ಆಲ್ವಾರ್ ಗ್ಯಾಂಗ್ ರೇಪ್: ಕಾಂಗ್ರೆಸ್ ಮೈತ್ರಿಗೆ ತೊರೆಯಲು ಹಿಂಜರಿಯಲ್ಲ- ಮೋದಿಗೆ ಮಾಯಾವತಿ 
ದೇಶ

ಆಲ್ವಾರ್ ಗ್ಯಾಂಗ್ ರೇಪ್: ಕಾಂಗ್ರೆಸ್ ಮೈತ್ರಿ ತೊರೆಯಲು ಹಿಂಜರಿಯಲ್ಲ- ಮೋದಿಗೆ ಮಾಯಾವತಿ

ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರದೊಂದಿಗಿನ ಮೈತ್ರಿ ತೊರೆಯುವ ಸಂದರ್ಭ ಎದುರಾದರೆ ಖಂಡಿತವಾಗಿಯೂ ಮೈತ್ರಿಯಿಂದ ಹೊರಬರುವುದಕ್ಕೆ ತಮ್ಮ ಪಕ್ಷ ಸಿದ್ಧವಿದೆ ಎಂದು ಬಿಎಸ್ ಪಿ ನಾಯಕಿ

ನವದೆಹಲಿ: ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರದೊಂದಿಗಿನ ಮೈತ್ರಿ ತೊರೆಯುವ ಸಂದರ್ಭ ಎದುರಾದರೆ ಖಂಡಿತವಾಗಿಯೂ ಮೈತ್ರಿಯಿಂದ ಹೊರಬರುವುದಕ್ಕೆ ತಮ್ಮ ಪಕ್ಷ ಸಿದ್ಧವಿದೆ ಎಂದು ಬಿಎಸ್ ಪಿ ನಾಯಕಿ ಮಾಯಾವತಿ ಮೋದಿಗೆ ಹೇಳಿದ್ದಾರೆ. 
ರಾಜಸ್ಥಾನದ ಆಲ್ವಾರ್ ನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣವನ್ನು ತಮ್ಮ ಚುನಾವಣಾ ಭಾಷಣದಲ್ಲಿ ಪ್ರಸ್ತಾಪಿಸಿದ್ದ ಮೋದಿ, ದಲಿತ ಮಹಿಳೆಯ ಮೇಲೆ ರಾಜ್ಯದಲ್ಲಿ ಗ್ಯಾಂಗ್ ರೇಪ್ ನಡೆದರೂ ಸಹ ರಾಜಸ್ಥಾನದಲ್ಲಿ ಕಾಂಗ್ರೆಸ್ ಗೆ ಸರ್ಕಾರ ನಡೆಸಲು ಬಿಎಸ್ ಪಿ ಬೆಂಬಲ ಮುಂದುವರೆಸಿರುವುದನ್ನು ಪ್ರಶ್ನಿಸಿದ್ದರು. 
ಪ್ರಧಾನಿ ಮೋದಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಮಾಯಾವತಿ, ಈ ಅತ್ಯಾಚಾರದ ಘಟನೆಯನ್ನು ರಾಜಕೀಯಗೊಳಿಸಬಾರದು ಎಂದು ಹೇಳಿದ್ದಾರೆ. ಪ್ರಧಾನಿ ಈ ವಿಷಯವನ್ನು ರಾಜಕೀಯಕ್ಕೆ ಬಳಸಿಕೊಳ್ಳಬಾರದು. 
ಘಟನೆಗೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ಸರ್ಕಾರ ವಿಫಲವಾಗಿ ಅಗತ್ಯ ಸಂದರ್ಭ ಎದುರಾದರೆ ಬಿಎಸ್ ಪಿ ಕಾಂಗ್ರೆಸ್ ಸರ್ಕಾರಕ್ಕೆ ನೀಡಿರುವ ಬೆಂಬಲ ವಾಪಸ್ ಪಡೆಯುವುದಕ್ಕೂ ಸಿದ್ಧವಿದೆ ಎಂದು ಮಾಯಾವತಿ ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT