ರಾಹುಲ್ ಗಾಂಧಿ 
ದೇಶ

ಶಾಸ್ತ್ರಿ ಭವನದಲ್ಲಿ ಬೆಂಕಿ: ಕಡತಗಳನ್ನು ಸುಡುವುದರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಮೋದಿಜೀ ಎಂದ ರಾಹುಲ್

ದೆಹಲಿಯ ಶಾಸ್ತ್ರಿ ಭವನದಲ್ಲಿ ಮಂಗಳವಾರ ಅಗ್ನಿ ಅವಘಡ ಸಂಭವಿಸಿದ್ದು, ಸರ್ಕಾರಿ ಕಡತಗಳನ್ನು ಸುಡುವುದರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಮೋದಿಜೀ,....

ನವದೆಹಲಿ: ದೆಹಲಿಯ ಶಾಸ್ತ್ರಿ ಭವನದಲ್ಲಿ ಮಂಗಳವಾರ ಅಗ್ನಿ ಅವಘಡ ಸಂಭವಿಸಿದ್ದು,  ಸರ್ಕಾರಿ ಕಡತಗಳನ್ನು ಸುಡುವುದರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಮೋದಿಜೀ, ನಿಮ್ಮ ತೀರ್ಪಿನ ದಿನ ಸಮೀಸುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಟ್ವೀಟ್ ಮಾಡಿದ್ದಾರೆ.
ಶಾಸ್ತ್ರಿ ಭವನದ ಅಗ್ನಿ ಅವಘಡದ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಕಡತಗಳನ್ನು ಸುಡುವುದರಿಂದ ಭ್ರಷ್ಟಾಚಾರ ಆರೋಪದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಜನರ ನಿರ್ಧಾರ ಪ್ರಕಟವಾಗುವ ದಿನ ಹತ್ತಿರಾಗುತ್ತಿದೆ. ಎಚ್ಚರದಿಂದ ಇರಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎಚ್ಚರಿಕೆ ನೀಡಿದ್ದಾರೆ.
ಇಂದು ಮಧ್ಯಾಹ್ನ ಶಾಸ್ತ್ರಿ ಭವನದಲ್ಲಿ ದಿಢೀರ್​ ಬೆಂಕಿ ಕಾಣಿಸಿಕೊಂಡಿತ್ತು. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದರು. ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ಅಗ್ನಿಶಾಮಕ ದಳದ ಸಿಬ್ಬಂದಿ, ಶಾಸ್ತ್ರಿ ಭವನದ ಕೊನೆಯ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಅಲ್ಲಿ ದುರಸ್ತಿಗೆ ಇರುವ ಕೂಲರ್​ಗಳು, ಎಲೆಕ್ಟ್ರಿಕಲ್​ ವೈರ್​ಗಳು ಮತ್ತಿತರ ಗುಜರಿ ವಸ್ತುಗಳನ್ನು ದಾಸ್ತಾನು ಮಾಡಲಾಗಿತ್ತು. ಅವುಗಳಿಗೆ ಬೆಂಕಿ ತಗುಲಿತ್ತು. ಆರರಿಂದ ಏಳು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಬಂದು ಬೆಂಕಿಯನ್ನು ನಂದಿಸಿದವು. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿಸಿದ್ದರು.
ಈ ಕಟ್ಟಡದಲ್ಲಿ ಕೇಂದ್ರ ಸರ್ಕಾರದ ಮಾನವಸಂಪನ್ಮೂಲ ಅಭಿವೃದ್ಧಿ, ಕಾನೂನು ಮತ್ತು ನ್ಯಾಯಾಂಗ ಇಲಾಖೆ, ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕಾರ್ಪೊರೇಟ್​ ವ್ಯವಹಾರಗಳು, ರಾಸಾಯನಿಕ ಮತ್ತು ಪೆಟ್ರೋ ಕೆಮಿಕಲ್ಸ್​, ಸಂಸ್ಕೃತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸೇರಿ ಹಲವು ಪ್ರಮುಖ ಇಲಾಖೆಗಳ ಸಚಿವಾಲಯಗಳು ಕಾರ್ಯನಿರ್ವಹಿಸುತ್ತಿವೆ. 
ಈ ಹಿನ್ನೆಲೆಯಲ್ಲಿ ಈ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡ ಬಗ್ಗೆ ರಾಹುಲ್​ ಗಾಂಧಿ ಶಂಕೆ ವ್ಯಕ್ತಪಡಿಸಿದ್ದಾರೆ.
ರಫೇಲ್​ ಯುದ್ಧ ವಿಮಾನ ಖರೀದಿಗೆ ಸಂಬಂಧಿಸಿದ ಕಡತಗಳು ಶಾಸ್ತ್ರಿ ಭವನದಲ್ಲಿ ಇದ್ದಿರಬಹುದಾದ ಬಗ್ಗೆ ಶಂಕೆ ವ್ಯಕ್ತಪಡಿಸಿರುವ ರಾಹುಲ್​ ಗಾಂಧಿ, ಆ ಕಡತಗಳನ್ನು ಸುಟ್ಟು ಹಗರಣದಿಂದ ಪಾರಾಗಲು ಪ್ರಧಾನಿ ನರೇಂದ್ರ ಮೋದಿ ಯತ್ನಿಸಿದ್ದಾರೆ ಎಂದು ಪರೋಕ್ಷವಾಗಿ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಹಾರಾಷ್ಟ್ರ: ಬಿವಂಡಿಯಲ್ಲಿ ಕಟ್ಟಡ ಕುಸಿತ- ಸಾವಿನ ಸಂಖ್ಯೆ ಒಂಬತ್ತಕ್ಕೆ ಏರಿಕೆ; ರಕ್ಷಣಾ ಕಾರ್ಯಾಚರಣೆಯ ವೇಳೆ NDRF ಅಧಿಕಾರಿಗೆ ಗಾಯ

Iranಗೆ ಬೆಂಬಲ ಆರೋಪ: ಭಾರತದ ಕಂಪನಿ ಸೇರಿ 6 ಸಂಸ್ಥೆಗಳ ವಿರುದ್ಧ ಅಮೆರಿಕಾ ಕಠಿಣ ಕ್ರಮ, China-Russia ಸಂಸ್ಥೆಗಳೂ Black listಗೆ..!

ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್: ಸೋಮವಾರ ಸಂಜೆ ಪ್ರಮಾಣವಚನ ಸಾಧ್ಯತೆ, 18 ಸಚಿವರ ಸೇರ್ಪಡೆ ನಿರೀಕ್ಷೆ..!

ಪ್ರಶ್ನೆಪತ್ರಿಗೆ ಲೀಕ್ ದಂಧೆಗೆ ಬಿತ್ತು ಬ್ರೇಕ್: 'ಮಕ್ಕಳ ಭವಿಷ್ಯದ ಜೊತೆ ಆಟವಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ': ಸೆಲ್ಫೀ ವಿಡಿಯೋ ಮೂಲಕ ಪ್ರಧಾನಿ ಮೋದಿ ಖಡಕ್ ಎಚ್ಚರಿಕೆ..!

ಅಂತ್ಯದತ್ತ ಸಾಗಿದ ಇಸ್ರೇಲ್-ಹಮಾಸ್ ಯುದ್ಧ: 14 ದಿನಗಳಲ್ಲಿ ಶಸ್ತ್ರಾಸ್ತ್ರ ಹಸ್ತಾಂತರಕ್ಕೆ ಹಮಾಸ್ ಒಪ್ಪಿಗೆ, ಶಾಂತಿ ಒಪ್ಪಂದ ಘೋಷಿಸಿದ ಟ್ರಂಪ್..!