ಗೌತಮ್ ಗಂಭೀರ್-ಸುಬ್ರಮಣಿಯಂ ಸ್ವಾಮಿ 
ದೇಶ

ಗಂಭೀರ್ ಯಾಕೆ ಅಷ್ಟು ಗಂಭೀರಗೊಂಡಿದ್ದೀರಾ? ಕೆಲವೊಂದು ಬಿಟ್ಟುಬಿಡಿ ಸುಬ್ರಮಣಿಯಂ ಸ್ವಾಮಿ ಸಲಹೆ

ರಾಜಕೀಯದಲ್ಲಿ ಅಂಬೆ ಕಾಲಿಡುತ್ತಿರುವ ಗೌತಮ್ ಗಂಭೀರ್ ಯಾಕೆ ಅಷ್ಟು ಗಂಭೀರಗೊಂಡಿದ್ದೀರಾ? ಕೆಲವೊಂದನ್ನು ಅಲ್ಲಿಗೆ ಬಿಟ್ಟುಬಿಡಬೇಕು ಎಂದು ಬಿಜೆಪಿ ಹಿರಿಯ ಮುಖಂಡ ಸುಬ್ರಮಣಿಯಂ...

ನವದೆಹಲಿ: ರಾಜಕೀಯದಲ್ಲಿ ಅಂಬೆ ಕಾಲಿಡುತ್ತಿರುವ ಗೌತಮ್ ಗಂಭೀರ್ ಯಾಕೆ ಅಷ್ಟು ಗಂಭೀರಗೊಂಡಿದ್ದೀರಾ? ಕೆಲವೊಂದನ್ನು ಅಲ್ಲಿಗೆ ಬಿಟ್ಟುಬಿಡಬೇಕು ಎಂದು ಬಿಜೆಪಿ ಹಿರಿಯ ಮುಖಂಡ ಸುಬ್ರಮಣಿಯಂ ಸ್ವಾಮಿ ಸಲಹೆ ನೀಡಿದ್ದಾರೆ.
ಪೂರ್ವ ದೆಹಲಿ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೌತಮ್ ಗಂಭೀರ್ ಹಾಗೂ ಎಎಪಿ ನಡುವೆ ಅನಾಮಧೇಯ ಕರಪತ್ರ ಸಂಬಂಧ ವಾಕ್ಸಮರ ಶುರುವಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಸ್ವಾಮಿ ನಕ್ಸಲರು ಸೃಷ್ಟಿಸಿರುವ ಅನಾಮಧೇಯ ಕರಪತ್ರದ ಕುರಿತು ಗಂಭೀರ್ ಏಕೆ ಅಷ್ಟು ಗಂಭೀರವಾಗಿದ್ದೀರಾ? ಅದಕ್ಕಾಗಿ ಏಕೆ ಅಷ್ಟು ಸ್ಪಷ್ಟನೆ ನೀಡುತ್ತಿದ್ದೀರಾ? ಅವರು ಅದನ್ನು ಕಡೆಗಣಿಸಬೇಕು ಎಂದು ಸಲಹೆ ನೀಡಿದ್ದಾರೆ.
ಇನ್ನು ತಮ್ಮ ಟ್ವೀಟ್ ನಲ್ಲಿ ಮೂಲಕ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದರೆ ಕಡೆಗಣಿಸಿ ಎಂದಿದ್ದಾರೆ. ಈ ಮೂಲಕ ಚುನಾವಣಾ ಆಯೋಗವನ್ನು ಮೂಲಕ ಆಯೋಗ ಎಂದು ಸ್ವಾಮಿ ಟೀಕಿಸಿದ್ದಾರೆ.
ಆಪ್ ಅಭ್ಯರ್ಥಿ ಆತಿಶಿ ಅವರ ವಿರುದ್ಧ ಅಶ್ಲೀಲ ಕಮೆಂಟ್ ಗಳು ಇವೆ ಎನ್ನಲಾದ ಕರಪತ್ರ ಹಂಚಿಕೆ ವಿವಾದಕ್ಕೆ ಸಂಬಂಧಿಸಿ ಇದರಲ್ಲಿ ತಮ್ಮ ಕೈವಾಡ ಇದ್ದರೆ ಸಾರ್ವಜನಿಕವಾಗಿ ನೇಣು ಹಾಕಿಕೊಳ್ಳುತ್ತೇನೆ. ಸಾಬೀತುಪಡಿಸಲು ಸಾಧ್ಯವಾಗದಿದ್ದರೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ರಾಜಕೀಯ ತೊರೆಯಬೇಕು ಎಂದು ಗೌತಮ್ ಗಂಭೀರ್ ಸವಾಲು ಹಾಕಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

SCROLL FOR NEXT