ಸ್ಮೃತಿ ಇರಾನಿ 
ದೇಶ

ಅಮೇಥಿಯಲ್ಲಿ ಮತಗಟ್ಟೆ ವಶಪಡಿಸಿಕೊಳ್ಳಲಾಗಿದೆ ಎಂಬ ಸ್ಮೃತಿ ಇರಾನಿ ಆರೋಪ ಸುಳ್ಳು: ಚುನಾವಣಾ ಆಯೋಗ

ಅಮೇಥಿ ಲೋಕಸಭಾ ಕ್ಷೇತ್ರದಲ್ಲಿ ಮತಗಟ್ಟೆಯನ್ನು ಕಾಂಗ್ರೆಸ್ ಕಾರ್ಯಕರ್ತರು ವಶೀಕರಣ ಮಾಡಿದ್ದಾರೆ ....

ಲಕ್ನೊ: ಅಮೇಥಿ ಲೋಕಸಭಾ ಕ್ಷೇತ್ರದಲ್ಲಿ ಮತಗಟ್ಟೆಯನ್ನು ಕಾಂಗ್ರೆಸ್ ಕಾರ್ಯಕರ್ತರು ವಶೀಕರಣ ಮಾಡಿದ್ದಾರೆ ಎಂದು ಕೇಂದ್ರ ಸಚಿವೆ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ಮಾಡಿರುವ ಆರೋಪ ಸುಳ್ಳು ಎಂದು ಉತ್ತರ ಪ್ರದೇಶದ ಮುಖ್ಯ ಚುನಾವಣಾಧಿಕಾರಿ ಲಕ್ಕು ವೆಂಕಟೇಶ್ವರಲು ಹೇಳಿದ್ದಾರೆ.
ಅವರು ನಿನ್ನೆ ಲಕ್ನೊದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮತಗಟ್ಟೆಯನ್ನು ಕಾಂಗ್ರೆಸ್ ಕಾರ್ಯಕರ್ತರು ವಶೀಕರಣ ಮಾಡಿದ್ದಾರೆ ಎಂದು ಹಿರಿಯ ಮಹಿಳೆಯೊಬ್ಬರು ಆರೋಪಿಸಿದ್ದಾರೆ ಎನ್ನಲಾದ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿರುವ ವಿಡಿಯೊ ಕ್ಲಿಪ್ ಆಧಾರರಹಿತ ಎಂದಿದ್ದಾರೆ.
ಸ್ಮೃತಿ ಇರಾನಿಯವರು ದೂರು ನೀಡಿದ ನಂತರ ಚುನಾವಣಾ ಆಯೋಗದ ವಲಯ ಅಧಿಕಾರಿ, ಹಿರಿಯ ಅಧಿಕಾರಿಗಳು ಮತ್ತು ವಿಚಕ್ಷಣಾಕಾರರು ಮತಗಟ್ಟೆಗಳಿಗೆ ತೆರಳಿ ರಾಜಕೀಯ ಪಕ್ಷಗಳ ಚುನಾವಣಾ ಏಜೆಂಟರ್ ಮತ್ತು ಮತಗಟ್ಟೆಗಳ ಅಧಿಕಾರಿಗಳ ಬಳಿ ಮಾತನಾಡಿಸಿದ್ದಾರೆ. ವಿಡಿಯೊ ಕ್ಲಿಪ್ ನಲ್ಲಿ ಮಹಿಳೆ ಸತ್ಯಕ್ಕೆ ದೂರವಾದ ಆಧಾರರಹಿತ ಆರೋಪಗಳನ್ನು ಹೊರಿಸುತ್ತಿದ್ದಾರೆ. ವಿಡಿಯೊದಲ್ಲಿ ಮಾಡಿರುವ ಆರೋಪಗಳ ಮೇಲ್ನೋಟದ ಮೇಲೆ ಚುನಾವಣೆಯ ಮತಗಟ್ಟೆ ಅಧಿಕಾರಿಯನ್ನು ವಜಾಗೊಳಿಸಲಾಗಿದ್ದು ತನಿಖೆ ಮುಂದುವರಿದಿದೆ ಎಂದರು.
ಅಮೇಥಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಹುಲ್ ಗಾಂಧಿ ಪರವಾಗಿ ಮತಗಟ್ಟೆಗಳನ್ನು ವಶೀಕರಣ ಮಾಡಿಕೊಳ್ಳಲಾಗಿದೆ ಎಂದು ಸ್ಮೃತಿ ಇರಾನಿ ಆರೋಪಿಸಿದ ನಂತರ ಹರಿದಾಡಿದ ವಿಡಿಯೊ ಕ್ಲಿಪ್ ನಿಂದ ವ್ಯಾಪಕ ವಿವಾದ ಸೃಷ್ಟಿಯಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

SCROLL FOR NEXT