ನರೇಂದ್ರ ಮೋದಿ, ಮಮತಾ ಬ್ಯಾನರ್ಜಿ 
ದೇಶ

ದೀದಿ ನನಗೆ ಕಪಾಳಮೋಕ್ಷ ಮಾಡಿದರೆ ಅದನ್ನು ಆಶೀರ್ವಾದ ಎನ್ನುತ್ತೇನೆ: ಪ್ರಧಾನಿ ಮೋದಿ

ದೀದಿ ನನಗೆ ಕಪಾಳಮೋಕ್ಷ ಮಾಡಿದರೆ ನಾನು ಅದನ್ನು ಆರ್ಶೀವಾದ ಎಂದು ಭಾವಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು...

ಪುರುಲಿಯಾ: ದೀದಿ ನನಗೆ ಕಪಾಳಮೋಕ್ಷ ಮಾಡಿದರೆ ನಾನು ಅದನ್ನು ಆರ್ಶೀವಾದ ಎಂದು ಭಾವಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಗುರುವಾರ ತಿರುಗೇಟು ನೀಡಿದ್ದಾರೆ.
ಮಮತಾ ಬ್ಯಾನರ್ಜಿ ಅವರು ಇತ್ತೀಚಿಗಷ್ಟೇ ಪ್ರಧಾನಿ ಮೋದಿಗೆ ಪ್ರಜಾಪ್ರಭುತ್ವದ ಬಲವಾದ ಕಪಾಳಮೊಕ್ಷವಾಗಬೇಕು ಎಂದು ಹೇಳಿದ್ದರು. 
ಇಂದು ಪಶ್ಚಿಮ ಬಂಗಾಳದ ಪುರುಲಿಯಾದಲ್ಲಿ ಬಿಜೆಪಿ ರ್ಯಾಲಿ ಉದ್ದೇಶಿಸಿ ಮಾತನಾಡಿದ ಪ್ರಧಾನಿ, ‘ದೀದಿ ನನ್ನ ಕೆನ್ನೆಗೆ ಹೊಡೆಯಬೇಕು ಎಂದು ಹೇಳಿದ್ದಾರೆ. ಆದರೆ ಮಮತಾ ಅವರನ್ನು ನಾನು  ದೀದಿ ಎಂದು ಮಮತೆಯಿಂದ ಕರೆಯುತ್ತೇನೆ. ಗೌರವಿಸುತ್ತೇನೆ. ನಿಮ್ಮ ಹೊಡೆತ ನನಗೆ ಆಶೀರ್ವಾದವಿದ್ದಂತೆ ಎಂದು ತಿರುಗೇಟು ನೀಡಿದ್ದಾರೆ.
ಚಿಟ್​ಫಂಡ್ ಹಗರಣ​ಗಳ ಮೂಲಕ ಬಡವರ ಹಣ ಲೂಟಿ ಮಾಡಿದವರ ಕೆನ್ನೆಗೆ ಹೊಡೆಯುವ ಧೈರ್ಯ ನಿಮಗಿದೆಯೇ? ನಿಮಗೆ ತೋಲ್​ಬಾಜಿಯ (ಲೂಟಿ ಕೋರರು) ಕೆನ್ನೆಗೆ ಹೊಡೆಯುವ ಧೈರ್ಯ ನಿಮಗೆ ಇದೆಯೇ? ಎಂದು ಪ್ರಧಾನಿ ಮೋದಿ ಪ್ರಶ್ನಿಸಿದರು.
ಎರಡು ದಿನಗಳ ಹಿಂದೆ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ್ದ ಮಮತಾ ಬ್ಯಾನರ್ಜಿ, ‘ನನಗೆ ಹಣ ಮುಖ್ಯವಲ್ಲ. ಹಾಗಾಗಿಯೇ ಮೋದಿ ಅವರು ಬಂಗಾಳಕ್ಕೆ ಬಂದು ನಮ್ಮ ಪಕ್ಷ ತೊಲ್​ಬಾಜ್​ ಎಂದು ಆರೋಪಿಸಿದ್ದಾರೆ. ಹೀಗಾಗಿ ಅವರ ಕೆನ್ನೆಗೆ ಪ್ರಜಾಪ್ರಭುತ್ವದ ಬಲವಾದ ಹೊಡೆತ ನೀಡಬೇಕು ಎನಿಸುತ್ತಿದೆ ಎಂದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT