ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ 
ದೇಶ

ವೇದಿಕೆಗಳು ಇರುವುದು ಭಜನೆ ಮಾಡುವುದಕ್ಕಲ್ಲ, ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಲು: ಯೋಗಿ ಆದಿತ್ಯನಾಥ್

ನಾವು ವೇದಿಕೆಗೆ ಭಜನೆ ಮಾಡಲು, ಭಕ್ತಿಗೀತೆ ಹಾಡಲು ಹೋಗುವುದಲ್ಲ, ವೇದಿಕೆ ಮೇಲೆ ನಿಂತು...

ಲಕ್ನೊ (ಉತ್ತರ ಪ್ರದೇಶ): ನಾವು ವೇದಿಕೆಗೆ ಭಜನೆ ಮಾಡಲು, ಭಕ್ತಿಗೀತೆ ಹಾಡಲು ಹೋಗುವುದಲ್ಲ, ವೇದಿಕೆ ಮೇಲೆ ನಿಂತು ವಿರೋಧ ಪಕ್ಷಗಳನ್ನು ಸೋಲಿಸಲು ಅವರ ವಿರುದ್ಧ ಪ್ರಬಲ ವಾಗ್ದಾಳಿ ನಡೆಸುವುದು ನಮ್ಮ ಉದ್ದೇಶವಾಗಿರುತ್ತದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಹಿನ್ನಲೆಯಲ್ಲಿ ಬಿರುಸಿನ ಪ್ರಚಾರ ನಡೆಸುವ ಸಂದರ್ಭದಲ್ಲಿ ಇತ್ತೀಚೆಗೆ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಸಂಬಂಧಪಟ್ಟಂತೆ ಚುನಾವಣಾ ಆಯೋಗ ಹೊರಡಿಸಿರುವ ಶೋಕಾಸ್ ನೊಟೀಸ್ ಗೆ ಸಂಬಂಧಪಟ್ಟಂತೆ ಎಎನ್ಐ ಸುದ್ದಿಸಂಸ್ಥೆಗೆ ಅವರು ಪ್ರತಿಕ್ರಿಯೆ ನೀಡಿದರು.
ವಿರೋಧ ಪಕ್ಷಗಳ ದೌರ್ಬಲ್ಯಗಳನ್ನು ಜನತೆ ಮುಂದಿಡುವುದು ನಮ್ಮ ಕೆಲಸ. ಕಾಂಗ್ರೆಸ್, ಸಮಾಜವಾದಿ ಪಕ್ಷ ಅಥವಾ ಬಹುಜನ ಸಮಾಜವಾದಿ ಪಕ್ಷದವರೇ ಆಗಿರಲಿ, ಚುನಾವಣೆ ಪ್ರಚಾರದ ವೇಳೆ ನಮ್ಮ ಬಗ್ಗೆ ಹೇಳಿದರೂ ನಾವು ತಲೆಕೆಡಿಸಿಕೊಳ್ಳುವುದಿಲ್ಲ. ನಾವು ಅದಕ್ಕೆ ತಕ್ಕ ಪ್ರತ್ಯುತ್ತರ ನೀಡಿದರೆ ಅದನ್ನು ತಪ್ಪು ಎಂದು ಏಕೆ ಹೇಳಬೇಕು ಎಂದು ಆದಿತ್ಯನಾಥ್ ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT