ಸ್ಮೃತಿ ಇರಾನಿ 
ದೇಶ

ರಾಮ್ ಲಲ್ಲಾ ಮುಂದೆ ತಲೆಬಾಗದವರಿಗೆ ರಾಮ ಭಕ್ತರ ಮತ ಸಿಗುವುದಿಲ್ಲ: ಸ್ಮೃತಿ ಇರಾನಿ

ರಾಮ್ ಲಲ್ಲಾ ಮುಂದೆ ತಲೆಬಾಗದವರಿಗೆ ಶ್ರೀರಾಮನ ಭಕ್ತರ ಮತಗಳು ಸಿಗುವುದಿಲ್ಲ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು...

ಬದೌನ್: ರಾಮ್ ಲಲ್ಲಾ ಮುಂದೆ ತಲೆಬಾಗದವರಿಗೆ ಶ್ರೀರಾಮನ ಭಕ್ತರ ಮತಗಳು ಸಿಗುವುದಿಲ್ಲ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಟಾಂಗ್ ನೀಡಿದ್ದಾರೆ.
ನಿನ್ನೆಯಷ್ಟೇ ಅಯೋಧ್ಯಗೆ ಭೇಟಿ ನೀಡಿದ್ದ ಪ್ರಿಯಾಂಕಾ ಗಾಂಧಿ ವಿವಾದಿತ ರಾಮ್ ಲಲ್ಲಾ ದೇವಸ್ಥಾನಕ್ಕೆ ಭೇಟಿ ನೀಡದೆ, ಅದರ ಬಳಿ ಇದ್ದ ಗರ್ಹಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.
ಇಂದು ಉತ್ತರ ಪ್ರದೇಶ ಬದೌನ್ ನಲ್ಲಿ ಬಿಜೆಪಿ ರ್ಯಾಲಿ ಉದ್ದೇಶಿಸಿ ಮಾತನಾಡಿದ ಸ್ಮೃತಿ ಇರಾನಿ, ಈ ಜನರ ರಾಜಕಾರಣ ನೋಡಿ.... ಅವರು ಅಯೋಧ್ಯಗೆ ಹೋಗುತ್ತಾರೆ. ಆದರೆ ರಾಮ್ ಲಲ್ಲಾಗೆ ನಮಸ್ಕರಿಸುವುದಿಲ್ಲ. ಯಾರು ಮತಗಳನ್ನು ಕಳೆದುಕೊಳ್ಳುವ ಭಯದಿಂದ ರಾಮ್ ಲಲ್ಲಾಗೆ ತಲೆಬಾಗುವುದಿಲ್ಲವೋ ಅವರಿಗೆ ರಾಮ ಭಕ್ತರ ಮತಗಳು ಸಿಗುವುದಿಲ್ಲ ಎಂದು ಹೇಳಿದ್ದಾರೆ.
ಚುನಾವಣೆ ದಿನದಂದು ರಾಮ ಭಕ್ತರು ಮತಗಟ್ಟೆಗೆ ತೆರಳಿ ಅಭಿವೃದ್ಧಿ ನೋಡಿ ಮತ ಚಲಾಯಿಸುತ್ತಾರೆ ಎಂದು ಕೇಂದ್ರ ಜವಳಿ ಖಾತೆ ಸಚಿವೆ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT