ಶತ್ರುಘ್ನ ಸಿನ್ಹಾ, ರಾಹುಲ್ ಗಾಂಧಿ 
ದೇಶ

ರಾಹುಲ್ ಭೇಟಿ ಮಾಡಿದ ಶತ್ರುಘ್ನ : ಏಪ್ರಿಲ್ 6 ರಂದು ಕಾಂಗ್ರೆಸ್ ಸೇರ್ಪಡೆ

ಶತ್ರುಘ್ನ ಸಿನ್ಹಾ ಸದ್ಯದಲ್ಲಿಯೇ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದು, ಸ್ಟಾರ್ ನಾಯಕ ಹಾಗೂ ಸ್ಟಾರ್ ಪ್ರಚಾರ ಆಗಿರುವ ಶತ್ರುಘ್ನ ಸಿನ್ಹಾ ಪರವಾಗಿ ಕೆಲಸ ಮಾಡುವುದಾಗಿ ಬಿಹಾರ ಕಾಂಗ್ರೆಸ್ ಉಸ್ತುವಾರಿ ಶಕ್ತಿ ಸಿಂಗ್ ಗೋಯೆಲ್ ಹೇಳಿದ್ದಾರೆ.

ನವದೆಹಲಿ: ಶತ್ರುಘ್ನ ಸಿನ್ಹಾ ಸದ್ಯದಲ್ಲಿಯೇ  ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದು, ಸ್ಟಾರ್  ನಾಯಕ ಹಾಗೂ ಸ್ಟಾರ್ ಪ್ರಚಾರ ಆಗಿರುವ ಶತ್ರುಘ್ನ ಸಿನ್ಹಾ ಪರವಾಗಿ ಕೆಲಸ ಮಾಡುವುದಾಗಿ ಬಿಹಾರ ಕಾಂಗ್ರೆಸ್ ಉಸ್ತುವಾರಿ ಶಕ್ತಿ ಸಿಂಗ್ ಗೋಯೆಲ್ ಹೇಳಿದ್ದಾರೆ.

ಬಿಜೆಪಿ ಸಂಸದರಾಗಿರುವ ಶತ್ರುಘ್ನಸಿನ್ಹಾ  ಇಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದು, ರಾಷ್ಟ್ರದ ಹಿತದೃಷ್ಟಿಯಿಂದ ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಹೇಳಿದ್ದಾರೆ. ಏಪ್ರಿಲ್ 6 ರಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂದು  ಅವರು ಸ್ಪಷ್ಪಪಡಿಸಿದ್ದಾರೆ.

ಮೂರು ದಶಕಗಳಿಂದಲೂ ಬಿಜೆಪಿ ಜೊತೆಯಲ್ಲಿದ್ದ ಬಾಲಿವುಡ್ ನಟ, ರಾಜಕಾರಣಿಯಾಗಿರುವ ಶತ್ರುಘ್ನ ಸಿನ್ಹಾ  ಕಾಂಗ್ರೆಸ್ ಸೇರಲಿದ್ದಾರೆ ಎಂಬುದು ನಿನ್ನೆ ನಿರೀಕ್ಷಿಸಲಾಗಿತ್ತು. ಬಿಹಾರದ ಪಾಟ್ನಾ ಸಾಹಿಬ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಅವರು ಚುನಾವಣೆಗೆ ಸ್ಪರ್ಧಿಸಲಿದ್ದು, ಬಿಜೆಪಿಯ ರವಿಶಂಕರ್  ಪ್ರಸಾದ್  ವಿರುದ್ಧ ಹೋರಾಟ ನಡೆಸಲಿದ್ದಾರೆ.

ಶತ್ರುಘ್ನ ಸಿನ್ಹಾ ಪಾಟ್ನಾ ಸಾಹಿಬ್ ಕ್ಷೇತ್ರದಿಂದ ಎರಡು ಬಾರಿ ಬಿಜೆಪಿ ಸಂಸದರಾಗಿ ಆಯ್ಕೆಯಾಗಿದ್ದರು. ಆದರೆ, ಸಿನ್ಹಾ ಬಹಿರಂಗವಾಗಿ  ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರನ್ನು ಟೀಕಿಸುತ್ತಿದ್ದರಿಂದ ಅವರಿಗೆ  ಈ ಬಾರಿ ಟಿಕೆಟ್ ನೀಡದೆ  ರವಿಶಂಕರ್ ಪ್ರಸಾದ್ ಅವರಿಗೆ ಟಿಕೆಟ್ ನೀಡಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT