ಪ್ರಧಾನಿ ನರೇಂದ್ರ ಮೋದಿ 
ದೇಶ

ಭಾರತದ ಅಭಿವೃದ್ಧಿ, ಯಶಸ್ಸು ಕಂಡು ವಿಪಕ್ಷಗಳಿಗೆ ನಿರಾಶೆ: ಅರುಣಾಚಲ ಪ್ರದೇಶದಲ್ಲಿ ಮೋದಿ

ದೇಶಕ್ಕೆ ಭದ್ರತೆ ನೀಡುವ ಚೌಕೀದಾರನಿಗೆ ಮತ ಚಲಾವಣೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅರುಣಾಚಲ ಪ್ರದೇಶದ ಜನತೆಗೆ ಕರೆ ನೀಡಿದ್ದಾರೆ.

ಅರುಣಾಚಲಪ್ರದೇಶ: ದೇಶಕ್ಕೆ ಭದ್ರತೆ ನೀಡುವ ಚೌಕೀದಾರನಿಗೆ ಮತ ಚಲಾವಣೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅರುಣಾಚಲ ಪ್ರದೇಶದ ಜನತೆಗೆ ಕರೆ ನೀಡಿದ್ದಾರೆ. 
ಮಾ.30 ರಂದು ಅರುಣಾಚಲ ಪ್ರದೇಶದ ಲೋಕಸಭಾ ಚುನಾವಣೆ, ವಿಧಾನಸಭಾ ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ವಿಪಕ್ಷಗಳ ವಿರುದ್ಧ ಹರಿಹಾಯ್ದಿದ್ದಾರೆ. 
ದೇಶದ ಅಭಿವೃದ್ಧಿ, ಯಶಸ್ಸು ಕಂಡು ವಿಪಕ್ಷಗಳಿಗೆ ನಿರಾಶೆಯುಂಟಾಗಿದೆ.  ದೇಶ ಏನೇ ಸಾಧನೆ ಮಾಡಿದರೂ ನಿಮಗೆ ಸಂತಸವಾಗುವುದಿಲ್ಲವೇ? ತಮ್ಮ ಸಾಮಾಜಿಕ  ಆರ್ಥಿಕ ಸ್ಥಿತಿಯನ್ನೂ ಮೀರಿ ಜನತೆ ದೇಶದ ಸಾಧನೆಗಳ ಬಗ್ಗೆ ಸಂತಸ ವ್ಯಕ್ತಪಡಿಸುತ್ತಾರೆ. ಆದರೆ ಕೆಲವರು ಭಾರತದ ಅಭಿವೃದ್ಧಿ ಹಾಗೂ ಯಶಸ್ಸನ್ನು ಕಂಡು ಎದೆಗುಂದುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ. 
ಇದೇ ವೇಳೆ ಕಾಂಗ್ರೆಸ್ ನ್ನು ಭ್ರಷ್ಟಾಚಾರದ ಸಮಾನಾರ್ಥಕ ಎಂದು ಟೀಕಿಸಿರುವ ಪ್ರಧಾನಿ, ದೇಶದ ಜನತೆಯನ್ನು ಲಘುವಾಗಿ ಪರಿಗಣಿಸುವುದು ಕಾಂಗ್ರೆಸ್ ಗೆ ಅಭ್ಯಾಸವಾಗಿಬಿಟ್ಟಿದೆ ಎಂದೂ ಆರೋಪಿಸಿದ್ದಾರೆ. 
ಭಯೋತ್ಪಾದಕರನ್ನು ಭಾರತ ಅವರ ನೆಲದಲ್ಲೇ ಹೊಡೆದಾಗ ವಿಪಕ್ಷಗಳು ಹೇಗೆ ನಡೆದುಕೊಂಡವು ಎಂಬುದನ್ನು ನೀವೆಲ್ಲರೂ ನೋಡಿದ್ದೀರಿ. ನಮ್ಮ  ವಿಜ್ಞಾನಿಗಳು ಸಾಧನೆ ಮಾಡಿದಾಗಲೆಲ್ಲಾ ಅವರ ಬಗ್ಗೆ ಲಘುವಾಗಿ ಮಾತನಾಡಲು ಕಾಂಗ್ರೆಸ್ ಕಾರಣಗಳನ್ನು ಹುಡುಕುತ್ತಿರುತ್ತದೆ ಇಂತಹ ವಿಪಕ್ಷಗಳಿಗೆ ಪಾಠ ಕಲಿಸಿ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕ್ಯಾಬಿನೆಟ್ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT