ಇಮ್ರಾನ್ ಮಸೂದ್ 
ದೇಶ

ಭಾರತ ಮಾತೆ ಯೋಗಿ ಆದಿತ್ಯನಾಥ್ ಒಬ್ಬರಿಗೇ ಸೇರಿದ್ದಲ್ಲ,ನಮಗೂ ಸೇರಿದ್ದು: ಇಮ್ರಾನ್ ಮಸೂದ್

ಜೈಷ್ -ಇ- ಮೊಹಮ್ಮದ್ ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್ ಅಝರ್ ಅಳಿಯ ಶಹರನ್ ಪುರದಲ್ಲಿರುವುದಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೀಡಿರುವ ಹೇಳಿಕೆ ದುರದೃಷ್ಟಕರವಾಗಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಇಮ್ರಾನ್ ಮಸೂದ್ ಹೇಳಿದ್ದಾರೆ.

ಶಹರನ್ ಪುರ: ಜೈಷ್ -ಇ- ಮೊಹಮ್ಮದ್ ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್ ಅಝರ್ ಅಳಿಯ ಶಹರನ್ ಪುರದಲ್ಲಿರುವುದಾಗಿ ಉತ್ತರ  ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೀಡಿರುವ ಹೇಳಿಕೆ ದುರದೃಷ್ಟಕರವಾಗಿದೆ ಎಂದು  ಕಾಂಗ್ರೆಸ್ ಅಭ್ಯರ್ಥಿ ಇಮ್ರಾನ್  ಮಸೂದ್ ಹೇಳಿದ್ದಾರೆ.

ಕೆಲವರ ದೇಶಭಕ್ತಿಯನ್ನು ಪ್ರಶ್ನಿಸಬಾರದು ಒಂದು ವೇಳೆ  ದೇಶಕ್ಕೆ ನನ್ನ ತಲೆ  ಅಗತ್ಯವಾದರೆ ಅದನ್ನು ಆರ್ಪಿಸುತ್ತೇನೆ. ಭಾರತ ಮಾತೆ ಯೋಗಿ ಆದಿತ್ಯನಾಥ್ ಒಬ್ಬರಿಗೇ ಸೇರಿದ್ದಲ್ಲ, ನಮಗೂ ಸೇರಿದ್ದು ಎಂದಿದ್ದಾರೆ.

ಶಹರನ್ ಪುರದಲ್ಲಿ ಚುನಾವಣಾ ಪ್ರಚಾರಕ್ಕೆ ಭಾನುವಾರ ಚಾಲನೆ ನೀಡಿ  ಮಾತನಾಡಿದ್ದ ಯೋಗಿ ಆದಿತ್ಯನಾಥ್, ಕಾಂಗ್ರೆಸ್ ಅಭ್ಯರ್ಥಿಗೆ ಪಾಕಿಸ್ತಾನದ ಅಭ್ಯರ್ಥಿ ಮಸೂದ್ ಅಝರ್  ಜೊತೆಗೆ ನಂಟಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಈ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇಮ್ರಾನ್ ಮಸೂದ್  ಬಿಜೆಪಿಯ ಹಾಲಿ ಸಂಸದ ರಾಘವ್ ಲಾಕಾನ್ ಪಾಲ್ ಗಿಂತಲೂ  ಪ್ರಬಲ ನಾಯಕರಾಗಿದ್ದಾರೆ. ಏಪ್ರಿಲ್ 11 ರಂದು ಈ ಕ್ಷೇತ್ರದ ಲೋಕಸಭಾ ಚುನಾವಣೆ ನಡೆಯಲಿದೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT