ಮಾಯಾವತಿ-ಅಖಿಲೇಶ್ 
ದೇಶ

ಯುಪಿಯಲ್ಲಿ ಮಹಾಘಟಬಂಧನಕ್ಕೆ ಬಿಗ್ ಶಾಕ್; ಮೂರೇ ದಿನಕ್ಕೆ ಹೊರಬಿದ್ದ ನಿಷಾದ್ ಪಾರ್ಟಿ!

ಉತ್ತರಪ್ರದೇಶದಲ್ಲಿ ಮಹಾಘಟಬಂಧನ ರಚನೆ ಮೂಲಕ ಪ್ರಧಾನಿ ಮೋದಿಗೆ ತೀವ್ರ ಪೈಪೋಟಿ ನೀಡುವ ಯೋಜನೆಯಲ್ಲಿದ್ದ ಎಸ್‌ಪಿ-ಬಿಎಸ್‌ಪಿ-ಆರ್‌ಎಲ್‌ಡಿ ಮಹಾಘಟಬಂಧನಕ್ಕೆ ದೊಡ್ಡ ಶಾಕ್ ಎದುರಾಗಿದೆ.

ಲಖನೌ: ಉತ್ತರಪ್ರದೇಶದಲ್ಲಿ ಮಹಾಘಟಬಂಧನ ರಚನೆ ಮೂಲಕ ಪ್ರಧಾನಿ ಮೋದಿಗೆ ತೀವ್ರ ಪೈಪೋಟಿ ನೀಡುವ ಯೋಜನೆಯಲ್ಲಿದ್ದ ಎಸ್‌ಪಿ-ಬಿಎಸ್‌ಪಿ-ಆರ್‌ಎಲ್‌ಡಿ ಮಹಾಘಟಬಂಧನಕ್ಕೆ ದೊಡ್ಡ ಶಾಕ್ ಎದುರಾಗಿದ್ದು ಮೂರನೇ ದಿನಕ್ಕೆ ನಿಷಾದ್ ಪಾರ್ಟಿ ಮೈತ್ರಿಕೂಟದಿಂದ ಹೊರಬಿದ್ದಿದೆ.
ಲಖನೌನಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರನ್ನು ಭೇಟಿ ಮಾಡಿದ ನಿಷಾದ್ ಪಕ್ಷದ ಮುಖ್ಯಸ್ಥ ಸಂಜಯ್ ನಿಷಾದ್ ಮಹಾಘಟಬಂಧನದಿಂದ ಹೊರ ಬಂದಿರುವುದಾಗಿ ಘೋಷಿಸಿದ್ದಾರೆ.
ಸಮಾಜವಾದಿ ಪಕ್ಷಕ್ಕೂ ಮತ್ತು ನಿಷಾದಾ ಪಾರ್ಟಿಗೂ ಇನ್ನು ಯಾವುದೇ ಮೈತ್ರಿ ಇರುವುದಿಲ್ಲ. ಮಹಾರಾಜ್ ಗಂಜ್ ಕ್ಷೇತ್ರದಲ್ಲಿ ನಿಷಾದ್ ಪಕ್ಷ ತನ್ನದೇ ಚಿಹ್ನೆಯಡಿ ಸ್ಪರ್ಧಿಸಲು ಬಯಸಿತ್ತು. ಆದರೆ ಸಮಾಜವಾದಿ ಪಕ್ಷ ಅದಕ್ಕೆ ಒಪ್ಪಲಿಲ್ಲ  ಎಂದು ನಿಷಾದ್ ಪಕ್ಷದ ಮಾಧ್ಯಮ ಉಸ್ತುವಾರಿ ನಿಕ್ಕಿ ನಿಷಾದ್ ಅಲಿಯಾಸ್ ರಿತೇಶ್ ನಿಷಾದ್ ಗೋರಖ್ ಪುರದಲ್ಲಿ ತಿಳಿಸಿದರು. 
ಸಂಜಯ್ ನಿಷಾದ್ ಪುತ್ರ ಪ್ರವೀಣ್ ನಿಶಾದ್ 2018ರ ಉಪ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಟಿಕೆಟ್ ನಿಂದ ಸ್ಪರ್ಧಿಸಿ ಗೆದ್ದಿದ್ದರು. ಗೋರಖ್ ಪುರ ಯೋಗಿ ಆದಿತ್ಯನಾಥ್ ಅವರ ಭದ್ರಕೋಟೆಯಾಗಿದ್ದು ಅಲ್ಲಿಂದ ಎಸ್ ಪಿ ಅಭ್ಯರ್ಥಿಯಾಗಿ ನಿಷಾದ್ ಪುತ್ರಿ ಗೆದ್ದಿರುವುದು ಮಹತ್ವದ ಘಟನೆಯಾಗಿತ್ತು.
ನಿಷಾದ್ ಪಾರ್ಟಿ ಮಹಾಘಟಬಂಧನದಿಂದ ಹೊರಬರುತ್ತಿದ್ದಂತೆ ಸಮಾಜವಾದಿ ಪಕ್ಷದ ಗೋರಖಪುರ ಮತ್ತು ಕಾನ್ಪುರ್ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಗೋರಖಪುರದಿಂದ ರಾಮ್ಬುಯಾನ್ ನಿಷಾದ್ ಮತ್ತು ಕಾನ್ಪುರದಿಂದ ರಾಮ ಕುಮಾರ್ ರನ್ನು ಕಣಕ್ಕಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT