ರಾಹುಲ್ ಗಾಂಧಿ 
ದೇಶ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹೊಸ ಉದ್ಯಮಕ್ಕೆ 3 ವರ್ಷ ಅನುಮತಿ ಬೇಕಿಲ್ಲ: ರಾಹುಲ್

ಬಡವರಿಗೆ ವರ್ಷಕ್ಕೆ 72 ಸಾವಿರ ರು. ಕನಿಷ್ಠ ಆದಾಯ ಖಾತ್ರಿ ಭರವಸೆ ನೀಡಿದ್ದ ಕಾಂಗ್ರೆಸ್ ಈಗ ಮತ್ತೊಂದು ಮಹತ್ತರ ಭರವಸೆ ನೀಡಿದ್ದು, ಕೇಂದ್ರದಲ್ಲಿ ಕಾಂಗ್ರೆಸ್‌...

ಬೆಂಗಳೂರು: ಬಡವರಿಗೆ ವರ್ಷಕ್ಕೆ 72 ಸಾವಿರ ರು. ಕನಿಷ್ಠ ಆದಾಯ ಖಾತ್ರಿ ಭರವಸೆ ನೀಡಿದ್ದ ಕಾಂಗ್ರೆಸ್ ಈಗ ಮತ್ತೊಂದು ಮಹತ್ತರ ಭರವಸೆ ನೀಡಿದ್ದು, ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಹೊಸ ಉದ್ಯಮಕ್ಕೆ ಮೂರು ವರ್ಷ ಅನುಮತಿ ಬೇಕಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೊದಲ ಬಾರಿಗೆ ಸಣ್ಣ, ಅತಿ ಸಣ್ಣ ಕಾರ್ಖಾನೆ ಮತ್ತು ಸ್ಟಾರ್ಟ್‌ಅಪ್‌ಗಳನ್ನು ಆರಂಭಿಸಲು ಮೂರು ವರ್ಷಗಳವರೆಗೆ ಸರ್ಕಾರದ ಅನುಮತಿಯಿಲ್ಲದೆ ಆರಂಭಿಸಿ, ನಡೆಸಬಹುದು ಎಂದು ರಾಹುಲ್ ಗಾಂಧಿ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.
ಇದರಿಂದ ಯಾರು ಬೇಕಿದ್ದರೂ ಸಣ್ಣ ಉದ್ದಿಮೆಗಳನ್ನು ಶುರು ಮಾಡಬಹುದು ಮತ್ತು ಯುವಕರು ಸ್ವಂತ ಉದ್ಯಮ ಸ್ಥಾಪನೆಗೆ ಸಹಾಯವಾಗಲಿ ಎಂದು ರಾಹುಲ್‌ ಗಾಂಧಿ ತಿಳಿಸಿದ್ದಾರೆ.
ಈ ಭರವಸೆಯನ್ನು ಮುಂದಿನ ತಿಂಗಳು ಬಿಡುಗಡೆಯಾಗಲಿರುವ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಸೇರಿಸುವುದಾಗಿ ರಾಹುಲ್ ಗಾಂಧಿ ಹೇಳಿದ್ದಾರೆ. ಅಲ್ಲದೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅನಗತ್ಯ ಮತ್ತು ಕೆಟ್ಟ ತೆರಿಗೆಗಳನ್ನು ತೆಗೆದುಹಾಕುತ್ತೇವೆ ಎಂದಿದ್ದಾರೆ.
ಭಾರತದ ಬಡತನದ ಮೇಲೆ ಸರ್ಜಿಕಲ್‌ ದಾಳಿ ನಡೆಸುತ್ತೇವೆ. ಬಡತನ ನಿರ್ಮೂಲನೆಗಾಗಿ ಪ್ರತಿವರ್ಷ ಬಡವರ ಖಾತೆಗೆ ವಾರ್ಷಿಕ 72,000 ರೂ.ಗಳನ್ನು ನೇರವಾಗಿ ಜಮೆ ಮಾಡುವ ಯೋಜನೆಯನ್ನು ತರುತ್ತೇವೆ. ನ್ಯಾಯ್‌ ಎಂಬ ಹೆಸರಿನ ಯೋಜನೆಯಡಿ ಭಾರತದ 5 ಕೋಟಿ ಬಡವರು ಇದರ ಫಲಾನುಭವಿಗಳಾಗಲಿದ್ದಾರೆ. ಇದು ನಮ್ಮ ಕನಸಿನ ಯೋಜನೆಯಾಗಿದ್ದು, ಭಾರತದ ಬಡತನ ನಿರ್ಮೂಲನೆಗೆ ಅಂತಿಮ ದಾಳಿ ಎಂದು ರಾಹುಲ್‌ ಗಾಂಧಿ ಇತ್ತೀಚೆಗೆ ಘೋಷಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT