ಎಲ್.ಕೆ ಆಡ್ವಾಣಿ 
ದೇಶ

'ಆಗ ಅಡ್ವಾಣಿಯನ್ನು ಬಲವಂತವಾಗಿ ಮಾರ್ಗದರ್ಶಕ ಮಂಡಳಿಗೆ ತಳ್ಳಿದರು, ಈಗ ಅವರ ಕ್ಷೇತ್ರವನ್ನು ಕಸಿದುಕೊಂಡರು'

ಬಿಜೆಪಿ ಹಿರಿಯ ಮುಖಂಡ ಎಲ್ .ಕೆ ಆಡ್ವಾಣಿ ಅವರು ಆರು ಬಾರಿ ಪ್ರತಿನಿಧಿಸಿದ್ದ ಗುಜರಾತ್ ನ ಗಾಂಧಿನಗರ ಕ್ಷೇತ್ರದಲ್ಲಿ ಬಿಜೆಪಿ ರಾಷ್ಟ್ಟೀಯ ಅಧ್ಯಕ್ಷ ಅಮಿತ್ ಶಾ...

ನವದೆಹಲಿ: ಬಿಜೆಪಿ ಹಿರಿಯ ಮುಖಂಡ ಎಲ್ .ಕೆ ಆಡ್ವಾಣಿ ಅವರು ಆರು ಬಾರಿ ಪ್ರತಿನಿಧಿಸಿದ್ದ ಗುಜರಾತ್ ನ ಗಾಂಧಿನಗರ ಕ್ಷೇತ್ರದಲ್ಲಿ ಬಿಜೆಪಿ ರಾಷ್ಟ್ಟೀಯ ಅಧ್ಯಕ್ಷ ಅಮಿತ್ ಶಾ ಸ್ಪರ್ಧಿಸಲಿದ್ದಾರೆ, ಲೋಕಸಭೆ ಚುನಾವಣೆಗಾಗಿ ಬಿಜೆಪಿ ಬಿಡುಗಡೆ ಮಾಡಿರುವ ಮೊದಲ ಪಟ್ಟಿಯಲ್ಲಿ ಗಾಂಧಿ ನಗರ ಕ್ಷೇತ್ರದಿಂದ ಅಮಿತ್ ಶಾ ಹೆಸರು ಪ್ರಕಟಿಸಲಾಗಿದೆ.
ಮೊದಲಿಗೆ ಅಡ್ವಾಣಿ ಅವರನ್ನು ಬಲವಂತವಾಗಿ ಮಾರ್ಗದರ್ಶಕ ಮಂಡಳಿಗೆ ತಳ್ಳಿದರು, ಈಗ ಅವರ ಸಂಸತ್ ಕ್ಷೇತ್ರವನ್ನೂ ಕಸಿದುಕೊಳ್ಳಲಾಗಿದೆ, ಹಿರಿಯರಿಗೆ ಗೌರವ ಕೊಡುವುದೇ ಗೊತ್ತಿಲ್ಲದೇ ಮೋದಿ ಜನರ ವಿಶ್ವಾಸವನ್ನು ಹೇಗೆ ಉಳಿಸಿಕೊಳ್ಳುವರು ಎಂದು ಕಾಂಗ್ರೆಸ್ ಟೀಕಿಸಿದೆ.
ಬಿಜೆಪಿ ಗುರುವಾರ ಮೊದಲ ಹಂತದಲ್ಲಿ ಬಿಡುಗಡೆ ಮಾಡಿದ ಪಟ್ಟಿಯಲ್ಲಿ 184 ಅಭ್ಯರ್ಥಿಗಳ ಹೆಸರಿದೆ,. ಅದರಲ್ಲಿ ಪ್ರಧಾನಿ ನರೇಂದ್ರ ಮೋದಿ ವಾರಣಾಸಿಯಿಂದ ಸ್ಪರ್ಧಿಸಲಿದ್ದಾರೆ.
ಅಡ್ವಾಣಿ ಕ್ಷೇತ್ರದಿಂದ ಅಮಿತ್ ಶಾ ಕಣಕ್ಕಿಳಿಯುತ್ತಿರುವುದಕ್ಕೆ ಕಾಂಗ್ರೆಸ್ ವಕ್ತಾರ ರಣ್ದೀಪ್ ಸುರ್ಜೆವಾಲಾ ಟೀಕಿಸಿದ್ದು, ಅಡ್ವಾಣಿ ಅವರ ಕ್ಷೇತ್ರವನ್ನು ಕಸಿದುಕೊಳ್ಳುವ ಮೂಲಕ ಅವರರನ್ನು ಮೂಲೆಗುಂಪು ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. 
2014ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗ ಎಲ್ ಕೆ ಅಡ್ವಾಣಿ ಅವರನ್ನು ಬಿಜೆಪಿ ಮಾರ್ಗದರ್ಶಕ ಮಂಡಳಿಯ ಸದಸ್ಯರನ್ನಾಗಿ ನೇಮಿಸಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel