ಎಂ ವೀರಪ್ಪ ಮೊಯ್ಲಿ 
ದೇಶ

ನಮಗೆಲ್ಲರಿಗೂ ಇರುವ ಸಾಮಾನ್ಯ ಶತ್ರು ನರೇಂದ್ರ ಮೋದಿ ಮತ್ತು ಎನ್ ಡಿಎ:ವೀರಪ್ಪ ಮೊಯ್ಲಿ

ತೆಲಂಗಾಣ ಮುಖ್ಯಮಂತ್ರಿ ಟಿಆರ್ ಎಸ್ ಅಧ್ಯಕ್ಷ ಕೆ ಚಂದ್ರಶೇಖರ್ ರಾವ್ ಅವರು ಪ್ರಾದೇಶಿಕ ಪಕ್ಷಗಳ ...

ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಟಿಆರ್ ಎಸ್ ಅಧ್ಯಕ್ಷ ಕೆ ಚಂದ್ರಶೇಖರ್ ರಾವ್ ಅವರು ಪ್ರಾದೇಶಿಕ ಪಕ್ಷಗಳ ಸಂಯುಕ್ತ ರಂಗ ರಚಿಸಲು ಪ್ರಯತ್ನಿಸುತ್ತಿರುವುದರಲ್ಲಿ ಯಾವ ತಪ್ಪೂ ಇಲ್ಲ, ಅವರ ನಡೆ ಬಿಜೆಪಿ ನೇತೃತ್ವದ ಎನ್ ಡಿಎಗೆ ವಿರುದ್ಧವಾಗಿದೆ ಎಂದು ಕಾಂಗ್ರೆಸ್ ನ ಹಿರಿಯ ನಾಯಕ ಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ.
ಪಿಟಿಐ ಸುದ್ದಿಸಂಸ್ಥೆ ಪ್ರತಿನಿಧಿ ಜೊತೆ ಮಾತನಾಡಿದ ಅವರು, ಚಂದ್ರಶೇಖರ್ ರಾವ್ ಅವರನ್ನು ಬಿಜೆಪಿಯೇತರ, ಕಾಂಗ್ರೆಸ್ಸೇತರ ಸ್ಥಳೀಯ ಪಕ್ಷಗಳ ಮುಖಂಡನಾಗಿ ಮುಂದೆ ತಳ್ಳುವುದರಲ್ಲಿ ಯಾವುದೇ ತಪ್ಪು ಇಲ್ಲ. ಅದರರ್ಥ ಚಂದ್ರಶೇಖರ್ ರಾವ್ ಎನ್ ಡಿಎಗೆ ವಿರುದ್ಧವಾಗಿದ್ದಾರೆ ಎಂದು. ನಮಗೆ ಅಷ್ಟು ಧಾರಾಳ ಸಾಕು. ಶಿವಸೇನೆ, ರಾಮ್ ವಿಲಾಸ್ ಪಾಸ್ವಾನ್ ಅವರ ಪಕ್ಷ ಹಾಗೂ ಇನ್ನು ಕೆಲ ಬೆರಳೆಣಿಕೆಯ ಪಕ್ಷಗಳು ಬಿಟ್ಟರೆ ಎನ್ ಡಿಎ ಬೆಂಬಲಕ್ಕೆ ಯಾರೂ ಇಲ್ಲ ಎಂದು ಹೇಳಿದರು.
ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಸುಮಾರು 200 ಸೀಟುಗಳು ದೊರಕಲಿದ್ದು ವಿರೋಧ ಪಕ್ಷಗಳಲ್ಲಿ ಅತಿದೊಡ್ಡ ಗೆಲುವಿನ ಪಕ್ಷವಾಗಿ ಹೊರಹೊಮ್ಮಲಿದೆ ಎಂದರು.
ರಾಜ್ಯದಿಂದ ರಾಜ್ಯಕ್ಕೆ ಚುನಾವಣಾ ವಿಶ್ಲೇಷಣೆ ಮಾಡಿದಾಗ ಎನ್ ಡಿಎ ಸರ್ಕಾರ ಈ ಬಾರಿ ಅಧಿಕಾರ ಕಳೆದುಕೊಳ್ಳಲಿದೆ ಎಂಬ ಸ್ಪಷ್ಟ ತೀರ್ಮಾನಕ್ಕೆ ಬರಬಹುದು. ವಿರೋಧ ಪಕ್ಷಗಳೆಲ್ಲ ಒಟ್ಟಾಗಿ ಸೇರಿ ಸರ್ಕಾರ ರಚಿಸಲಿದೆ ಎಂದು ಹೇಳಿದರು.
ವಿರೋಧ ಪಕ್ಷಗಳಲ್ಲಿ ಕಾಂಗ್ರೆಸ್ ಗೆ ಅತಿ ಹೆಚ್ಚಿನ ಸೀಟುಗಳು ಸಿಗಲಿದೆ. ಎಲ್ಲರಿಗೂ ಇರುವ ಸಾಮಾನ್ಯ ಶತ್ರು ನರೇಂದ್ರ ಮೋದಿಯವರು ಮತ್ತು ಎನ್ ಡಿಎ. ಹೀಗಾಗಿ ಯಾರೂ ಎನ್ ಡಿಎಗೆ ಸೇರಲು ಸಾಧ್ಯವಿಲ್ಲ. ಆಗ ವಿರೋಧ ಪಕ್ಷಗಳೆಲ್ಲಾ ಒಟ್ಟಾಗಿ ಖಂಡಿತಾ ಮೈತ್ರಿ ಸರ್ಕಾರವನ್ನು ರಚಿಸುತ್ತವೆ ಎಂದು ಭವಿಷ್ಯ ನುಡಿದರು.
ವಾರಣಾಸಿ ಕ್ಷೇತ್ರದಿಂದ ನರೇಂದ್ರ ಮೋದಿಯವರ ವಿರುದ್ಧ ಪ್ರಿಯಾಂಕಾ ಗಾಂಧಿ ವಾದ್ರಾ ನಿಲ್ಲದಿರುವ ತೀರ್ಮಾನ ತೆಗೆದುಕೊಂಡಿದ್ದು ಸರಿಯಾಗಿದೆ. ಅಲ್ಲಿ ಸ್ಪರ್ಧಿಸಿಯೇ ಅವರು ಆ ಕ್ಷೇತ್ರಕ್ಕೆ ಹತ್ತಿರವಾಗಬೇಕೆಂದಿಲ್ಲ. ಚುನಾವಣೆಯಲ್ಲಿ ಸ್ಪರ್ಧಿಸದೆ ಕೂಡ ಆ ಕ್ಷೇತ್ರದಲ್ಲಿ ಪ್ರಿಯಾಂಕಾ ಅವರು ಕೆಲಸ ಮಾಡಬಹುದು ಎಂದರು.
ಇಂದು ಕಾಂಗ್ರೆಸ್ ಗೆ ಪ್ರಿಯಾಂಕಾ ಅವರ ಸೇವೆ ಲಭ್ಯವಾಗಿದೆ. ಪ್ರತಿಯೊಂದು ಕಡೆ ಹೋಗಿ ಪ್ರಚಾರ ಮಾಡುತ್ತಿದ್ದಾರೆ, ಇದರಿಂದ ಪಕ್ಷಕ್ಕೆ ಹೆಚ್ಚಿನ ಲಾಭವಾಗಲಿದೆ ಎಂದು ಮೊಯ್ಲಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

SCROLL FOR NEXT