ಗೌತಮ್ ಗಂಭೀರ್-ಸುಬ್ರಮಣಿಯಂ ಸ್ವಾಮಿ 
ದೇಶ

ಗಂಭೀರ್ ಯಾಕೆ ಅಷ್ಟು ಗಂಭೀರಗೊಂಡಿದ್ದೀರಾ? ಕೆಲವೊಂದು ಬಿಟ್ಟುಬಿಡಿ ಸುಬ್ರಮಣಿಯಂ ಸ್ವಾಮಿ ಸಲಹೆ

ರಾಜಕೀಯದಲ್ಲಿ ಅಂಬೆ ಕಾಲಿಡುತ್ತಿರುವ ಗೌತಮ್ ಗಂಭೀರ್ ಯಾಕೆ ಅಷ್ಟು ಗಂಭೀರಗೊಂಡಿದ್ದೀರಾ? ಕೆಲವೊಂದನ್ನು ಅಲ್ಲಿಗೆ ಬಿಟ್ಟುಬಿಡಬೇಕು ಎಂದು ಬಿಜೆಪಿ ಹಿರಿಯ ಮುಖಂಡ ಸುಬ್ರಮಣಿಯಂ...

ನವದೆಹಲಿ: ರಾಜಕೀಯದಲ್ಲಿ ಅಂಬೆ ಕಾಲಿಡುತ್ತಿರುವ ಗೌತಮ್ ಗಂಭೀರ್ ಯಾಕೆ ಅಷ್ಟು ಗಂಭೀರಗೊಂಡಿದ್ದೀರಾ? ಕೆಲವೊಂದನ್ನು ಅಲ್ಲಿಗೆ ಬಿಟ್ಟುಬಿಡಬೇಕು ಎಂದು ಬಿಜೆಪಿ ಹಿರಿಯ ಮುಖಂಡ ಸುಬ್ರಮಣಿಯಂ ಸ್ವಾಮಿ ಸಲಹೆ ನೀಡಿದ್ದಾರೆ.
ಪೂರ್ವ ದೆಹಲಿ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೌತಮ್ ಗಂಭೀರ್ ಹಾಗೂ ಎಎಪಿ ನಡುವೆ ಅನಾಮಧೇಯ ಕರಪತ್ರ ಸಂಬಂಧ ವಾಕ್ಸಮರ ಶುರುವಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಸ್ವಾಮಿ ನಕ್ಸಲರು ಸೃಷ್ಟಿಸಿರುವ ಅನಾಮಧೇಯ ಕರಪತ್ರದ ಕುರಿತು ಗಂಭೀರ್ ಏಕೆ ಅಷ್ಟು ಗಂಭೀರವಾಗಿದ್ದೀರಾ? ಅದಕ್ಕಾಗಿ ಏಕೆ ಅಷ್ಟು ಸ್ಪಷ್ಟನೆ ನೀಡುತ್ತಿದ್ದೀರಾ? ಅವರು ಅದನ್ನು ಕಡೆಗಣಿಸಬೇಕು ಎಂದು ಸಲಹೆ ನೀಡಿದ್ದಾರೆ.
ಇನ್ನು ತಮ್ಮ ಟ್ವೀಟ್ ನಲ್ಲಿ ಮೂಲಕ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದರೆ ಕಡೆಗಣಿಸಿ ಎಂದಿದ್ದಾರೆ. ಈ ಮೂಲಕ ಚುನಾವಣಾ ಆಯೋಗವನ್ನು ಮೂಲಕ ಆಯೋಗ ಎಂದು ಸ್ವಾಮಿ ಟೀಕಿಸಿದ್ದಾರೆ.
ಆಪ್ ಅಭ್ಯರ್ಥಿ ಆತಿಶಿ ಅವರ ವಿರುದ್ಧ ಅಶ್ಲೀಲ ಕಮೆಂಟ್ ಗಳು ಇವೆ ಎನ್ನಲಾದ ಕರಪತ್ರ ಹಂಚಿಕೆ ವಿವಾದಕ್ಕೆ ಸಂಬಂಧಿಸಿ ಇದರಲ್ಲಿ ತಮ್ಮ ಕೈವಾಡ ಇದ್ದರೆ ಸಾರ್ವಜನಿಕವಾಗಿ ನೇಣು ಹಾಕಿಕೊಳ್ಳುತ್ತೇನೆ. ಸಾಬೀತುಪಡಿಸಲು ಸಾಧ್ಯವಾಗದಿದ್ದರೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ರಾಜಕೀಯ ತೊರೆಯಬೇಕು ಎಂದು ಗೌತಮ್ ಗಂಭೀರ್ ಸವಾಲು ಹಾಕಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!