಜಿ ಮೋದಿಗೆ ಜೇಡಿಮಣ್ಣು ಮತ್ತು ಕಲ್ಲುಗಳಿರುವ ರಸಗುಲ್ಲಾಗಳನ್ನ ಕೊಡುತ್ತೇವೆ ಎಂದು ಹೇಳಿದ್ದರು. ಈ ರಸಗುಲ್ಲಾ ತಿಂದು ಮೋದಿಯ ಎಲ್ಲಾ ಹಲ್ಲುಗಳೂ ಉದುರಿಹೋಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. 
ಮಮತಾ ಬ್ಯಾನರ್ಜಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ದೀದಿ ಕಳಿಸುವ ಮಣ್ಣಿನ ರಸಗುಲ್ಲಾನ ಪ್ರಸಾದದಂತೆ ಸ್ವೀಕರಿಸುತ್ತೇನೆ ಎಂದು ಹೇಳಿದ್ದಾರೆ. 
ಬಂಗಾಳ ರಾಮಕೃಷ್ಣ ಪರಮಹಂಸ, ಸ್ವಾಮಿ ವಿವೇಕಾನಂದ, ಜೆಸಿ ಬೋಸ್, ನೇತಾಜಿ ಸುಭಾಶ್ ಚಂದ್ರ ಬೋಸ್, ಎಸ್ ಪಿ ಮುಖರ್ಜಿ ಅಂತಹ ಪೂಜ್ಯರು ಜನಿಸಿದ ನಾಡಿನ ಮಣ್ಣು, ಇಂಥಹ ಮಣ್ಣಿನಿಂದ ಮಾಡಿದ ರಸಗುಲ್ಲಾಗಳನ್ನು ಪಡೆಯುವುದು ನನ್ನ ಭಾಗ್ಯ, ಅದನ್ನು ನಾನು  ಪ್ರಸಾದದಂತೆ ಸ್ವೀಕರಿಸುತ್ತೇನೆ ಎಂದು ಮೋದಿ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Baramati plane crash: ಅಜಿತ್ ಪವಾರ್ ಸಾವು; ವಿಮಾನ ಅಪಘಾತ ಬ್ಯೂರೋದಿಂದ ತನಿಖೆ

ಅಜಿತ್ ಪವಾರ್ ಸಾವು: ಇತರ ಸಂಸ್ಥೆಗಳ ಮೇಲೆ ನಂಬಿಕೆಯಿಲ್ಲ, 'ಸುಪ್ರೀಂ' ಮೇಲ್ವಿಚಾರಣೆಯಲ್ಲಿ ವಿಮಾನ ಪತನ ತನಿಖೆಗೆ ಮಮತಾ ಆಗ್ರಹ

ಬೆಂಗಳೂರು: ಉದ್ಯಮಿ ಮನೆಯಲ್ಲಿದ್ದ 18 ಕೋಟಿ ರೂ. ಚಿನ್ನಾಭರಣ ಕದ್ದು ಮನೆಗೆಲಸದ ದಂಪತಿ ಪರಾರಿ!

ಆಗ್ರಾದಲ್ಲಿ ಪೈಶಾಚಿಕ ಕೃತ್ಯ: ಲವರ್ ನಿಂದ 'ಹೆಚ್ ಆರ್ ಮ್ಯಾನೇಜರ್' ಹತ್ಯೆ, ದೇಹವನ್ನು ತುಂಡಾಗಿಸಿ, ತಲೆಯನ್ನು ಚರಂಡಿಗೆ ಎಸೆದ ಕಟುಕ!

EU ವ್ಯಾಪಾರ ಒಪ್ಪಂದದಲ್ಲಿ ಭಾರತ 'ಬಿಗ್ ವಿನ್ನರ್': ಅಮೆರಿಕ ಒಪ್ಪಿಕೊಳ್ತಾ?

SCROLL FOR NEXT