ಎಲ್.ಕೆ ಆಡ್ವಾಣಿ 
ದೇಶ

'ಆಗ ಅಡ್ವಾಣಿಯನ್ನು ಬಲವಂತವಾಗಿ ಮಾರ್ಗದರ್ಶಕ ಮಂಡಳಿಗೆ ತಳ್ಳಿದರು, ಈಗ ಅವರ ಕ್ಷೇತ್ರವನ್ನು ಕಸಿದುಕೊಂಡರು'

ಬಿಜೆಪಿ ಹಿರಿಯ ಮುಖಂಡ ಎಲ್ .ಕೆ ಆಡ್ವಾಣಿ ಅವರು ಆರು ಬಾರಿ ಪ್ರತಿನಿಧಿಸಿದ್ದ ಗುಜರಾತ್ ನ ಗಾಂಧಿನಗರ ಕ್ಷೇತ್ರದಲ್ಲಿ ಬಿಜೆಪಿ ರಾಷ್ಟ್ಟೀಯ ಅಧ್ಯಕ್ಷ ಅಮಿತ್ ಶಾ...

ನವದೆಹಲಿ: ಬಿಜೆಪಿ ಹಿರಿಯ ಮುಖಂಡ ಎಲ್ .ಕೆ ಆಡ್ವಾಣಿ ಅವರು ಆರು ಬಾರಿ ಪ್ರತಿನಿಧಿಸಿದ್ದ ಗುಜರಾತ್ ನ ಗಾಂಧಿನಗರ ಕ್ಷೇತ್ರದಲ್ಲಿ ಬಿಜೆಪಿ ರಾಷ್ಟ್ಟೀಯ ಅಧ್ಯಕ್ಷ ಅಮಿತ್ ಶಾ ಸ್ಪರ್ಧಿಸಲಿದ್ದಾರೆ, ಲೋಕಸಭೆ ಚುನಾವಣೆಗಾಗಿ ಬಿಜೆಪಿ ಬಿಡುಗಡೆ ಮಾಡಿರುವ ಮೊದಲ ಪಟ್ಟಿಯಲ್ಲಿ ಗಾಂಧಿ ನಗರ ಕ್ಷೇತ್ರದಿಂದ ಅಮಿತ್ ಶಾ ಹೆಸರು ಪ್ರಕಟಿಸಲಾಗಿದೆ.
ಮೊದಲಿಗೆ ಅಡ್ವಾಣಿ ಅವರನ್ನು ಬಲವಂತವಾಗಿ ಮಾರ್ಗದರ್ಶಕ ಮಂಡಳಿಗೆ ತಳ್ಳಿದರು, ಈಗ ಅವರ ಸಂಸತ್ ಕ್ಷೇತ್ರವನ್ನೂ ಕಸಿದುಕೊಳ್ಳಲಾಗಿದೆ, ಹಿರಿಯರಿಗೆ ಗೌರವ ಕೊಡುವುದೇ ಗೊತ್ತಿಲ್ಲದೇ ಮೋದಿ ಜನರ ವಿಶ್ವಾಸವನ್ನು ಹೇಗೆ ಉಳಿಸಿಕೊಳ್ಳುವರು ಎಂದು ಕಾಂಗ್ರೆಸ್ ಟೀಕಿಸಿದೆ.
ಬಿಜೆಪಿ ಗುರುವಾರ ಮೊದಲ ಹಂತದಲ್ಲಿ ಬಿಡುಗಡೆ ಮಾಡಿದ ಪಟ್ಟಿಯಲ್ಲಿ 184 ಅಭ್ಯರ್ಥಿಗಳ ಹೆಸರಿದೆ,. ಅದರಲ್ಲಿ ಪ್ರಧಾನಿ ನರೇಂದ್ರ ಮೋದಿ ವಾರಣಾಸಿಯಿಂದ ಸ್ಪರ್ಧಿಸಲಿದ್ದಾರೆ.
ಅಡ್ವಾಣಿ ಕ್ಷೇತ್ರದಿಂದ ಅಮಿತ್ ಶಾ ಕಣಕ್ಕಿಳಿಯುತ್ತಿರುವುದಕ್ಕೆ ಕಾಂಗ್ರೆಸ್ ವಕ್ತಾರ ರಣ್ದೀಪ್ ಸುರ್ಜೆವಾಲಾ ಟೀಕಿಸಿದ್ದು, ಅಡ್ವಾಣಿ ಅವರ ಕ್ಷೇತ್ರವನ್ನು ಕಸಿದುಕೊಳ್ಳುವ ಮೂಲಕ ಅವರರನ್ನು ಮೂಲೆಗುಂಪು ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. 
2014ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗ ಎಲ್ ಕೆ ಅಡ್ವಾಣಿ ಅವರನ್ನು ಬಿಜೆಪಿ ಮಾರ್ಗದರ್ಶಕ ಮಂಡಳಿಯ ಸದಸ್ಯರನ್ನಾಗಿ ನೇಮಿಸಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT