ರವಿಶಂಕರ್ ಪ್ರಸಾದ್ 
ದೇಶ

ಲೋಕಸಭಾ ಚುನಾವಣೆ:ಭರವಸೆ ಮತ್ತು ಅವಕಾಶವಾದ ನಡುವಿನ ಹೋರಾಟ- ರವಿಶಂಕರ್ ಪ್ರಸಾದ್

ಈ ಬಾರಿಯ ಲೋಕಸಭಾ ಚುನಾವಣೆ ಭರವಸೆ ಮತ್ತು ಅವಕಾಶವಾದ ನಡುವಿನ ಹೋರಾಟವಾಗಿದೆ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.

ನವದೆಹಲಿ:ಈ ಬಾರಿಯ ಲೋಕಸಭಾ ಚುನಾವಣೆ ಭರವಸೆ ಮತ್ತು ಅವಕಾಶವಾದ ನಡುವಿನ ಹೋರಾಟವಾಗಿದೆ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.

ಬಿಹಾರದ ಪಾಟ್ನಾ ಸಾಹಿಬ್  ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸುತ್ತಿರುವುದಕ್ಕೆ ಬಿಜೆಪಿಗೆ ಧನ್ಯವಾದ ಹೇಳಿದ ರವಿಶಂಕರ್ ಪ್ರಸಾದ್,  ಅಭಿವೃದ್ಧಿ ಆಧಾರಿತ ವಿಚಾರದ ಮೇಲೆ ನಡೆಯುತ್ತಿರುವ ಚುನಾವಣೆಯಲ್ಲಿ  ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೆ ಪ್ರಧಾನಿಯನ್ನಾಗಿ ಮಾಡುವ ಭರವಸೆ ಹೊಂದಿರುವುದಾಗಿ ತಿಳಿಸಿದರು.

ಪಾಟ್ನಾ ನನ್ನ ನಗರ. ನಾನು ಹುಟ್ಟಿದ್ದು, ಬೆಳದದ್ದು ಅಲ್ಲಿಯೇ, ಅಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸದಸ್ಯನಾಗಿದ್ದೆ. ಪಾಟ್ನಾದೊಂದಿಗೆ ಭಾವಾನಾತ್ಮಕ ಸಂಬಂಧ ಹೊಂದಿರುವುದಾಗಿ ಪ್ರಸಾದ್ ಹೇಳಿದರು.

2014ರ ಚುನಾವಣೆಯಲ್ಲಿ  ಹಾಲಿ ಸಂಸದ ಶತ್ರುಘ್ನ ಸಿನ್ಹಾ ಬಿಜೆಪಿ ಟಿಕೆಟ್ ನಿಂದ ಇಲ್ಲಿ ಗೆದ್ದಿದ್ದರು. ಕೇಂದ್ರ ನಾಯಕರ ವಿರುದ್ಧ ಬಹಿರಂಗವಾಗಿ ಟೀಕೆ ಮಾಡುತ್ತಿದ್ದರಿಂದ ಈ ಬಾರಿ ಅವರಿಗೆ ಟಿಕೆಟ್ ಕೈ ತಪ್ಪಿದ್ದು, ರವಿಶಂಕರ್ ಪ್ರಸಾದ್ ಅವರನ್ನು ಚುನಾವಣಾ ಕಣಕ್ಕಿಳಿಸಲಾಗುತ್ತಿದೆ.

ಶತ್ರುಘ್ನ ಸಿನ್ಹಾ ಈಗ ಏಲ್ಲಿದ್ದಾರೆ?  ಯಾವ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬುದು ಗೊತ್ತಿಲ್ಲ, ಅವರ ಬಗ್ಗೆ ಯಾವುದೇ ಸುಳಿವು ಸಿಗುತ್ತಿಲ್ಲ ಎಂದು ರವಿಶಂಕರ್ ಪ್ರಸಾದ್ ತಿಳಿಸಿದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT